ಉದ್ಯಮಶೀಲತೆಯು ಕೇವಲ ಲಾಭದಾಯಕ ವ್ಯವಹಾರಗಳನ್ನು ಸೃಷ್ಟಿಸುವುದಲ್ಲದೆ, ಉದ್ಯೋಗಾವಕಾಶಗಳನ್ನು ಒದಗಿಸುವುದು ಮತ್ತು ಸಾಮಾಜಿಕ ಬದಲಾವಣೆಯನ್ನು ತರುವ ಮೂಲಕ ಸಮಾಜಕ್ಕೆ ಕೊಡುಗೆಯನ್ನು ನೀಡುತ್ತದೆ ಎಂದು ಬಿ.ಎಸ್.ಎನ್.ಎಲ್ ಲೆಕ್ಕಾಧಿಕಾರಿ ಪ್ರಸನ್ನ ಕುಮಾರ್ ಹೇಳಿದರು.
ಶ್ರೀ ದೇವರಾಜ್ ಅರಸ್ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದಲ್ಲಿ ಉದ್ಯಮಶೀಲತೆ ಮತ್ತು ನಾವಿನ್ಯತೆ ಕುರಿತು ಉಪನ್ಯಾಸ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಉದ್ಯಮಶೀಲತೆಯು ಕೇವಲ ವ್ಯವಹಾರಕ್ಕೆ ಸೀಮಿತವಾಗಿಲ್ಲ, ಬದಲಿಗೆ ಸಾಮಾಜಿಕ ಸಮಸ್ಯೆಗಳಿಗೆ ಪರಿಹಾರಗಳನ್ನು ಕಂಡುಹಿಡಿಯುವ ಮತ್ತು ಮೌಲ್ಯವನ್ನು ಸೃಷ್ಟಿಸುವ ಕ್ರಿಯೆಯೂ ಆಗಿದೆ, ಉದ್ಯಮವನ್ನು ಸ್ಥಾಪಿಸುವ ಹಾಗೂ ವ್ಯವಹಾರ ಮಾಡುವ ಸಂದರ್ಭದಲ್ಲಿ ಡಿಜಿಟಲ್ ಪೇಮೆಂಟ್ ಗಳಾದ ಪೇಟಿಎಂ, ಗೂಗಲ್ ಪೇ, ಇವುಗಳ ಕಡೆ ಹೆಚ್ಚಿನ ಗಮನವಿರಬೇಕು ಅಲ್ಲದೆ ಆನ್ಲೈನ್ ವ್ಯವಹಾರಗಳಲ್ಲಿ ಆದಷ್ಟು ನೋಡಿಕೊಂಡು ವ್ಯವಹಾರವನ್ನು ಮಾಡಬೇಕು ಇಲ್ಲವಾದರೆ ಸಮಸ್ಯೆ ಕಟ್ಟಿಟ್ಟ ಬುತ್ತಿ ಎಂದರು.
ಕಾಲೇಜಿನ ಪ್ರಾಂಶುಪಾಲರಾದ ಡಾ. ಗೌರಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪ ಪ್ರಾಂಶುಪಾಲರಾದ ಕೆ. ದಕ್ಷಿಣ ಮೂರ್ತಿ, ಎನ್.ಎಸ್.ಎಸ್ ಅಧಿಕಾರಿಗಳಾದ ಡಾ. ಎಂ ಚಿಕ್ಕಣ್ಣ, ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಸಿ.ಪಿ ಪ್ರಕಾಶ್, ನಿರ್ವಹಣಾ ವಿಭಾಗದ ಮುಖ್ಯಸ್ಥರಾದ ಚೈತ್ರ. ಪಿ, ಸ್ನಾತಕೋತ್ತರ ವಿಭಾಗದ ಮುಖ್ಯಸ್ಥರಾದ ಮಧುಶ್ರೀ ಪ್ರಾಧ್ಯಾಪಕರಾದ ಕಿರಣ್, ದಿವ್ಯ, ರಮ್ಯಾ, ಭಾನುಶ್ರೀ ಮತ್ತಿತರರು ಹಾಜರಿದ್ದರು.
ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…