ಉಪಚುನಾವಣೆಗೆ ರಾಜ್ಯ ಕಾಂಗ್ರೆಸ್ ನಲ್ಲಿ ಟಿಕೆಟ್ ಹಂಚಿಕೆ ಕಗ್ಗಂಟು ಇಂದು ಬಗೆಹರಿದಿದೆ. ಏಪ್ರಿಲ್ 9 ರಂದು ನಡೆಯಲಿರುವ ರಾಜ್ಯದ ಎರಡು ಪ್ರಮುಖ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಹೆಸರನ್ನು ಇಂದು ಭಾನುವಾರ ಅಧಿಕೃತವಾಗಿ ಘೋಷಣೆ ಮಾಡಿದೆ.
ದಾವಣಗೆರೆ ದಕ್ಷಿಣ ಕ್ಷೇತ್ರದಿಂದ ಸಮರ್ಥ್ ಮಲ್ಲಿಕಾರ್ಜುನ್ ಮತ್ತು ಬಾಗಲಕೋಟೆ ಕ್ಷೇತ್ರದಿಂದ ಉಮೇಶ್ ಮೇಟಿ ಅವರಿಗೆ ಟಿಕೆಟ್ ನೀಡಲಾಗಿದೆ.
ಶಾಮನೂರು ಕುಟುಂಬದ ಮೂರನೇ ತಲೆಮಾರಿಗೆ ಟಿಕೆಟ್
ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಧೀಮಂತ ನಾಯಕ, ದಿವಂಗತ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ಅವರ ಮೊಮ್ಮಗ ಸಮರ್ಥ್ ಮಲ್ಲಿಕಾರ್ಜುನ್ ಅವರನ್ನು ಕಣಕ್ಕಿಳಿಸಲಾಗಿದೆ. ಸಮರ್ಥ್ ಅವರು ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಹಾಗೂ ದಾವಣಗೆರೆ ಸಂಸದೆ ಪ್ರಭಾ ಮಲ್ಲಿಕಾರ್ಜುನ್ ಅವರ ಪುತ್ರರಾಗಿದ್ದಾರೆ.
ಈ ಕ್ಷೇತ್ರದ ಟಿಕೆಟ್ ಹಂಚಿಕೆ ವಿಚಾರದಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ನೇತೃತ್ವದ ಮುಸ್ಲಿಂ ನಾಯಕರು ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನೀಡಬೇಕೆಂದು ಆಗ್ರಹಿಸಿದ್ದರು. ಸಿಎಂ ಸಿದ್ದರಾಮಯ್ಯ ಮುಸ್ಲಿಂ ಅಭ್ಯರ್ಥಿ ಪರವಾಗಿದ್ದರೆ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸಮರ್ಥ್ ಅವರ ಪರವಾಗಿದ್ದರು ಎಂಬ ಮಾತುಗಳು ಕೇಳಿಬಂದಿದ್ದವು. ಅಂತಿಮವಾಗಿ ಎಐಸಿಸಿ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ನಿನ್ನೆ ಬೆಂಗಳೂರಿನಲ್ಲಿ ನಡೆಸಿದ ಸಂಧಾನ ಸಭೆಯಲ್ಲಿ ಎಲ್ಲರೂ ಒಮ್ಮತಕ್ಕೆ ಬಂದು ಸಮರ್ಥ್ ಅವರನ್ನು ಕಣಕ್ಕಿಳಿಸಲು ಒಪ್ಪಿಕೊಂಡರು ಎಂದು ತಿಳಿದುಬಂದಿದೆ.
ಮೇಟಿ ಪುತ್ರನಿಗೆ ಟಿಕೆಟ್
ಇನ್ನು ಬಾಗಲಕೋಟೆ ವಿಧಾನಸಭಾ ಕ್ಷೇತ್ರಕ್ಕೆ ಮಾಜಿ ಸಚಿವ ದಿವಂಗತ ಎಚ್.ವೈ. ಮೇಟಿ ಅವರ ಪುತ್ರ ಉಮೇಶ್ ಮೇಟಿ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಲಾಗಿದೆ. ಮೇಟಿ ಅವರ ನಿಧನದಿಂದ ಕುಟುಂಬದ ಸದಸ್ಯರ ನಡುವೆಯೇ ಟಿಕೆಟ್ಗೆ ಪೈಪೋಟಿ ಏರ್ಪಟ್ಟಿತ್ತು. ಅಂತಿಮವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ಸದಸ್ಯರೊಂದಿಗೆ ಮಾತುಕತೆ ನಡೆಸಿ ಒಮ್ಮತದ ನಿರ್ಧಾರಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ.
ಕಾಂಗ್ರೆಸ್ ನ ಈ ಇಬ್ಬರೂ ಅಭ್ಯರ್ಥಿಗಳು ನಾಳೆ ಮಾರ್ಚ್ 23ರಂದು ತಮ್ಮ ನಾಮಪತ್ರ ಸಲ್ಲಿಸಲಿದ್ದಾರೆ.
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…
ರಾಜ್ಯದಲ್ಲಿ ಎದುರಾಗಿರುವ ಮಳೆ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…