Categories: Home

“ಉತ್ತರ ಕರ್ನಾಟಕದ ಗ್ರಾಮೀಣ ನಾಗರ ಪಂಚಮಿ: ಹೆಣ್ಮಕ್ಕಳ ಜೋಕಾಲಿ ಸಂಭ್ರಮ”

ಭಾರತೀಯರು ಹಬ್ಬ-ಹರಿದಿನಗಳ ಪ್ರಿಯರು ಒಂದೋದು ಹಬ್ಬಕ್ಕೆ ತನ್ನದೇಯಾದ ವೈಶಿಷ್ಟತೆಯನ್ನು ನೀಡುತ್ತಾ, ಭಕ್ತಿ-ಭಾವದಿಂದ ನೂರಾರು ತಲೆಮಾರುಗಳಿಂದ ಆಚರಿಸಿಕೊಂಡು ಬರುತ್ತಿದ್ದಾರೆ. ಅದರಲ್ಲಿ ಉತ್ತರ ಕರ್ನಾಟಕದ ಗ್ರಾಮೀಣ ಪ್ರದೇಶದಲ್ಲಂತು ನಾಗರ ಪಂಚಮಿ ಹಬ್ಬವನ್ನ ಸಡಗರ, ಸಂಭ್ರಮದಿಂದ ಹೆಣ್ಮಕ್ಕಳು ಜೋಕಾಲಿಯಲ್ಲಿ ಜಿಕಿಕೊಂಡು ಆಚರಿಸುವ ಹಬ್ಬವಷ್ಟೆ ಅಲ್ಲದೇ ಇದು ಸಹೋದರತ್ವದ ಬಾಂಧವ್ಯ ಬೆಸೆಯುವಂತಹ ಮಹತ್ವಪೂರ್ಣ ನಾಡಿನ ದೊಡ್ಡ ಹಬ್ಬವಿದಾಗಿದೆ.

ಈ ನಾಗರ ಪಂಚಮಿ ಹಬ್ಬ ಸಮಿಪಿಸುತ್ತಿದಂತೆ ಗಂಡನ ಮನೆಯಲ್ಲಿರುವ ಪ್ರತಿ ಹೆಣ್ಮಕ್ಕಳ ಮುಖದಲ್ಲಿ ಎಲ್ಲಿಲ್ಲದ ಸಂತಸ ಕಾಣಬಹುದು. ಏಕೆಂದರೆ ಸಹೋದರನಾದವನು ಸಹೋದರಿಯ ಗಂಡನ ಮನೆಗೆ ಹೋಗಿ ಪಂಚಮಿ ಹಬ್ಬಕ್ಕೆ ಕರೆತರುವದು ಪುರಾತನ ಕಾಲದಿಂದಲ್ಲೂ ವಾಡಿಕೆಯಾಗಿ ಬಂದಿದೆ. ಅದಕ್ಕೆ ಪ್ರತಿ ಹೆಣ್ಮಕ್ಕಳಲ್ಲಿ ಪಂಚಮಿಯ ಸಂಭ್ರಮ ಮನೆ ಮಾಡಿರುತ್ತದೆ.

ಈ ದಿನದಂದು ಸಹೋದರಿಯರು ತಮ್ಮ ಸಹೋದರರಿಗೆ ಬೆಳಿಗ್ಗೆ ಎದ್ದೊಡನೆ ಮೈತುಂಬಾ ಎಣ್ಣೆ-ಜೋಳದ ಹಿಟ್ಟು ಹಚ್ಚಿ ಸ್ನಾನ ಮಾಡಿಸುವುದು ಹಿಂದಿನಿಂದ ಬಂದ ವಾಡಿಕೆ. ನಾಡಿನಾದ್ಯಂತ ಮಹಿಳೆಯರು ಹಾಗೂ ಪುಟ್ಟ ಹೆಣ್ಮಕ್ಕಳು ಹೊಸ ಬಟ್ಟೆ ತೊಟ್ಟು ಗ್ರಾಮದಲ್ಲಿರುವ ನಾಗರ ಕಟ್ಟೆಗಳಿಗೆ ತೆರಳಿ, ಶ್ರದ್ಧಾ-ಭಕ್ತಿಯಿಂದ ನಾಗ ದೇವತೆಯ ಪ್ರತಿಮೆ-ಹುತ್ತಕ್ಕೆ ಹಾಲೆರೆದು, ಹೋಳಿಗೆ ನೈವೇದ್ಯ ಅರ್ಪಿಸುವ ಮುಖಾಂತರ ತಮ್ಮ ಸಹೋದರನ ಆಯುಷ್ಯ-ಆರೋಗ್ಯ ನೂರೂ ಕಾಲ ವೃದ್ಧಿಸಲೆಂದು ಮೊರೆ ಇಡುತ್ತಾರೆ.

