ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಕೆಲಸ ಕುಂಠಿತ: ಸಾರ್ವಜನಿಕರ ಪರದಾಟ

ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಇ-ಆಫೀಸ್ ಅನುಷ್ಠಾನ ಹಾಗೂ ಆರ್‌ಸಿಸಿಎಂಎಸ್ ಕಾರ್ಯ ಹಿನ್ನೆಲೆ ಕಳೆದ ನಾಲ್ಕು ದಿನಗಳಿಂದ ಸಾರ್ವಜನಿಕ ಕೆಲಸ ಕುಂಠಿತಗೊಂಡಿದೆ.

ಉಪವಿಭಾಗಾಧಿಕಾರಿ ಕಚೇರಿಗೆ ಪ್ರತಿನಿತ್ಯ ಜಿಲ್ಲೆಯ ನೆಲಮಂಗಲ, ಹೊಸಕೋಟೆ, ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವಿವಿಧ ಗ್ರಾಮಗಳಿಂದ ಜನರು ವಿವಿಧ ಕೆಲಸ ಕಾರ್ಯಗಳ ನಿಮಿತ್ತ ಬಂದು ಹೋಗುತ್ತಾರೆ.

ಎಸಿ ಕಚೇರಿಯಲ್ಲಿ ಆಗಸ್ಟ್ 17 ಮತ್ತು 18ರಂದು ಇ-ಆಫೀಸ್ ಅನುಷ್ಠಾನ ಹಾಗೂ ಆರ್‌ಸಿಸಿಎಂಎಸ್ ಕಾರ್ಯನಿರ್ವಹಣೆ ಪ್ರಗತಿಯಲ್ಲಿರುವುದರಿಂದ ಕಚೇರಿ ಸಿಬ್ಬಂದಿ ತಮ್ಮನ್ನು ಭೇಟಿ ಮಾಡಲು ಸಾಧ್ಯವಿರುವುದಿಲ್ಲ ಆದ್ದರಿಂದ ಸಾರ್ವಜನಿಕರು ಸಹಕರಿಸಿ ಗೋಡೆ ಪ್ರಕಟಣೆಯನ್ನು ಪ್ರಕಟಿಸಿದ್ದು ಬಿಟ್ಟರೆ ಸಾರ್ವಜನಿಕವಾಗಿ ಯಾವುದೇ ಮಾಹಿತಿ ಒದಗಿಸಿರುವುದಿಲ್ಲ. ಇದರಿಂದ ಜನರು ಪರದಾಡುವಂತಾಗಿದೆ.

ತಮ್ಮ ಕೆಲಸಕ್ಕಾಗಿ ನೆಲಮಂಗಲ ತಾಲೂಕಿನ ಗಡಿ ಗ್ರಾಮದಿಂದ ಬಂದಿದ್ದ ನಾರಾಯಣಸ್ವಾಮಿ ಮಾತನಾಡಿ, ಕಳೆದ ಎರಡು ದಿನಗಳಿಂದ ಎಸಿ ಕಚೇರಿಗೆ ಕೆಲಸದ ನಿಮಿತ್ತ ಬರುತ್ತಿದ್ದೇನೆ ನಿನ್ನೆಯ ದಿನ ಗೋಡೆ ಬರಹವನ್ನು ನೋಡಿ ವಾಪಸ್ ತೆರಳಿದ್ದೇನೆ ನಿನ್ನೆ(ಶನಿವಾರ) ಕಚೇರಿಗೆ ಬಂದರೂ ಉಪವಿಭಾಗಾಧಿಕಾರಿ ಅವರು ಕಚೇರಿಯಲ್ಲಿ ಇದ್ದರೂ ಸಾರ್ವಜನಿಕರಿಗೆ ಸಿಗದೇ ಮುಂದಿನ ವಾರ ಬನ್ನಿ ಎಂದು ಹಾರಿಕೆ ಹೇಳಿಕೆ ನೀಡಿ ತಪ್ಪಿಸಿಕೊಳ್ಳುತ್ತಿದ್ದಾರೆ.

ಯಾವುದಾದರೂ ಕೆಲಸವಿದ್ದರೇ ಅದನ್ನು ಬಹಿರಂಗವಾಗಿ ಪತ್ರಿಕಾ ಹೇಳಿಕೆ ಮುಖಾಂತರ ಸಾರ್ವಜನಿಕರಿಗೆ ಮುಟ್ಟಿಸಿದರೆ ದೂರದ ಊರುಗಳಿಂದ ಬರುವ ಜನ ತಮ್ಮ ಬೇರೆ ಕೆಲಸಗಳನ್ನು ನೋಡಿಕೊಳ್ಳುತ್ತಾರೆ. ಅಧಿಕಾರಿಗಳು ಸಾರ್ವಜನಿಕ ಸ್ನೇಹಿ ಕೆಲಸ‌ ಮಾಡದೇ ಬೇಜವಾಬ್ದಾರಿ ಮೆರೆದಿದ್ದಾರೆ ಎಂದು ಆರೋಪಿಸಿದ್ದಾರೆ.

Ramesh Babu

Journalist

Recent Posts

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

3 hours ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

7 hours ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

7 hours ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

15 hours ago

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

1 day ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

1 day ago