ಉಪರಾಷ್ಟ್ರಪತಿ‌ ಚುನಾವಣೆ: ಎನ್‌ಡಿಎ ಬೆಂಬಲಿತ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಅವರಿಗೆ ಭರ್ಜರಿ ಗೆಲುವು

ಮಂಗಳವಾರ ನಡೆದ ಉಪರಾಷ್ಟ್ರಪತಿ‌ ಚುನಾವಣೆಯಲ್ಲಿ ಎನ್‌ಡಿಎ ಬೆಂಬಲಿತ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್‌ ಅವರು ನೂತನ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ. ಅವರು ಉಪರಾಷ್ಟ್ರಪತಿ ಆಗಿದ್ದ ಜಗದೀಪ್ ಧನಕರ್ ಅವರ ಉತ್ತರಾಧಿಕಾರಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ಮಂಗಳವಾರ ನಡೆದ ಚುನಾವಣೆಯಲ್ಲಿ 68 ವರ್ಷದ ಸಿಪಿ ರಾಧಾಕೃಷ್ಣನ್ ಅವರು ಭರ್ಜರಿ ಜಯ ಸಾಧಿಸಿದರು. ಅವರಿಗೆ ಒಟ್ಟು 452 ಪ್ರಥಮ ಪ್ರಾಶಸ್ತ್ಯದ ಮತಗಳು ಲಭಿಸಿದರೆ, ಅವರ ಪ್ರತಿಸ್ಪರ್ಧಿಯಾಗಿದ್ದ ವಿರೋಧ ಪಕ್ಷಗಳ (ಐಎನ್‌ಡಿಐಎ) ಅಭ್ಯರ್ಥಿ ಮತ್ತು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಾಧೀಶರಾದ ಬಿ. ಸುದರ್ಶನ್ ರೆಡ್ಡಿ ಅವರು 300 ಮತಗಳನ್ನು ಪಡೆದು ಹಿನ್ನಡೆ ಅನುಭವಿಸಿದರು.

ಮತದಾನದ ಅಂಕಿ – ಅಂಶಗಳನ್ನು ನೋಡಿದರೆ ವಿರೋಧ ಪಕ್ಷಗಳಿಂದ ಭಾರೀ ಪ್ರಮಾಣದಲ್ಲಿ ಅಡ್ಡ ಮತದಾನ ನಡೆದಿರುವಂತೆ ಭಾಸವಾಗುತ್ತಿದೆ. ಕನಿಷ್ಠ 19 ಸಂಸದರು ಎನ್‌ಡಿಎ ಅಭ್ಯರ್ಥಿಯ ಪರವಾಗಿ ಮತ ಚಲಾಯಿಸಿದ್ದಾರೆ ಎಂದು ಅಂದಾಜಿಸಲಾಗಿದೆ. ಈ ಮೂಲಕ ಸಿಪಿ ರಾಧಾಕೃಷ್ಣನ್ ಅವರು ಸುಲಭವಾಗಿ ಗೆಲುವಿನ ನಗೆಯನ್ನು ಬೀರಿದ್ದಾರೆ.

ಉಪರಾಷ್ಟ್ರಪತಿ ಚುನಾವಣೆಯಲ್ಲಿ ಸಿ.ಪಿ. ರಾಧಾಕೃಷ್ಣನ್ 452 ಮತಗಳಿಂದ ಗೆದ್ದಿದ್ದಾರೆ. ಪ್ರತಿಪಕ್ಷದ ಬಿ. ಸುದರ್ಶನ್ ರೆಡ್ಡಿ 300 ಮತಗಳನ್ನು ಪಡೆದಿದ್ದಾರೆ. ಚಲಾವಣೆಯಾದ 767 ಮತಗಳಲ್ಲಿ 752 ಮಾನ್ಯ, 15 ಅಮಾನ್ಯವಾಗಿದೆ ಎಂದು ಚುನಾವಣಾಧಿಕಾರಿ ಹೇಳಿದ್ದಾರೆ.

Ramesh Babu

Journalist

Recent Posts

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

9 hours ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

1 day ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

1 day ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

1 day ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

2 days ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

2 days ago