ಉಪರಾಷ್ಟ್ರಪತಿ‌ ಚುನಾವಣೆ: ಎನ್‌ಡಿಎ ಬೆಂಬಲಿತ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಅವರಿಗೆ ಭರ್ಜರಿ ಗೆಲುವು

ಮಂಗಳವಾರ ನಡೆದ ಉಪರಾಷ್ಟ್ರಪತಿ‌ ಚುನಾವಣೆಯಲ್ಲಿ ಎನ್‌ಡಿಎ ಬೆಂಬಲಿತ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್‌ ಅವರು ನೂತನ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ. ಅವರು ಉಪರಾಷ್ಟ್ರಪತಿ ಆಗಿದ್ದ ಜಗದೀಪ್ ಧನಕರ್ ಅವರ ಉತ್ತರಾಧಿಕಾರಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ಮಂಗಳವಾರ ನಡೆದ ಚುನಾವಣೆಯಲ್ಲಿ 68 ವರ್ಷದ ಸಿಪಿ ರಾಧಾಕೃಷ್ಣನ್ ಅವರು ಭರ್ಜರಿ ಜಯ ಸಾಧಿಸಿದರು. ಅವರಿಗೆ ಒಟ್ಟು 452 ಪ್ರಥಮ ಪ್ರಾಶಸ್ತ್ಯದ ಮತಗಳು ಲಭಿಸಿದರೆ, ಅವರ ಪ್ರತಿಸ್ಪರ್ಧಿಯಾಗಿದ್ದ ವಿರೋಧ ಪಕ್ಷಗಳ (ಐಎನ್‌ಡಿಐಎ) ಅಭ್ಯರ್ಥಿ ಮತ್ತು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಾಧೀಶರಾದ ಬಿ. ಸುದರ್ಶನ್ ರೆಡ್ಡಿ ಅವರು 300 ಮತಗಳನ್ನು ಪಡೆದು ಹಿನ್ನಡೆ ಅನುಭವಿಸಿದರು.

ಮತದಾನದ ಅಂಕಿ – ಅಂಶಗಳನ್ನು ನೋಡಿದರೆ ವಿರೋಧ ಪಕ್ಷಗಳಿಂದ ಭಾರೀ ಪ್ರಮಾಣದಲ್ಲಿ ಅಡ್ಡ ಮತದಾನ ನಡೆದಿರುವಂತೆ ಭಾಸವಾಗುತ್ತಿದೆ. ಕನಿಷ್ಠ 19 ಸಂಸದರು ಎನ್‌ಡಿಎ ಅಭ್ಯರ್ಥಿಯ ಪರವಾಗಿ ಮತ ಚಲಾಯಿಸಿದ್ದಾರೆ ಎಂದು ಅಂದಾಜಿಸಲಾಗಿದೆ. ಈ ಮೂಲಕ ಸಿಪಿ ರಾಧಾಕೃಷ್ಣನ್ ಅವರು ಸುಲಭವಾಗಿ ಗೆಲುವಿನ ನಗೆಯನ್ನು ಬೀರಿದ್ದಾರೆ.

ಉಪರಾಷ್ಟ್ರಪತಿ ಚುನಾವಣೆಯಲ್ಲಿ ಸಿ.ಪಿ. ರಾಧಾಕೃಷ್ಣನ್ 452 ಮತಗಳಿಂದ ಗೆದ್ದಿದ್ದಾರೆ. ಪ್ರತಿಪಕ್ಷದ ಬಿ. ಸುದರ್ಶನ್ ರೆಡ್ಡಿ 300 ಮತಗಳನ್ನು ಪಡೆದಿದ್ದಾರೆ. ಚಲಾವಣೆಯಾದ 767 ಮತಗಳಲ್ಲಿ 752 ಮಾನ್ಯ, 15 ಅಮಾನ್ಯವಾಗಿದೆ ಎಂದು ಚುನಾವಣಾಧಿಕಾರಿ ಹೇಳಿದ್ದಾರೆ.

Ramesh Babu

Journalist

Recent Posts

ತಂದೆ-ಮಗನ ಲಾಕಪ್ ಡೆತ್ ಕೇಸ್; ತಮಿಳುನಾಡಿನ 9 ಪೊಲೀಸರಿಗೆ ಗಲ್ಲು ಶಿಕ್ಷೆ

2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್‌ ಪೀಠವು 9 ಪೊಲೀಸ್ ಸಿಬ್ಬಂದಿಗೆ…

8 hours ago

ಇಂಧನ ತೈಲ ಮತ್ತು ಅನಿಲ ಪೂರೈಕೆ ಸಮಸ್ಯೆ – ರಾಜ್ಯದ ಜನತೆಗೆ ತೀವ್ರ ಸಂಕಷ್ಟ- ಸಚಿವ ಕೆ.ಎಚ್ ಮುನಿಯಪ್ಪ ಪ್ರತಿಕ್ರಿಯೆ

ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…

9 hours ago

ಆಟೋ ಎಲ್‌ಪಿಜಿಗಾಗಿ ಸಾಲುಗಟ್ಟಿ ನಿಂತ ನೂರಾರು ಆಟೋಗಳು

ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…

11 hours ago

ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

13 hours ago

ಛಲವಾದಿ‌‌ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧ ಆಯ್ಕೆ

ಛಲವಾದಿ‌‌ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜಿಲ್ಲಾಧ್ಯಕ್ಷ ನರೇಶ್ ನೇತೃತ್ವದಲ್ಲಿ ನಗರದ…

15 hours ago

ಖತರ್ನಾಕ್ ಬೈಕ್ ಕಳ್ಳರ ಬಂಧನ: ಬಂಧಿತರಿಂದ 18.30 ಲಕ್ಷ ಮೌಲ್ಯದ 27 ಬೈಕ್ ಗಳು ವಶ

ಬೆಳಗಾವಿಯ ಸಂಕೇಶ್ವರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಅಂತಾರಾಜ್ಯ ಇಬ್ಬರು ಬೈಕ್ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 18.30 ಲಕ್ಷ ಮೌಲ್ಯದ…

15 hours ago