ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಕೆಲಸ ಕುಂಠಿತ: ಸಾರ್ವಜನಿಕರ ಪರದಾಟ

ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಇ-ಆಫೀಸ್ ಅನುಷ್ಠಾನ ಹಾಗೂ ಆರ್‌ಸಿಸಿಎಂಎಸ್ ಕಾರ್ಯ ಹಿನ್ನೆಲೆ ಕಳೆದ ನಾಲ್ಕು ದಿನಗಳಿಂದ ಸಾರ್ವಜನಿಕ ಕೆಲಸ ಕುಂಠಿತಗೊಂಡಿದೆ.

ಉಪವಿಭಾಗಾಧಿಕಾರಿ ಕಚೇರಿಗೆ ಪ್ರತಿನಿತ್ಯ ಜಿಲ್ಲೆಯ ನೆಲಮಂಗಲ, ಹೊಸಕೋಟೆ, ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವಿವಿಧ ಗ್ರಾಮಗಳಿಂದ ಜನರು ವಿವಿಧ ಕೆಲಸ ಕಾರ್ಯಗಳ ನಿಮಿತ್ತ ಬಂದು ಹೋಗುತ್ತಾರೆ.

ಎಸಿ ಕಚೇರಿಯಲ್ಲಿ ಆಗಸ್ಟ್ 17 ಮತ್ತು 18ರಂದು ಇ-ಆಫೀಸ್ ಅನುಷ್ಠಾನ ಹಾಗೂ ಆರ್‌ಸಿಸಿಎಂಎಸ್ ಕಾರ್ಯನಿರ್ವಹಣೆ ಪ್ರಗತಿಯಲ್ಲಿರುವುದರಿಂದ ಕಚೇರಿ ಸಿಬ್ಬಂದಿ ತಮ್ಮನ್ನು ಭೇಟಿ ಮಾಡಲು ಸಾಧ್ಯವಿರುವುದಿಲ್ಲ ಆದ್ದರಿಂದ ಸಾರ್ವಜನಿಕರು ಸಹಕರಿಸಿ ಗೋಡೆ ಪ್ರಕಟಣೆಯನ್ನು ಪ್ರಕಟಿಸಿದ್ದು ಬಿಟ್ಟರೆ ಸಾರ್ವಜನಿಕವಾಗಿ ಯಾವುದೇ ಮಾಹಿತಿ ಒದಗಿಸಿರುವುದಿಲ್ಲ. ಇದರಿಂದ ಜನರು ಪರದಾಡುವಂತಾಗಿದೆ.

ತಮ್ಮ ಕೆಲಸಕ್ಕಾಗಿ ನೆಲಮಂಗಲ ತಾಲೂಕಿನ ಗಡಿ ಗ್ರಾಮದಿಂದ ಬಂದಿದ್ದ ನಾರಾಯಣಸ್ವಾಮಿ ಮಾತನಾಡಿ, ಕಳೆದ ಎರಡು ದಿನಗಳಿಂದ ಎಸಿ ಕಚೇರಿಗೆ ಕೆಲಸದ ನಿಮಿತ್ತ ಬರುತ್ತಿದ್ದೇನೆ ನಿನ್ನೆಯ ದಿನ ಗೋಡೆ ಬರಹವನ್ನು ನೋಡಿ ವಾಪಸ್ ತೆರಳಿದ್ದೇನೆ ನಿನ್ನೆ(ಶನಿವಾರ) ಕಚೇರಿಗೆ ಬಂದರೂ ಉಪವಿಭಾಗಾಧಿಕಾರಿ ಅವರು ಕಚೇರಿಯಲ್ಲಿ ಇದ್ದರೂ ಸಾರ್ವಜನಿಕರಿಗೆ ಸಿಗದೇ ಮುಂದಿನ ವಾರ ಬನ್ನಿ ಎಂದು ಹಾರಿಕೆ ಹೇಳಿಕೆ ನೀಡಿ ತಪ್ಪಿಸಿಕೊಳ್ಳುತ್ತಿದ್ದಾರೆ.

ಯಾವುದಾದರೂ ಕೆಲಸವಿದ್ದರೇ ಅದನ್ನು ಬಹಿರಂಗವಾಗಿ ಪತ್ರಿಕಾ ಹೇಳಿಕೆ ಮುಖಾಂತರ ಸಾರ್ವಜನಿಕರಿಗೆ ಮುಟ್ಟಿಸಿದರೆ ದೂರದ ಊರುಗಳಿಂದ ಬರುವ ಜನ ತಮ್ಮ ಬೇರೆ ಕೆಲಸಗಳನ್ನು ನೋಡಿಕೊಳ್ಳುತ್ತಾರೆ. ಅಧಿಕಾರಿಗಳು ಸಾರ್ವಜನಿಕ ಸ್ನೇಹಿ ಕೆಲಸ‌ ಮಾಡದೇ ಬೇಜವಾಬ್ದಾರಿ ಮೆರೆದಿದ್ದಾರೆ ಎಂದು ಆರೋಪಿಸಿದ್ದಾರೆ.

Ramesh Babu

Journalist

Recent Posts

ಗುಂಡಿ ರಸ್ತೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳೇ ಬಲಿಪಶು: ಹದಗೆಟ್ಟ ರಸ್ತೆ–ನಿರ್ವಹಣೆ ಕೊರತೆ; ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುವ ಬಸ್‌ಗಳಿಂದ ಪ್ರಯಾಣಿಕರ ಪರದಾಟ

ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…

12 hours ago

ಗಜಮುಖನ ಆರಾಧನೆಯಲ್ಲಿ ಮಿಂದೆದ್ದ ದೊಡ್ಡಬಳ್ಳಾಪುರ: ಬೆಸ್ತರಪೇಟೆಯಲ್ಲಿ 14 ಅಡಿ ಎತ್ತರದ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ: 7ನೇ ವರ್ಷದ ಗಣೇಶೋತ್ಸವಕ್ಕೆ ಅದ್ಧೂರಿ ಮೆರುಗು

ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…

12 hours ago

ಗಣೇಶ ವಿಸರ್ಜನೆಗೆ ಗುಂಡಮಗೆರೆ ಕೆರೆ ಬಳಿ ವಿಶೇಷ ವ್ಯವಸ್ಥೆ

ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…

13 hours ago

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

18 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

24 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

2 days ago