ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಇಶಾ ಫೌಂಡೇಶನ್ ನ ಮಹಾಶಿವರಾತ್ರಿ ಆಚರಣೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಭಾಗವಹಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ಉಭಯ ಪಕ್ಷದ ನಾಯಕರು ಒಟ್ಟಿಗೆ ಇರುವ ಫೋಟೋಗಳು ವೈರಲ್ ಆಗುತ್ತಿವೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಒಟ್ಟಿಗೆ ಇರುವುದು ರಾಜಕೀಯವಾಗಿ ಮತ್ತು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಯಾಗುತ್ತಿದೆ.
ರಾಹುಲ್ ಗೆ ಅವಮಾನಿಸಿದ್ದ ಜಗ್ಗಿ ವಾಸುದೇವ್, ಅಮಿತ್ ಶಾ ಜೊತೆ ವೇದಿಕೆ ಹಂಚಿಕೆಕೊಂಡಿದ್ದಾರೆ. ಇದೆಲ್ಲಾ ಸರಿ ಅಲ್ಲ… ಎಂದು ಡಿಕೆಶಿಗೆ ಹೈಕಮಾಂಡ್ ವಾರ್ನಿಂಗ್ ಕೂಡ ಕೊಟ್ಟಿದೆ.
ಸದ್ಗುರು ಅವರ ಮಾತುಗಳಲ್ಲಿ ಆಳವಾದ ತತ್ವಗಳ ಜೊತೆ ಸೌಮ್ಯವಾದ ಹಾಸ್ಯದ ಸಂಯೋಜನೆ ಇರುತ್ತದೆ. ಬದುಕಿನ ಒಳಹುಗಳ ಬಗ್ಗೆ ಸುದೀರ್ಘವಾಗಿ ಮಾತನಾಡಿದೆವು. ಗಂಭೀರ ವಿಚಾರಗಳ ಮಧ್ಯೆ, ಹಾಸ್ಯದ ಝಲಕ್ ಗಳು ಮನಸ್ಸಿಗೆ ಹಿತ ನೀಡಿದವು ಎಂದು ಎಕ್ಸ್ ಖಾತೆಯಲ್ಲಿ ಡಿಸಿಎಂ ಡಿಕೆಶಿ ಬರೆದುಕೊಂಡಿದ್ದಾರೆ.
ಜೀವನವೆಂದರೆ ಅನಂತ ಯಾತ್ರೆ. ಪ್ರತಿ ಕ್ಷಣವೂ ಒಂದು ಅಧ್ಯಾಯ, ಪ್ರತಿ ನಗುವೂ ಮತ್ತು ಆಲೋಚನೆಯೂ ನಮ್ಮ ಆಂತರಿಕ ಬೆಳಕಿಗೆ ಪೂರಕ. ನಿಜವಾದ ಸಂಪತ್ತು ಅಂದರೆ, ಆಂತರಿಕ ಶಾಂತಿ, ಆತ್ಮ-ಸಾಕ್ಷಾತ್ಕಾರ ಮತ್ತು ಆ ಭಾವನೆ, ಬದುಕಿನ ಪ್ರತಿಯೊಂದು ಕ್ಷಣದಲ್ಲಿ ಜೀವಂತವಾಗಿರುವ ಸತ್ಯ ಎಂದು ಬರೆದಿದ್ದಾರೆ.
ಬದುಕು, ಆಧ್ಯಾತ್ಮದ ಕುರಿತು ಸದ್ಗುರು ಅವರೊಂದಿಗೆ ಸುದೀರ್ಘ ಮಾತುಕತೆ. ಇಲ್ಲಿ ಜ್ಞಾನವು ನದಿಯಂತೆ ಹರಿಯಿತು, ಅವರ ಪ್ರತೀ ಮಾತುಗಳೂ ತಾರ್ಕಿತ ಸತ್ಯ ಎನಿಸಿದವು. ಜೀವನ, ಆಧ್ಯಾತ್ಮಿಕತೆ ಮತ್ತು ಅದರಾಚೆಗಿನ ನನ್ನ ಸಂದೇಹಗಳು – ಸದ್ಗುರುವಿನ ಸಮ್ಮುಖದಲ್ಲಿ ಅನಾವರಣಗೊಂಡವು, ಅವಕ್ಕೆ ಸೂಕ್ತ ಉತ್ತರಗಳೂ ಸಿಕ್ಕವು ಎಂದು ತಿಳಿಸಿದ್ದಾರೆ.
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…