Categories: ರಾಜ್ಯ

ಉಪಚುನಾವಣೆ: ದಾವಣಗೆರೆ ದಕ್ಷಿಣ ಕ್ಷೇತ್ರ ಹಾಗೂ ಬಾಗಲಕೋಟೆ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಅಧಿಕೃತ ಘೋಷಣೆ

ಉಪಚುನಾವಣೆಗೆ ರಾಜ್ಯ ಕಾಂಗ್ರೆಸ್ ನಲ್ಲಿ ಟಿಕೆಟ್ ಹಂಚಿಕೆ ಕಗ್ಗಂಟು ಇಂದು ಬಗೆಹರಿದಿದೆ. ಏಪ್ರಿಲ್ 9 ರಂದು ನಡೆಯಲಿರುವ ರಾಜ್ಯದ ಎರಡು ಪ್ರಮುಖ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಹೆಸರನ್ನು ಇಂದು ಭಾನುವಾರ ಅಧಿಕೃತವಾಗಿ ಘೋಷಣೆ ಮಾಡಿದೆ.

ದಾವಣಗೆರೆ ದಕ್ಷಿಣ ಕ್ಷೇತ್ರದಿಂದ ಸಮರ್ಥ್ ಮಲ್ಲಿಕಾರ್ಜುನ್ ಮತ್ತು ಬಾಗಲಕೋಟೆ ಕ್ಷೇತ್ರದಿಂದ ಉಮೇಶ್ ಮೇಟಿ ಅವರಿಗೆ ಟಿಕೆಟ್ ನೀಡಲಾಗಿದೆ.

ಶಾಮನೂರು ಕುಟುಂಬದ ಮೂರನೇ ತಲೆಮಾರಿಗೆ ಟಿಕೆಟ್

ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಧೀಮಂತ ನಾಯಕ, ದಿವಂಗತ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ಅವರ ಮೊಮ್ಮಗ ಸಮರ್ಥ್ ಮಲ್ಲಿಕಾರ್ಜುನ್ ಅವರನ್ನು ಕಣಕ್ಕಿಳಿಸಲಾಗಿದೆ. ಸಮರ್ಥ್ ಅವರು ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಹಾಗೂ ದಾವಣಗೆರೆ ಸಂಸದೆ ಪ್ರಭಾ ಮಲ್ಲಿಕಾರ್ಜುನ್ ಅವರ ಪುತ್ರರಾಗಿದ್ದಾರೆ.

ಈ ಕ್ಷೇತ್ರದ ಟಿಕೆಟ್ ಹಂಚಿಕೆ ವಿಚಾರದಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ನೇತೃತ್ವದ ಮುಸ್ಲಿಂ ನಾಯಕರು ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನೀಡಬೇಕೆಂದು ಆಗ್ರಹಿಸಿದ್ದರು. ಸಿಎಂ ಸಿದ್ದರಾಮಯ್ಯ ಮುಸ್ಲಿಂ ಅಭ್ಯರ್ಥಿ ಪರವಾಗಿದ್ದರೆ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸಮರ್ಥ್ ಅವರ ಪರವಾಗಿದ್ದರು ಎಂಬ ಮಾತುಗಳು ಕೇಳಿಬಂದಿದ್ದವು. ಅಂತಿಮವಾಗಿ ಎಐಸಿಸಿ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ನಿನ್ನೆ ಬೆಂಗಳೂರಿನಲ್ಲಿ ನಡೆಸಿದ ಸಂಧಾನ ಸಭೆಯಲ್ಲಿ ಎಲ್ಲರೂ ಒಮ್ಮತಕ್ಕೆ ಬಂದು ಸಮರ್ಥ್ ಅವರನ್ನು ಕಣಕ್ಕಿಳಿಸಲು ಒಪ್ಪಿಕೊಂಡರು ಎಂದು ತಿಳಿದುಬಂದಿದೆ.

ಮೇಟಿ ಪುತ್ರನಿಗೆ ಟಿಕೆಟ್

ಇನ್ನು ಬಾಗಲಕೋಟೆ ವಿಧಾನಸಭಾ ಕ್ಷೇತ್ರಕ್ಕೆ ಮಾಜಿ ಸಚಿವ ದಿವಂಗತ ಎಚ್.ವೈ. ಮೇಟಿ ಅವರ ಪುತ್ರ ಉಮೇಶ್ ಮೇಟಿ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಲಾಗಿದೆ. ಮೇಟಿ ಅವರ ನಿಧನದಿಂದ ಕುಟುಂಬದ ಸದಸ್ಯರ ನಡುವೆಯೇ ಟಿಕೆಟ್‌ಗೆ ಪೈಪೋಟಿ ಏರ್ಪಟ್ಟಿತ್ತು. ಅಂತಿಮವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ಸದಸ್ಯರೊಂದಿಗೆ ಮಾತುಕತೆ ನಡೆಸಿ ಒಮ್ಮತದ ನಿರ್ಧಾರಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ.

ಕಾಂಗ್ರೆಸ್ ನ ಈ ಇಬ್ಬರೂ ಅಭ್ಯರ್ಥಿಗಳು ನಾಳೆ ಮಾರ್ಚ್ 23ರಂದು ತಮ್ಮ ನಾಮಪತ್ರ ಸಲ್ಲಿಸಲಿದ್ದಾರೆ.

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

2 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

5 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

6 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

9 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

24 hours ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

1 day ago