ಉಪ ಮುಖ್ಯಮಂತ್ರಿ ಡಿಕೆಶಿ ಕಾಂಗ್ರೆಸ್ ಪಕ್ಷದ ಹೊಸ ಹಿಂದುತ್ವವಾದಿಯಾಗಿ ಹೊರಹೊಮ್ಮುತ್ತಿದ್ದಾರೆಯೇ?: ಅಮಿತ್ ಶಾ ಜೊತೆಗೆ ಡಿಕೆಶಿ ಇರುವ ಫೋಟೋ ವೈರಲ್: ರಾಜಕೀಯ ಮತ್ತು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಇಶಾ ಫೌಂಡೇಶನ್ ನ ಮಹಾಶಿವರಾತ್ರಿ ಆಚರಣೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಭಾಗವಹಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ಉಭಯ ಪಕ್ಷದ ನಾಯಕರು ಒಟ್ಟಿಗೆ ಇರುವ ಫೋಟೋಗಳು ವೈರಲ್ ಆಗುತ್ತಿವೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಒಟ್ಟಿಗೆ‌ ಇರುವುದು ರಾಜಕೀಯವಾಗಿ ಮತ್ತು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಯಾಗುತ್ತಿದೆ.

ರಾಹುಲ್ ಗೆ ಅವಮಾನಿಸಿದ್ದ ಜಗ್ಗಿ ವಾಸುದೇವ್, ಅಮಿತ್ ಶಾ ಜೊತೆ ವೇದಿಕೆ ಹಂಚಿಕೆಕೊಂಡಿದ್ದಾರೆ. ಇದೆಲ್ಲಾ ಸರಿ ಅಲ್ಲ… ಎಂದು ಡಿಕೆಶಿಗೆ ಹೈಕಮಾಂಡ್ ವಾರ್ನಿಂಗ್‌ ಕೂಡ ಕೊಟ್ಟಿದೆ.

 

ಸದ್ಗುರು ಅವರ ಮಾತುಗಳಲ್ಲಿ ಆಳವಾದ ತತ್ವಗಳ ಜೊತೆ ಸೌಮ್ಯವಾದ ಹಾಸ್ಯದ ಸಂಯೋಜನೆ ಇರುತ್ತದೆ. ಬದುಕಿನ ಒಳಹುಗಳ‌ ಬಗ್ಗೆ ಸುದೀರ್ಘವಾಗಿ ಮಾತನಾಡಿದೆವು. ಗಂಭೀರ ವಿಚಾರಗಳ ಮಧ್ಯೆ, ಹಾಸ್ಯದ ಝಲಕ್ ಗಳು ಮನಸ್ಸಿಗೆ ಹಿತ ನೀಡಿದವು ಎಂದು ಎಕ್ಸ್ ಖಾತೆಯಲ್ಲಿ ಡಿಸಿಎಂ ಡಿಕೆಶಿ ಬರೆದುಕೊಂಡಿದ್ದಾರೆ.

ಜೀವನವೆಂದರೆ ಅನಂತ ಯಾತ್ರೆ. ಪ್ರತಿ ಕ್ಷಣವೂ ಒಂದು ಅಧ್ಯಾಯ, ಪ್ರತಿ ನಗುವೂ ಮತ್ತು ಆಲೋಚನೆಯೂ ನಮ್ಮ ಆಂತರಿಕ ಬೆಳಕಿಗೆ ಪೂರಕ. ನಿಜವಾದ ಸಂಪತ್ತು ಅಂದರೆ, ಆಂತರಿಕ ಶಾಂತಿ, ಆತ್ಮ-ಸಾಕ್ಷಾತ್ಕಾರ ಮತ್ತು ಆ ಭಾವನೆ, ಬದುಕಿನ ಪ್ರತಿಯೊಂದು ಕ್ಷಣದಲ್ಲಿ ಜೀವಂತವಾಗಿರುವ ಸತ್ಯ ಎಂದು ಬರೆದಿದ್ದಾರೆ.

ಬದುಕು, ಆಧ್ಯಾತ್ಮದ ಕುರಿತು ಸದ್ಗುರು ಅವರೊಂದಿಗೆ ಸುದೀರ್ಘ ಮಾತುಕತೆ. ಇಲ್ಲಿ ಜ್ಞಾನವು ನದಿಯಂತೆ ಹರಿಯಿತು, ಅವರ ಪ್ರತೀ ಮಾತುಗಳೂ ತಾರ್ಕಿತ ಸತ್ಯ ಎನಿಸಿದವು. ಜೀವನ, ಆಧ್ಯಾತ್ಮಿಕತೆ ಮತ್ತು ಅದರಾಚೆಗಿನ ನನ್ನ ಸಂದೇಹಗಳು – ಸದ್ಗುರುವಿನ ಸಮ್ಮುಖದಲ್ಲಿ ಅನಾವರಣಗೊಂಡವು, ಅವಕ್ಕೆ ಸೂಕ್ತ ಉತ್ತರಗಳೂ ಸಿಕ್ಕವು ಎಂದು ತಿಳಿಸಿದ್ದಾರೆ.

Ramesh Babu

Journalist

Recent Posts

ಮಳೆ ಕೈಕೊಟ್ಟಿತು, ರಾಗಿ ಕೈಬಿಟ್ಟಿತು: ಬೆಳೆಗೇ ಟ್ರ್ಯಾಕ್ಟರ್ ಹರಿಸಿದ ರೈತ: ದೊಡ್ಡಬಳ್ಳಾಪುರವನ್ನೂ ಬರಪೀಡಿತ ತಾಲೂಕು ಎಂದು ಘೋಷಿಸಲು ಆಗ್ರಹ: 3.5 ಎಕರೆ ರಾಗಿ ಬೆಳೆ ನಾಶ

ದೊಡ್ಡಬಳ್ಳಾಪುರ: ಮಳೆ ಕೈಕೊಟ್ಟ ಪರಿಣಾಮ ಬಿತ್ತಿದ್ದ ರಾಗಿ ಬೆಳೆ ಒಣಗಿ, ಕೈಗೆ ಬಾರದ ಸ್ಥಿತಿಗೆ ತಲುಪಿದ ಹಿನ್ನೆಲೆಯಲ್ಲಿ ಬೇಸರಗೊಂಡ ರೈತರೊಬ್ಬರು…

3 hours ago

ಚಿಕ್ಕನಹಳ್ಳಿ ಡೇರಿಗೆ 2.07 ಲಕ್ಷ ನಿವ್ವಳ ಲಾಭ: ಹೈನುಗಾರಿಕೆ ರೈತರ ಆರ್ಥಿಕ ಮೂಲ- ಸಿ.ಅಮರೇಶ್

ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…

8 hours ago

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…

1 day ago

ಬೆಸ್ಕಾಂ ವಿರುದ್ಧ ರೈತರ ಆಕ್ರೋಶ: 10 ತಾಸು ಗುಣಮಟ್ಟದ ವಿದ್ಯುತ್‌ಗೆ ಆಗ್ರಹ: ನಷ್ಟ ಬೆಳೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…

1 day ago

ಘಾಟಿ ತೇರಿನಬೀದಿ ಒತ್ತುವರಿ ತೆರವು; ವ್ಯಾಪಾರಸ್ಥರಲ್ಲಿ ಆತಂಕ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…

2 days ago

ಹೃದಯ ವೈಶಾಲ್ಯತೆ ಮತ್ತು ಶುದ್ಧತೆ…

" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…

2 days ago