ಉದ್ಯಮಶೀಲತೆಯು ಉದ್ಯೋಗಾವಕಾಶಗಳನ್ನು ಒದಗಿಸುತ್ತದೆ-ಪ್ರಸನ್ನ ಕುಮಾರ್

ಉದ್ಯಮಶೀಲತೆಯು ಕೇವಲ ಲಾಭದಾಯಕ ವ್ಯವಹಾರಗಳನ್ನು ಸೃಷ್ಟಿಸುವುದಲ್ಲದೆ, ಉದ್ಯೋಗಾವಕಾಶಗಳನ್ನು ಒದಗಿಸುವುದು ಮತ್ತು ಸಾಮಾಜಿಕ ಬದಲಾವಣೆಯನ್ನು ತರುವ ಮೂಲಕ ಸಮಾಜಕ್ಕೆ ಕೊಡುಗೆಯನ್ನು ನೀಡುತ್ತದೆ ಎಂದು ಬಿ.ಎಸ್.ಎನ್.ಎಲ್ ಲೆಕ್ಕಾಧಿಕಾರಿ ಪ್ರಸನ್ನ ಕುಮಾರ್ ಹೇಳಿದರು.

ಶ್ರೀ ದೇವರಾಜ್ ಅರಸ್ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದಲ್ಲಿ ಉದ್ಯಮಶೀಲತೆ ಮತ್ತು ನಾವಿನ್ಯತೆ ಕುರಿತು ಉಪನ್ಯಾಸ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಉದ್ಯಮಶೀಲತೆಯು ಕೇವಲ ವ್ಯವಹಾರಕ್ಕೆ ಸೀಮಿತವಾಗಿಲ್ಲ, ಬದಲಿಗೆ ಸಾಮಾಜಿಕ ಸಮಸ್ಯೆಗಳಿಗೆ ಪರಿಹಾರಗಳನ್ನು ಕಂಡುಹಿಡಿಯುವ ಮತ್ತು ಮೌಲ್ಯವನ್ನು ಸೃಷ್ಟಿಸುವ ಕ್ರಿಯೆಯೂ ಆಗಿದೆ, ಉದ್ಯಮವನ್ನು ಸ್ಥಾಪಿಸುವ ಹಾಗೂ ವ್ಯವಹಾರ ಮಾಡುವ ಸಂದರ್ಭದಲ್ಲಿ ಡಿಜಿಟಲ್ ಪೇಮೆಂಟ್ ಗಳಾದ ಪೇಟಿಎಂ, ಗೂಗಲ್ ಪೇ, ಇವುಗಳ ಕಡೆ ಹೆಚ್ಚಿನ ಗಮನವಿರಬೇಕು ಅಲ್ಲದೆ ಆನ್ಲೈನ್ ವ್ಯವಹಾರಗಳಲ್ಲಿ ಆದಷ್ಟು ನೋಡಿಕೊಂಡು ವ್ಯವಹಾರವನ್ನು ಮಾಡಬೇಕು ಇಲ್ಲವಾದರೆ ಸಮಸ್ಯೆ ಕಟ್ಟಿಟ್ಟ ಬುತ್ತಿ ಎಂದರು.

ಕಾಲೇಜಿನ ಪ್ರಾಂಶುಪಾಲರಾದ ಡಾ. ಗೌರಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪ ಪ್ರಾಂಶುಪಾಲರಾದ ಕೆ. ದಕ್ಷಿಣ ಮೂರ್ತಿ, ಎನ್.ಎಸ್.ಎಸ್ ಅಧಿಕಾರಿಗಳಾದ ಡಾ. ಎಂ ಚಿಕ್ಕಣ್ಣ, ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಸಿ.ಪಿ ಪ್ರಕಾಶ್, ನಿರ್ವಹಣಾ ವಿಭಾಗದ ಮುಖ್ಯಸ್ಥರಾದ ಚೈತ್ರ. ಪಿ, ಸ್ನಾತಕೋತ್ತರ ವಿಭಾಗದ ಮುಖ್ಯಸ್ಥರಾದ ಮಧುಶ್ರೀ ಪ್ರಾಧ್ಯಾಪಕರಾದ ಕಿರಣ್, ದಿವ್ಯ, ರಮ್ಯಾ, ಭಾನುಶ್ರೀ ಮತ್ತಿತರರು ಹಾಜರಿದ್ದರು.

Ramesh Babu

Journalist

Recent Posts

ಸಾರ್ವಜನಿಕ ಆಡಳಿತದ ದಕ್ಷತೆ ಹೆಚ್ಚಿಸಲು ಕೆಜಿಐಎಸ್-2.0 ಸಹಕಾರಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧಾ

ಸರ್ಕಾರಿ ಸಂಸ್ಥೆಗಳು ಹಾಗೂ ಸರ್ಕಾರಿ ಕೆಲಸಗಳ ಸೇವೆಯಲ್ಲಿ ಕೆ-ಜಿಐಎಸ್ 2.0 ಪೋರ್ಟಲ್ ಬಳಕೆಯಿಂದ ಆಡಳಿತದ ದಕ್ಷತೆ ಹೆಚ್ಚಲಿದೆ ಎಂದು ಜಿಲ್ಲಾಧಿಕಾರಿ…

1 hour ago

ಗೃಹರಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ 349 ಗೃಹರಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳು ಮೇ…

7 hours ago

ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ….

ನೀಟ್ ಪ್ರಶ್ನೆ ಪತ್ರಿಕೆ ಬಯಲು.... ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ. ನನಗೆ ಇದೇನು ದೊಡ್ಡ ಆಶ್ಚರ್ಯವಲ್ಲ. ಇಡೀ ಸಮಾಜದ ನಡೆಯುತ್ತಿರುವುದೇ…

10 hours ago

ಹವಾಮಾನ ವೈಪರಿತ್ಯಕ್ಕೆ ತತ್ತರಿಸಿದ ಕೃಷಿ: ಮಾವು, ದ್ರಾಕ್ಷಿ, ತರಕಾರಿ ಬೆಳೆಗಳಿಗೆ ಭಾರೀ ಹೊಡೆತ

ರಾಜ್ಯದ ಹಲವು ಭಾಗಗಳಲ್ಲಿ ಈ ಬಾರಿ ತೀವ್ರ ಬೇಸಿಗೆ ಮತ್ತು ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕಿವೆ. 2026-27ನೇ…

12 hours ago

ಸೈಕಲ್‌ಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿದ ಬೈಕ್: ಮಹಿಳೆ ಸಾವು

ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್‌ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್‌ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…

23 hours ago

ಬೆಳೆಗಳಿಗೆ ಅಸಮರ್ಪಕ ರಸಗೊಬ್ಬರ ಬಳಕೆ: ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ- ಮಣ್ಣು ವಿಜ್ಞಾನಿ ಡಾ. ಬಾಲಾಜಿ ನಾಯ್ಕ್

ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…

1 day ago