Categories: Home

“ಉತ್ತರ ಕರ್ನಾಟಕದ ಗ್ರಾಮೀಣ ನಾಗರ ಪಂಚಮಿ: ಹೆಣ್ಮಕ್ಕಳ ಜೋಕಾಲಿ ಸಂಭ್ರಮ”

ಭಾರತೀಯರು ಹಬ್ಬ-ಹರಿದಿನಗಳ ಪ್ರಿಯರು ಒಂದೋದು ಹಬ್ಬಕ್ಕೆ ತನ್ನದೇಯಾದ ವೈಶಿಷ್ಟತೆಯನ್ನು ನೀಡುತ್ತಾ, ಭಕ್ತಿ-ಭಾವದಿಂದ ನೂರಾರು ತಲೆಮಾರುಗಳಿಂದ ಆಚರಿಸಿಕೊಂಡು ಬರುತ್ತಿದ್ದಾರೆ. ಅದರಲ್ಲಿ ಉತ್ತರ ಕರ್ನಾಟಕದ ಗ್ರಾಮೀಣ ಪ್ರದೇಶದಲ್ಲಂತು ನಾಗರ ಪಂಚಮಿ ಹಬ್ಬವನ್ನ ಸಡಗರ, ಸಂಭ್ರಮದಿಂದ ಹೆಣ್ಮಕ್ಕಳು ಜೋಕಾಲಿಯಲ್ಲಿ ಜಿಕಿಕೊಂಡು ಆಚರಿಸುವ ಹಬ್ಬವಷ್ಟೆ ಅಲ್ಲದೇ ಇದು ಸಹೋದರತ್ವದ ಬಾಂಧವ್ಯ ಬೆಸೆಯುವಂತಹ ಮಹತ್ವಪೂರ್ಣ ನಾಡಿನ ದೊಡ್ಡ ಹಬ್ಬವಿದಾಗಿದೆ.

ಈ ನಾಗರ ಪಂಚಮಿ ಹಬ್ಬ ಸಮಿಪಿಸುತ್ತಿದಂತೆ ಗಂಡನ ಮನೆಯಲ್ಲಿರುವ ಪ್ರತಿ ಹೆಣ್ಮಕ್ಕಳ ಮುಖದಲ್ಲಿ ಎಲ್ಲಿಲ್ಲದ ಸಂತಸ ಕಾಣಬಹುದು. ಏಕೆಂದರೆ ಸಹೋದರನಾದವನು ಸಹೋದರಿಯ ಗಂಡನ ಮನೆಗೆ ಹೋಗಿ ಪಂಚಮಿ ಹಬ್ಬಕ್ಕೆ ಕರೆತರುವದು ಪುರಾತನ ಕಾಲದಿಂದಲ್ಲೂ ವಾಡಿಕೆಯಾಗಿ ಬಂದಿದೆ. ಅದಕ್ಕೆ ಪ್ರತಿ ಹೆಣ್ಮಕ್ಕಳಲ್ಲಿ ಪಂಚಮಿಯ ಸಂಭ್ರಮ ಮನೆ ಮಾಡಿರುತ್ತದೆ.

