ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಕೆಲಸ ಕುಂಠಿತ: ಸಾರ್ವಜನಿಕರ ಪರದಾಟ

ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಇ-ಆಫೀಸ್ ಅನುಷ್ಠಾನ ಹಾಗೂ ಆರ್‌ಸಿಸಿಎಂಎಸ್ ಕಾರ್ಯ ಹಿನ್ನೆಲೆ ಕಳೆದ ನಾಲ್ಕು ದಿನಗಳಿಂದ ಸಾರ್ವಜನಿಕ ಕೆಲಸ ಕುಂಠಿತಗೊಂಡಿದೆ.

ಉಪವಿಭಾಗಾಧಿಕಾರಿ ಕಚೇರಿಗೆ ಪ್ರತಿನಿತ್ಯ ಜಿಲ್ಲೆಯ ನೆಲಮಂಗಲ, ಹೊಸಕೋಟೆ, ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವಿವಿಧ ಗ್ರಾಮಗಳಿಂದ ಜನರು ವಿವಿಧ ಕೆಲಸ ಕಾರ್ಯಗಳ ನಿಮಿತ್ತ ಬಂದು ಹೋಗುತ್ತಾರೆ.

ಎಸಿ ಕಚೇರಿಯಲ್ಲಿ ಆಗಸ್ಟ್ 17 ಮತ್ತು 18ರಂದು ಇ-ಆಫೀಸ್ ಅನುಷ್ಠಾನ ಹಾಗೂ ಆರ್‌ಸಿಸಿಎಂಎಸ್ ಕಾರ್ಯನಿರ್ವಹಣೆ ಪ್ರಗತಿಯಲ್ಲಿರುವುದರಿಂದ ಕಚೇರಿ ಸಿಬ್ಬಂದಿ ತಮ್ಮನ್ನು ಭೇಟಿ ಮಾಡಲು ಸಾಧ್ಯವಿರುವುದಿಲ್ಲ ಆದ್ದರಿಂದ ಸಾರ್ವಜನಿಕರು ಸಹಕರಿಸಿ ಗೋಡೆ ಪ್ರಕಟಣೆಯನ್ನು ಪ್ರಕಟಿಸಿದ್ದು ಬಿಟ್ಟರೆ ಸಾರ್ವಜನಿಕವಾಗಿ ಯಾವುದೇ ಮಾಹಿತಿ ಒದಗಿಸಿರುವುದಿಲ್ಲ. ಇದರಿಂದ ಜನರು ಪರದಾಡುವಂತಾಗಿದೆ.

ತಮ್ಮ ಕೆಲಸಕ್ಕಾಗಿ ನೆಲಮಂಗಲ ತಾಲೂಕಿನ ಗಡಿ ಗ್ರಾಮದಿಂದ ಬಂದಿದ್ದ ನಾರಾಯಣಸ್ವಾಮಿ ಮಾತನಾಡಿ, ಕಳೆದ ಎರಡು ದಿನಗಳಿಂದ ಎಸಿ ಕಚೇರಿಗೆ ಕೆಲಸದ ನಿಮಿತ್ತ ಬರುತ್ತಿದ್ದೇನೆ ನಿನ್ನೆಯ ದಿನ ಗೋಡೆ ಬರಹವನ್ನು ನೋಡಿ ವಾಪಸ್ ತೆರಳಿದ್ದೇನೆ ನಿನ್ನೆ(ಶನಿವಾರ) ಕಚೇರಿಗೆ ಬಂದರೂ ಉಪವಿಭಾಗಾಧಿಕಾರಿ ಅವರು ಕಚೇರಿಯಲ್ಲಿ ಇದ್ದರೂ ಸಾರ್ವಜನಿಕರಿಗೆ ಸಿಗದೇ ಮುಂದಿನ ವಾರ ಬನ್ನಿ ಎಂದು ಹಾರಿಕೆ ಹೇಳಿಕೆ ನೀಡಿ ತಪ್ಪಿಸಿಕೊಳ್ಳುತ್ತಿದ್ದಾರೆ.

ಯಾವುದಾದರೂ ಕೆಲಸವಿದ್ದರೇ ಅದನ್ನು ಬಹಿರಂಗವಾಗಿ ಪತ್ರಿಕಾ ಹೇಳಿಕೆ ಮುಖಾಂತರ ಸಾರ್ವಜನಿಕರಿಗೆ ಮುಟ್ಟಿಸಿದರೆ ದೂರದ ಊರುಗಳಿಂದ ಬರುವ ಜನ ತಮ್ಮ ಬೇರೆ ಕೆಲಸಗಳನ್ನು ನೋಡಿಕೊಳ್ಳುತ್ತಾರೆ. ಅಧಿಕಾರಿಗಳು ಸಾರ್ವಜನಿಕ ಸ್ನೇಹಿ ಕೆಲಸ‌ ಮಾಡದೇ ಬೇಜವಾಬ್ದಾರಿ ಮೆರೆದಿದ್ದಾರೆ ಎಂದು ಆರೋಪಿಸಿದ್ದಾರೆ.

Ramesh Babu

Journalist

Recent Posts

ಹುಸ್ಕೂರಲ್ಲಿ ಶ್ರೀ ಸಪ್ಪಲಮ್ಮದೇವಿ–ದುರ್ಗಮ್ಮದೇವಿ ಜಾತ್ರಾ ಮಹೋತ್ಸವ ಸಂಭ್ರಮ

ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ ಶ್ರೀ ಸಪ್ಪಲಮ್ಮದೇವಿ ಹಾಗೂ ಶ್ರೀ ದುರ್ಗಮ್ಮದೇವಿ ಜಾತ್ರಾ ಮಹೋತ್ಸವವು ಭಕ್ತಿಭಾವ ಮತ್ತು ಸಡಗರದಿಂದ ನಡೆಯಿತು.…

13 hours ago

ಗೊಬ್ಬರದ ಚೀಲಗಳಡಿ ₹1.65 ಕೋಟಿ ಮೌಲ್ಯದ ಗೋವಾ ಮದ್ಯ ಸಾಗಾಟ: ವಿಜಯಪುರ ಪೊಲೀಸರಿಂದ ಅಂತರರಾಜ್ಯ ಜಾಲ ಪತ್ತೆ

ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟಿ ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಈ ವೇಳೆ…

15 hours ago

ಡೀಸೆಲ್ ದುಬಾರಿ, ಎತ್ತುಗಳ ಕೊರತೆ; ಸೈಕಲ್‌ಗೆ ಕುಂಟೆ ಜೋಡಿಸಿ ಕೃಷಿಯಲ್ಲಿ ಹೊಸ ಪ್ರಯೋಗ ಮಾಡಿದ ರೈತ ದಂಪತಿ

ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್‌ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ…

18 hours ago

‘ಫೊರೆನ್ಸಿಕ್ ತನಿಖೆಯಲ್ಲಿ ಕರ್ನಾಟಕಕ್ಕೆ ದೇಶದಲ್ಲೇ ಮುಂಚೂಣಿ ಸ್ಥಾನ’-ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್‌ಎಸ್‌ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…

1 day ago

ಜೂ. 28 ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…

2 days ago

24 ಗಂಟೆಯೊಳಗೆ ಸರಗಳ್ಳರ ಬಂಧನ: ₹2.96 ಲಕ್ಷ ಮೌಲ್ಯದ ಮಾಲು ವಶ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…

2 days ago