ಉದ್ಯಮಶೀಲತೆಯು ಕೇವಲ ಲಾಭದಾಯಕ ವ್ಯವಹಾರಗಳನ್ನು ಸೃಷ್ಟಿಸುವುದಲ್ಲದೆ, ಉದ್ಯೋಗಾವಕಾಶಗಳನ್ನು ಒದಗಿಸುವುದು ಮತ್ತು ಸಾಮಾಜಿಕ ಬದಲಾವಣೆಯನ್ನು ತರುವ ಮೂಲಕ ಸಮಾಜಕ್ಕೆ ಕೊಡುಗೆಯನ್ನು ನೀಡುತ್ತದೆ ಎಂದು ಬಿ.ಎಸ್.ಎನ್.ಎಲ್ ಲೆಕ್ಕಾಧಿಕಾರಿ ಪ್ರಸನ್ನ ಕುಮಾರ್ ಹೇಳಿದರು.
ಶ್ರೀ ದೇವರಾಜ್ ಅರಸ್ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದಲ್ಲಿ ಉದ್ಯಮಶೀಲತೆ ಮತ್ತು ನಾವಿನ್ಯತೆ ಕುರಿತು ಉಪನ್ಯಾಸ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಉದ್ಯಮಶೀಲತೆಯು ಕೇವಲ ವ್ಯವಹಾರಕ್ಕೆ ಸೀಮಿತವಾಗಿಲ್ಲ, ಬದಲಿಗೆ ಸಾಮಾಜಿಕ ಸಮಸ್ಯೆಗಳಿಗೆ ಪರಿಹಾರಗಳನ್ನು ಕಂಡುಹಿಡಿಯುವ ಮತ್ತು ಮೌಲ್ಯವನ್ನು ಸೃಷ್ಟಿಸುವ ಕ್ರಿಯೆಯೂ ಆಗಿದೆ, ಉದ್ಯಮವನ್ನು ಸ್ಥಾಪಿಸುವ ಹಾಗೂ ವ್ಯವಹಾರ ಮಾಡುವ ಸಂದರ್ಭದಲ್ಲಿ ಡಿಜಿಟಲ್ ಪೇಮೆಂಟ್ ಗಳಾದ ಪೇಟಿಎಂ, ಗೂಗಲ್ ಪೇ, ಇವುಗಳ ಕಡೆ ಹೆಚ್ಚಿನ ಗಮನವಿರಬೇಕು ಅಲ್ಲದೆ ಆನ್ಲೈನ್ ವ್ಯವಹಾರಗಳಲ್ಲಿ ಆದಷ್ಟು ನೋಡಿಕೊಂಡು ವ್ಯವಹಾರವನ್ನು ಮಾಡಬೇಕು ಇಲ್ಲವಾದರೆ ಸಮಸ್ಯೆ ಕಟ್ಟಿಟ್ಟ ಬುತ್ತಿ ಎಂದರು.
ಕಾಲೇಜಿನ ಪ್ರಾಂಶುಪಾಲರಾದ ಡಾ. ಗೌರಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪ ಪ್ರಾಂಶುಪಾಲರಾದ ಕೆ. ದಕ್ಷಿಣ ಮೂರ್ತಿ, ಎನ್.ಎಸ್.ಎಸ್ ಅಧಿಕಾರಿಗಳಾದ ಡಾ. ಎಂ ಚಿಕ್ಕಣ್ಣ, ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಸಿ.ಪಿ ಪ್ರಕಾಶ್, ನಿರ್ವಹಣಾ ವಿಭಾಗದ ಮುಖ್ಯಸ್ಥರಾದ ಚೈತ್ರ. ಪಿ, ಸ್ನಾತಕೋತ್ತರ ವಿಭಾಗದ ಮುಖ್ಯಸ್ಥರಾದ ಮಧುಶ್ರೀ ಪ್ರಾಧ್ಯಾಪಕರಾದ ಕಿರಣ್, ದಿವ್ಯ, ರಮ್ಯಾ, ಭಾನುಶ್ರೀ ಮತ್ತಿತರರು ಹಾಜರಿದ್ದರು.
ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…
ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು…
ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಶ್ರವಣಬೆಳಗೊಳದಲ್ಲಿ ಪಾಪಿ ಪುತ್ರನೊಬ್ಬ ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದಿದ್ದಾನೆ. ಗಂಗಮ್ಮ (65), ಕೊಲೆಯಾದ ಮಹಿಳೆ.…
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…
ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ದರ್ಗಾಜೋಗಿಹಳ್ಳಿ ಸಮೀಪದ ಹೋಟೆಲ್ ನಲ್ಲಿ…
ಡಿಪಿಎಲ್ ಸೀಸನ್-1 ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್ ನ್ನು ಮೇ.9 ಮತ್ತು 10ರಂದು ಆಯೋಜನೆ ಮಾಡಲಾಗಿದೆ...…