ಉದ್ಯಮಶೀಲತೆಯು ಉದ್ಯೋಗಾವಕಾಶಗಳನ್ನು ಒದಗಿಸುತ್ತದೆ-ಪ್ರಸನ್ನ ಕುಮಾರ್

ಉದ್ಯಮಶೀಲತೆಯು ಕೇವಲ ಲಾಭದಾಯಕ ವ್ಯವಹಾರಗಳನ್ನು ಸೃಷ್ಟಿಸುವುದಲ್ಲದೆ, ಉದ್ಯೋಗಾವಕಾಶಗಳನ್ನು ಒದಗಿಸುವುದು ಮತ್ತು ಸಾಮಾಜಿಕ ಬದಲಾವಣೆಯನ್ನು ತರುವ ಮೂಲಕ ಸಮಾಜಕ್ಕೆ ಕೊಡುಗೆಯನ್ನು ನೀಡುತ್ತದೆ ಎಂದು ಬಿ.ಎಸ್.ಎನ್.ಎಲ್ ಲೆಕ್ಕಾಧಿಕಾರಿ ಪ್ರಸನ್ನ ಕುಮಾರ್ ಹೇಳಿದರು.

ಶ್ರೀ ದೇವರಾಜ್ ಅರಸ್ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದಲ್ಲಿ ಉದ್ಯಮಶೀಲತೆ ಮತ್ತು ನಾವಿನ್ಯತೆ ಕುರಿತು ಉಪನ್ಯಾಸ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಉದ್ಯಮಶೀಲತೆಯು ಕೇವಲ ವ್ಯವಹಾರಕ್ಕೆ ಸೀಮಿತವಾಗಿಲ್ಲ, ಬದಲಿಗೆ ಸಾಮಾಜಿಕ ಸಮಸ್ಯೆಗಳಿಗೆ ಪರಿಹಾರಗಳನ್ನು ಕಂಡುಹಿಡಿಯುವ ಮತ್ತು ಮೌಲ್ಯವನ್ನು ಸೃಷ್ಟಿಸುವ ಕ್ರಿಯೆಯೂ ಆಗಿದೆ, ಉದ್ಯಮವನ್ನು ಸ್ಥಾಪಿಸುವ ಹಾಗೂ ವ್ಯವಹಾರ ಮಾಡುವ ಸಂದರ್ಭದಲ್ಲಿ ಡಿಜಿಟಲ್ ಪೇಮೆಂಟ್ ಗಳಾದ ಪೇಟಿಎಂ, ಗೂಗಲ್ ಪೇ, ಇವುಗಳ ಕಡೆ ಹೆಚ್ಚಿನ ಗಮನವಿರಬೇಕು ಅಲ್ಲದೆ ಆನ್ಲೈನ್ ವ್ಯವಹಾರಗಳಲ್ಲಿ ಆದಷ್ಟು ನೋಡಿಕೊಂಡು ವ್ಯವಹಾರವನ್ನು ಮಾಡಬೇಕು ಇಲ್ಲವಾದರೆ ಸಮಸ್ಯೆ ಕಟ್ಟಿಟ್ಟ ಬುತ್ತಿ ಎಂದರು.

ಕಾಲೇಜಿನ ಪ್ರಾಂಶುಪಾಲರಾದ ಡಾ. ಗೌರಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪ ಪ್ರಾಂಶುಪಾಲರಾದ ಕೆ. ದಕ್ಷಿಣ ಮೂರ್ತಿ, ಎನ್.ಎಸ್.ಎಸ್ ಅಧಿಕಾರಿಗಳಾದ ಡಾ. ಎಂ ಚಿಕ್ಕಣ್ಣ, ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಸಿ.ಪಿ ಪ್ರಕಾಶ್, ನಿರ್ವಹಣಾ ವಿಭಾಗದ ಮುಖ್ಯಸ್ಥರಾದ ಚೈತ್ರ. ಪಿ, ಸ್ನಾತಕೋತ್ತರ ವಿಭಾಗದ ಮುಖ್ಯಸ್ಥರಾದ ಮಧುಶ್ರೀ ಪ್ರಾಧ್ಯಾಪಕರಾದ ಕಿರಣ್, ದಿವ್ಯ, ರಮ್ಯಾ, ಭಾನುಶ್ರೀ ಮತ್ತಿತರರು ಹಾಜರಿದ್ದರು.

Ramesh Babu

Journalist

Recent Posts

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

40 minutes ago

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

2 hours ago

ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…

3 hours ago

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

13 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

14 hours ago

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

2 days ago