ಭಾರತೀಯರು ಹಬ್ಬ-ಹರಿದಿನಗಳ ಪ್ರಿಯರು ಒಂದೋದು ಹಬ್ಬಕ್ಕೆ ತನ್ನದೇಯಾದ ವೈಶಿಷ್ಟತೆಯನ್ನು ನೀಡುತ್ತಾ, ಭಕ್ತಿ-ಭಾವದಿಂದ ನೂರಾರು ತಲೆಮಾರುಗಳಿಂದ ಆಚರಿಸಿಕೊಂಡು ಬರುತ್ತಿದ್ದಾರೆ. ಅದರಲ್ಲಿ ಉತ್ತರ ಕರ್ನಾಟಕದ ಗ್ರಾಮೀಣ ಪ್ರದೇಶದಲ್ಲಂತು ನಾಗರ ಪಂಚಮಿ ಹಬ್ಬವನ್ನ ಸಡಗರ, ಸಂಭ್ರಮದಿಂದ ಹೆಣ್ಮಕ್ಕಳು ಜೋಕಾಲಿಯಲ್ಲಿ ಜಿಕಿಕೊಂಡು ಆಚರಿಸುವ ಹಬ್ಬವಷ್ಟೆ ಅಲ್ಲದೇ ಇದು ಸಹೋದರತ್ವದ ಬಾಂಧವ್ಯ ಬೆಸೆಯುವಂತಹ ಮಹತ್ವಪೂರ್ಣ ನಾಡಿನ ದೊಡ್ಡ ಹಬ್ಬವಿದಾಗಿದೆ.
ಈ ನಾಗರ ಪಂಚಮಿ ಹಬ್ಬ ಸಮಿಪಿಸುತ್ತಿದಂತೆ ಗಂಡನ ಮನೆಯಲ್ಲಿರುವ ಪ್ರತಿ ಹೆಣ್ಮಕ್ಕಳ ಮುಖದಲ್ಲಿ ಎಲ್ಲಿಲ್ಲದ ಸಂತಸ ಕಾಣಬಹುದು. ಏಕೆಂದರೆ ಸಹೋದರನಾದವನು ಸಹೋದರಿಯ ಗಂಡನ ಮನೆಗೆ ಹೋಗಿ ಪಂಚಮಿ ಹಬ್ಬಕ್ಕೆ ಕರೆತರುವದು ಪುರಾತನ ಕಾಲದಿಂದಲ್ಲೂ ವಾಡಿಕೆಯಾಗಿ ಬಂದಿದೆ. ಅದಕ್ಕೆ ಪ್ರತಿ ಹೆಣ್ಮಕ್ಕಳಲ್ಲಿ ಪಂಚಮಿಯ ಸಂಭ್ರಮ ಮನೆ ಮಾಡಿರುತ್ತದೆ.
ಈ ದಿನದಂದು ಸಹೋದರಿಯರು ತಮ್ಮ ಸಹೋದರರಿಗೆ ಬೆಳಿಗ್ಗೆ ಎದ್ದೊಡನೆ ಮೈತುಂಬಾ ಎಣ್ಣೆ-ಜೋಳದ ಹಿಟ್ಟು ಹಚ್ಚಿ ಸ್ನಾನ ಮಾಡಿಸುವುದು ಹಿಂದಿನಿಂದ ಬಂದ ವಾಡಿಕೆ. ನಾಡಿನಾದ್ಯಂತ ಮಹಿಳೆಯರು ಹಾಗೂ ಪುಟ್ಟ ಹೆಣ್ಮಕ್ಕಳು ಹೊಸ ಬಟ್ಟೆ ತೊಟ್ಟು ಗ್ರಾಮದಲ್ಲಿರುವ ನಾಗರ ಕಟ್ಟೆಗಳಿಗೆ ತೆರಳಿ, ಶ್ರದ್ಧಾ-ಭಕ್ತಿಯಿಂದ ನಾಗ ದೇವತೆಯ ಪ್ರತಿಮೆ-ಹುತ್ತಕ್ಕೆ ಹಾಲೆರೆದು, ಹೋಳಿಗೆ ನೈವೇದ್ಯ ಅರ್ಪಿಸುವ ಮುಖಾಂತರ ತಮ್ಮ ಸಹೋದರನ ಆಯುಷ್ಯ-ಆರೋಗ್ಯ ನೂರೂ ಕಾಲ ವೃದ್ಧಿಸಲೆಂದು ಮೊರೆ ಇಡುತ್ತಾರೆ.
ತದನಂತರದಲ್ಲಿ ತಮ್ಮ ಮನೆಗಳಲ್ಲಿ ರವೆ-ಶೇಂಗಾ ಉಂಡೆ, ಕಾರಚಿಕಾಯಿ, ಚಕಲಿ, ಕರದಂಟು, ಚುಡಾ ಹೀಗೆ ವಿವಿಧ ಖಾದ್ಯಗಳ ತಿನಿಸು ತಿಂದು ಜೋಕಾಲಿ ಜಿಕಿಕೊಂಡ ಎಂಜಾಯ್ ಮಾಡುವ ಹಬ್ಬ. ಈ ದಿನ ಗ್ರಾಮೀಣ ಪ್ರದೇಶದಲ್ಲಿ ಸಂಜೆ ಹೊತ್ತಿಗೆ ಸಂಗ್ರಾಣಿ ಕಲ್ಲು ಎತ್ತುವುದು, ಬಂಡಿ ಎಳೆಯುವುದು, ಬಾರವಾದ ಕಲ್ಲು ಎತ್ತುವುದು, ಲಿಂಬು ಹಣ್ಣು ಚಮಚದಲ್ಲಿಟ್ಟುಕೊಂಡು ಓಡುವುದು. ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಕಣ್ಣಾಮುಚ್ಚಾಲೆ ಪುರುಷರು ಆಡಿದರೆ, ಇನ್ನೂ ಮಹಿಳೆಯರು ಜೋಕಾಲಿಯಲ್ಲಿ ಜಿಕುವ, ಹಾಡು ಹಾಡುವ ಮೂಲಕ ಇಂತಹ ಗ್ರಾಮೀಣ ಆಟಗಳನ್ನು ಆಡಿ ಹಬ್ಬದ ಖುಷಿ ಸಂಭ್ರಮಿಸುವರು.
ಈ ಬಾರಿ ಮುಂಗಾರು ಮಳೆ-ಬೆಳೆಯ ಕೊರತೆ ಜತೆಗೆ ಅಗತ್ಯ ವಸ್ತುಗಳ ಬೆಲೆ ಏರಿಕೆಯ ನಡುವೆಯೂ ನಾಗರ ಪಂಚಮಿ ಹಬ್ಬಕ್ಕೆ ಜನರು ಸಿಹಿ ತಿಂಡಿ-ತಿನಿಸುಗಳನ್ನು ತಯಾರಿಸಲು ಸಾಮಾಗ್ರಿ ಖರೀದಿ ಜೋರಾಗಿಯೇ ಮಾಡುತ್ತಿದ್ದಾರೆ.
ವರದಿ: ರೇವಣಸಿದ್ದ ಬಗಲಿ (ಬೆಂಗಳೂರು ಗ್ರಾಮಾಂತರ ಜಿಲ್ಲೆ)
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಲಕ್ಷ್ಮೀಪುರ ಗೇಟ್ ಸಮೀಪದ ರಾಷ್ಟ್ರೀಯ ಹೆದ್ದಾರಿ–648ರಲ್ಲಿ ಲಾರಿ ಚಾಲಕನ ಅಜಾಗರೂಕತೆಯಿಂದ ಭೀಕರ…
ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…