Categories: ಕೋಲಾರ

ಉತ್ತಮ ಸಮಾಜದ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಬಹುಮುಖ್ಯವಾಗಿದೆ- ನಸೀರ್ ಅಹಮದ್

ಕೋಲಾರ: ಉತ್ತರ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದ್ದು ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಉತ್ತಮ ಸಂಸ್ಕಾರ, ಜ್ಞಾನ ಸಂಪತ್ತನ್ನು ಪಡೆದು ಉತ್ತಮ ನಾಗರಿಕರಾಗಬೇಕು ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಅಭಿಪ್ರಾಯಪಟ್ಟರು.

ನಗರದ ಮಹಿಳಾ ಸಮಾಜ ಕಾಲೇಜಿನಲ್ಲಿ ಗುರುವಾರ ನಡೆದ ಶಿಕ್ಷಕರ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು ಹಿಂದಿನ ಕಾಲದಲ್ಲಿ ಓದಲಿಕ್ಕೆ ಪೂರಕವಾದ ವಾತಾವರಣ ಇರಲಿಲ್ಲ ಇವತ್ತು ಕಣ್ಣು ಮುಂದೆ ತಂತ್ರಜ್ಞಾನವನ್ನು ನೋಡಬಹುದಾದ ಸಂದರ್ಭದಲ್ಲಿ ನಾವು ಇದ್ದೇವೆ ಬೇರೆ ಬೇರೆ ದೇಶಗಳಲ್ಲಿ ನಡೆಯುವ ವಿಚಾರಗಳನ್ನು ನೋಡಬಹುದು ಮೊದಲು ಅಲ್ಲಿಗೆ ಹೋಗಬೇಕಾಗಿತ್ತು ಇವತ್ತು ಇಲ್ಲೇ ಅಂತಹ ಅವಕಾಶಗಳು ಇವೆ ಕಾಲೇಜುಗಳಲ್ಲಿ ಹೊಸ ಹೊಸ ಕೋರ್ಸ್ ಗಳ ಜೊತೆಗೆ ಸೌಲಭ್ಯಗಳನ್ನು ಕೊಡುವ ಕೆಲಸ ನಡೆಯುತ್ತಿದೆ ಎಂದರು.

ಹಿಂದೆ ಕೋಲಾರ ಜಿಲ್ಲೆ ಎಂದರೆ ಸಿವಿಲ್ ಸರ್ವಿಸ್ ಹುದ್ದೆಗಳ ತವರು ಮನೆಯಾಗಿತ್ತು ಎಲ್ಲಾ ಇಲಾಖೆಗಳಲ್ಲಿ ಜಿಲ್ಲೆಯ ಅಧಿಕಾರಿ ವರ್ಗ ಇತ್ತು ಅಂತಹ ಸಂದರ್ಭ ಮತ್ತೆ ಬರಬೇಕಾದರೆ ನೀವು ಎಲ್ಲರೂ ಶಿಸ್ತುನಿಂದ ಕಲಿಯಬೇಕು ಸಾಧನೆ ಮಾಡುವವರು ನಿಮ್ಮಲ್ಲಿ ಸಹ ಇದ್ದಾರೆ ಅದರೆ ಸಾಧಿಸುವ ಛಲ ಬರಬೇಕಾಗಿದೆ ಕಾಲೇಜುಗಳಲ್ಲಿ ಹೆಚ್ಚಾಗಿ ಕೌಶಲ್ಯಕ್ಕೆ ಸಂಬಂಧಿಸಿದ ತರಬೇತಿ ಕೋರ್ಸುಗಳನ್ನು ತೆರೆದು ಓದಿನ ನಂತರ ನೇರವಾಗಿ ಉದ್ಯೋಗ ಸಿಗುವಂತಾಗಬೇಕು ಎಂದರು.