ಈ ದಿನದಂದು ಸಹೋದರಿಯರು ತಮ್ಮ ಸಹೋದರರಿಗೆ ಬೆಳಿಗ್ಗೆ ಎದ್ದೊಡನೆ ಮೈತುಂಬಾ ಎಣ್ಣೆ-ಜೋಳದ ಹಿಟ್ಟು ಹಚ್ಚಿ ಸ್ನಾನ ಮಾಡಿಸುವುದು ಹಿಂದಿನಿಂದ ಬಂದ ವಾಡಿಕೆ. ನಾಡಿನಾದ್ಯಂತ ಮಹಿಳೆಯರು ಹಾಗೂ ಪುಟ್ಟ ಹೆಣ್ಮಕ್ಕಳು ಹೊಸ ಬಟ್ಟೆ ತೊಟ್ಟು ಗ್ರಾಮದಲ್ಲಿರುವ ನಾಗರ ಕಟ್ಟೆಗಳಿಗೆ ತೆರಳಿ, ಶ್ರದ್ಧಾ-ಭಕ್ತಿಯಿಂದ ನಾಗ ದೇವತೆಯ ಪ್ರತಿಮೆ-ಹುತ್ತಕ್ಕೆ ಹಾಲೆರೆದು, ಹೋಳಿಗೆ ನೈವೇದ್ಯ ಅರ್ಪಿಸುವ ಮುಖಾಂತರ ತಮ್ಮ ಸಹೋದರನ ಆಯುಷ್ಯ-ಆರೋಗ್ಯ ನೂರೂ ಕಾಲ ವೃದ್ಧಿಸಲೆಂದು ಮೊರೆ ಇಡುತ್ತಾರೆ.

ತದನಂತರದಲ್ಲಿ ತಮ್ಮ ಮನೆಗಳಲ್ಲಿ ರವೆ-ಶೇಂಗಾ ಉಂಡೆ, ಕಾರಚಿಕಾಯಿ, ಚಕಲಿ, ಕರದಂಟು, ಚುಡಾ ಹೀಗೆ ವಿವಿಧ ಖಾದ್ಯಗಳ ತಿನಿಸು ತಿಂದು ಜೋಕಾಲಿ ಜಿಕಿಕೊಂಡ ಎಂಜಾಯ್ ಮಾಡುವ ಹಬ್ಬ. ಈ ದಿನ ಗ್ರಾಮೀಣ ಪ್ರದೇಶದಲ್ಲಿ ಸಂಜೆ ಹೊತ್ತಿಗೆ ಸಂಗ್ರಾಣಿ ಕಲ್ಲು ಎತ್ತುವುದು, ಬಂಡಿ ಎಳೆಯುವುದು, ಬಾರವಾದ ಕಲ್ಲು ಎತ್ತುವುದು, ಲಿಂಬು ಹಣ್ಣು ಚಮಚದಲ್ಲಿಟ್ಟುಕೊಂಡು ಓಡುವುದು. ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಕಣ್ಣಾಮುಚ್ಚಾಲೆ ಪುರುಷರು ಆಡಿದರೆ, ಇನ್ನೂ ಮಹಿಳೆಯರು ಜೋಕಾಲಿಯಲ್ಲಿ ಜಿಕುವ, ಹಾಡು ಹಾಡುವ ಮೂಲಕ ಇಂತಹ ಗ್ರಾಮೀಣ ಆಟಗಳನ್ನು ಆಡಿ ಹಬ್ಬದ ಖುಷಿ ಸಂಭ್ರಮಿಸುವರು.

ಈ ಬಾರಿ ಮುಂಗಾರು ಮಳೆ-ಬೆಳೆಯ ಕೊರತೆ ಜತೆಗೆ ಅಗತ್ಯ ವಸ್ತುಗಳ ಬೆಲೆ ಏರಿಕೆಯ ನಡುವೆಯೂ ನಾಗರ ಪಂಚಮಿ ಹಬ್ಬಕ್ಕೆ ಜನರು ಸಿಹಿ ತಿಂಡಿ-ತಿನಿಸುಗಳನ್ನು ತಯಾರಿಸಲು ಸಾಮಾಗ್ರಿ ಖರೀದಿ ಜೋರಾಗಿಯೇ ಮಾಡುತ್ತಿದ್ದಾರೆ.

ವರದಿ: ರೇವಣಸಿದ್ದ ಬಗಲಿ (ಬೆಂಗಳೂರು ಗ್ರಾಮಾಂತರ ಜಿಲ್ಲೆ)

Ramesh Babu

Journalist

Recent Posts

ದೇಶದ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆ

ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…

2 hours ago

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

4 hours ago

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

7 hours ago

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

8 hours ago

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…

19 hours ago

ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…

20 hours ago