ತದನಂತರದಲ್ಲಿ ತಮ್ಮ ಮನೆಗಳಲ್ಲಿ ರವೆ-ಶೇಂಗಾ ಉಂಡೆ, ಕಾರಚಿಕಾಯಿ, ಚಕಲಿ, ಕರದಂಟು, ಚುಡಾ ಹೀಗೆ ವಿವಿಧ ಖಾದ್ಯಗಳ ತಿನಿಸು ತಿಂದು ಜೋಕಾಲಿ ಜಿಕಿಕೊಂಡ ಎಂಜಾಯ್ ಮಾಡುವ ಹಬ್ಬ. ಈ ದಿನ ಗ್ರಾಮೀಣ ಪ್ರದೇಶದಲ್ಲಿ ಸಂಜೆ ಹೊತ್ತಿಗೆ ಸಂಗ್ರಾಣಿ ಕಲ್ಲು ಎತ್ತುವುದು, ಬಂಡಿ ಎಳೆಯುವುದು, ಬಾರವಾದ ಕಲ್ಲು ಎತ್ತುವುದು, ಲಿಂಬು ಹಣ್ಣು ಚಮಚದಲ್ಲಿಟ್ಟುಕೊಂಡು ಓಡುವುದು. ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಕಣ್ಣಾಮುಚ್ಚಾಲೆ ಪುರುಷರು ಆಡಿದರೆ, ಇನ್ನೂ ಮಹಿಳೆಯರು ಜೋಕಾಲಿಯಲ್ಲಿ ಜಿಕುವ, ಹಾಡು ಹಾಡುವ ಮೂಲಕ ಇಂತಹ ಗ್ರಾಮೀಣ ಆಟಗಳನ್ನು ಆಡಿ ಹಬ್ಬದ ಖುಷಿ ಸಂಭ್ರಮಿಸುವರು.

ಈ ಬಾರಿ ಮುಂಗಾರು ಮಳೆ-ಬೆಳೆಯ ಕೊರತೆ ಜತೆಗೆ ಅಗತ್ಯ ವಸ್ತುಗಳ ಬೆಲೆ ಏರಿಕೆಯ ನಡುವೆಯೂ ನಾಗರ ಪಂಚಮಿ ಹಬ್ಬಕ್ಕೆ ಜನರು ಸಿಹಿ ತಿಂಡಿ-ತಿನಿಸುಗಳನ್ನು ತಯಾರಿಸಲು ಸಾಮಾಗ್ರಿ ಖರೀದಿ ಜೋರಾಗಿಯೇ ಮಾಡುತ್ತಿದ್ದಾರೆ.

ವರದಿ: ರೇವಣಸಿದ್ದ ಬಗಲಿ (ಬೆಂಗಳೂರು ಗ್ರಾಮಾಂತರ ಜಿಲ್ಲೆ)

Ramesh Babu

Journalist

Recent Posts

18 ದೇವಸ್ಥಾನಗಳಿಗೆ ಕನ್ನ ಹಾಕಿದ್ದ ಖದೀಮರ ಬಂಧನ: ಲಕ್ಷಾಂತರ ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು, ಗುಂಡುಗಳು ವಶ

  18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು‌ ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…

3 minutes ago

ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯಕ್ಕೆ ಎಂಬಿಎ ವಿದ್ಯಾರ್ಥಿ ಸಾವು

ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…

31 minutes ago

ಮೊಬೈಲ್ ನೋಡುತ್ತಾ ಕುಳಿತಿದ್ದ 21 ವರ್ಷದ ಯುವಕನಿಗೆ ಚಾಕು ಇರಿತ: ಚಾಕು ಇರಿತ ವಿಡಿಯೋ ಸಿಸಿಟಿವಿಯಲ್ಲಿ ಸೆರೆ

ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…

4 hours ago

ರಾಹುಲ್ ಗಾಂಧಿ ಸೈದ್ಧಾಂತಿಕ ಬದ್ಧತೆಯಿರುವ ವ್ಯಕ್ತಿ….

ರಾಹುಲ್ ಗಾಂಧಿ...... ಬಿಹಾರ ಚುನಾವಣೆಯಲ್ಲಿ, ಸೀಟುಗಳ ಲೆಕ್ಕದಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ನಂತರ ಶ್ರೀ ರಾಹುಲ್ ಗಾಂಧಿಯವರ ನಾಯಕತ್ವದ ಸಾಮರ್ಥ್ಯದ…

6 hours ago

ಇಬ್ಬರು ಏರೋಸ್ಪೇಸ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕಾಲೇಜಲ್ಲಿ ಶೋಕಿ ಮಾಡೋ ಖಯಾಲಿ: ಆದ್ರೆ ಜೇಬಲ್ಲಿ ಕಾಂಚಾಣ ಇಲ್ಲ: ಕಾಸಿಗಾಗಿ ಏನು ಮಾಡಿದ್ರು ಗೊತ್ತಾ……

ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…

19 hours ago

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಹೀಲಿನ್ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಸಣಾ ಶಿಬಿರ

ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…

19 hours ago