ಕಾರ್ಯಕ್ರಮದಲ್ಲಿ ಶಾಸಕ ಕೊತ್ತೂರು ಮಂಜುನಾಥ್ ಮಾತನಾಡಿ ವಿಧ್ಯಾರ್ಥಿಗಳೇ ದೇಶದ ಆಸ್ತಿಯಾಗಿದ್ದಾರೆ ಗುರುಗಳ ಮಾರ್ಗದರ್ಶನದಲ್ಲಿ ನೀವು ಎಲ್ಲರ ಒಳ್ಳೆಯ ಹೆಸರು ಗಳಿಸಬೇಕು ಸಾಧನೆ ಎಲ್ಲರೂ ಮಾಡಬಹುದು ಅದಕ್ಕೆ ಪರಿಶ್ರಮ ಮುಖ್ಯ ಸಾಧನೆ ಮಾಡಿದಾಗ ನಿಮ್ಮ ತಂದೆತಾಯಿಯ ಜೊತೆಗೆ ವಿದ್ಯೆ ಕಲಿಸಿದ ಗುರುಗಳಿಗೂ ಗೌರವ ಸಿಗುತ್ತದೆ ಶಿಕ್ಷಣ, ಆರೋಗ್ಯ, ಉದ್ಯೋಗ, ಕೃಷಿಗೆ ಹೆಚ್ಚಿನ ಅಧ್ಯತೆ ನೀಡಲಾಗುತ್ತದೆ ಎಂದರು.

ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ ಶಿಕ್ಷಕರು ಸಹ ದೇಶದ ಪ್ರಥಮ ಪ್ರಜೆಯಾಗಬಹುದು ಎಂಬುದನ್ನು ಸರ್ವಪಲ್ಲಿ ರಾಧಾಕೃಷ್ಣನ್ ತೋರಿಸಿದ್ದಾರೆ ಅವರ ನಡುವಳಿಕೆ ವ್ಯಕ್ತಿತ್ವ ಮತ್ತು ಸಾಧನೆ ನಮಗೆ ಸ್ಪೂರ್ತಿಯಾಗಬೇಕು ಸಾಧನೆ ಮಾಡಿದ ಮಹನೀಯರ ದಾರಿಯಲ್ಲಿ ನಡೆದಾಗ ನಮಗೂ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಮಹಿಳಾ ಸಮಾಜ ಆಡಳಿತಾಧಿಕಾರಿ ಎಂ.ನವೀನಾ, ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ, ಸದಸ್ಯರಾದ ರಾಕೇಶ್, ಅಂಬರೀಷ್, ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ವೈ ಶಿವಕುಮಾರ್, ಬೆಂಗಳೂರು ಉತ್ತರ ವಿವಿ ಸಿಂಡಿಕೇಟ್ ಸದಸ್ಯರಾದ ಸೀಸಂದ್ರ ಗೋಪಾಲಗೌಡ, ಅರ್ಬಾಜ್ ಪಾಷ, ಜೈದೀಪ್, ಕುಡಾ ಅಧ್ಯಕ್ಷ ಮಹಮ್ಮದ್ ಹನೀಫ್, ಮುಖಂಡರಾದ ಗಂಗಣ್ಣ, ಕುರಿಗಳ ರಮೇಶ್ ಅಬ್ದುಲ್ ಖಯ್ಯೂಂ, ಮಹಿಳಾ ಸಮಾಜ ಕಾಲೇಜಿನ ಕಾರ್ಯದರ್ಶಿ ಎಂ.ನಂದನಾ, ಉಪಾಧ್ಯಕ್ಷೆ ಲಕ್ಷ್ಮೀ ಚಂದ್ರಪ್ಪ, ಖಜಾಂಚಿ ಪದ್ಮ, ಸಂಸ್ಥೆಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಶ್ರೀನಿವಾಸ್ ಮುಂತಾದವರು ಇದ್ದರು.

Ramesh Babu

Journalist

Recent Posts

ಕಸ್ತೂರಿ ರಂಗನ್ ವರದಿ; ‘ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ’- ಸಿಎಂ ಡಿ.ಕೆ ಶಿವಕುಮಾರ್ ಹೇಳಿಕೆ

ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನಲ್ಲಿ ಇಂದು ನಡೆದ ಕಸ್ತೂರಿ ರಂಗನ್ ವರದಿ ಕುರಿತ ಸಾರ್ವಜನಿಕ ಸಭೆಯಲ್ಲಿ  ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು…

9 hours ago

ಜಿಲ್ಲಾಸ್ಪತ್ರೆಯ ಅವ್ಯವಸ್ಥೆ ಸರಿಪಡಿಸಲು ರೈತ ಸಂಘ ಆಗ್ರಹ

ಕೋಲಾರ : ನಗರದ ಶ್ರೀ ನರಸಿಂಹರಾಜ ಜಿಲ್ಲಾ ಆಸ್ಪತ್ರೆಯಲ್ಲಿ ಬಡ ರೋಗಿಗಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವುದು, ಖಾಸಗಿ…

10 hours ago

ಶಿಷ್ಟಾಚಾರ ವಿವಾದಕ್ಕೆ ಮತ್ತಷ್ಟು ಕಾವು: ಶಾಸಕರಿಗೆ ಕಾನೂನು, ಶಿಷ್ಟಾಚಾರದ ಅರಿವಿಲ್ಲ- ಶಾಸಕ ಧೀರಜ್ ಮುನಿರಾಜ್ ವಿರುದ್ಧ ಮಾಜಿ ಶಾಸಕ ವೆಂಕಟರಮಣಯ್ಯ ವಾಗ್ದಾಳಿ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಕ್ಷೇತ್ರದ ಹಾಲಿ ಶಾಸಕ ಧೀರಜ್ ಮುನಿರಾಜು ಹಾಗೂ ಮಾಜಿ ಶಾಸಕ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರ (ಡಿಪಿಎ) ಅಧ್ಯಕ್ಷ…

11 hours ago

ಕುಡಿಯುವ ನೀರು, ಮೇವಿಗೆ ಮುಂಜಾಗ್ರತೆ ವಹಿಸಿ: ನಿಗದಿತ ಅವಧಿಯೊಳಗೆ ಬಡವರಿಗೆ ಸೂರು, ಸೈಟ್ ವಿತರಿಸಲು ಸಿದ್ಧತೆ ಮಾಡಿಕೊಳ್ಳಿ- ಸಚಿವ ಕೆ.ಎಚ್ ಮುನಿಯಪ್ಪ

ಎಲ್ಲಾ ವರ್ಗದ ಬಡವರಿಗೆ ಸೂರು, ಸೈಟ್ ನೀಡುವುದು ನಮ್ಮ ಸರ್ಕಾರದ ಗುರಿಯಾಗಿದ್ದು ದೇವನಹಳ್ಳಿ ತಾಲ್ಲೂಕು ವ್ಯಾಪ್ತಿಯಲ್ಲಿ ಅರ್ಹ ಫಲಾನುಭವಿಗಳಿಗೆ ನಿವೇಶನ,…

13 hours ago

ಶಿಷ್ಟಾಚಾರದ ಹೆಸರಲ್ಲಿ ವಾಗ್ಯುದ್ಧ: ಹಾಲಿ ಶಾಸಕ ಧೀರಜ್ ಮುನಿರಾಜು–ಮಾಜಿ ಶಾಸಕ ವೆಂಕಟರಮಣಯ್ಯ ನಡುವೆ ಬಹಿರಂಗ ಕಿತ್ತಾಟ

ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ರಾಜಕೀಯದಲ್ಲಿ ಹಾಲಿ ಶಾಸಕ ಧೀರಜ್ ಮುನಿರಾಜು ಹಾಗೂ ಮಾಜಿ ಶಾಸಕ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ…

19 hours ago

ನಿಷೇಧದ ನಡುವೆಯೂ ಡಿಜೆ ಬಳಕೆ: ವಾಹನ ವಶ, ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ಜಿಲ್ಲೆಯಲ್ಲಿ ಡಿಜೆ ಬಳಕೆಗೆ ನಿಷೇಧವಿದ್ದರೂ ಗಣೇಶೋತ್ಸವ ಮೆರವಣಿಗೆಯಲ್ಲಿ ಡಿಜೆ ಬಳಸಿದ ಆರೋಪದ ಮೇರೆಗೆ ಡಿಜೆ ವಾಹನವನ್ನು ಜಪ್ತಿ ಮಾಡಿರುವ…

1 day ago