ಉರ್ದು ಪ್ರಾಥಮಿಕ ಬಾಲಕರ ಶಾಲೆಯಲ್ಲಿ ಅನುಮಾನಾಸ್ಪದ ಸ್ಫೋಟ: ವಿದ್ಯಾರ್ಥಿಗೆ ಗಾಯ: ಆಸ್ಪತ್ರೆಗೆ ದಾಖಲು

ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲೂಕು, ವಿಜಯಪುರ ಪಟ್ಟಣದ ಜಿಲ್ಲಾ ಗ್ರಂಥಾಲಯ ಮುಂಬಾಗದಲ್ಲಿರುವ, ಸರಕಾರಿ ಉರ್ದು ಬಾಲಕರ ಹಿರಿಯ ಪ್ರಾಥಮಿಕ ಶಾಲೆಯ ಶೌಚಾಲಯದಲ್ಲಿ ನೀರಿನ ಜಗ್ ಸ್ಫೋಟಗೊಂಡು 7 ನೇ ತರಗತಿ ವಿದ್ಯಾರ್ಥಿಗೆ ಗಾಯಗಳಾಗಿವೆ.

ಗಾಯಾಳುವನ್ನು ದೇವನಹಳ್ಳಿಯ ಆಕಾಶ್ ಆಸ್ಪತ್ರೆಗೆ ರವಾನಿಸಲಾಗಿದೆ.

ಶಾಲೆಯಲ್ಲಿ ಕಲಿಯಲು ಬಂದಿದ್ದ ವಿದ್ಯಾರ್ಥಿ, ಮೂತ್ರವಿಸರ್ಜನೆಗೆಂದು ಶೌಚಾಲಯಕ್ಕೆ ಹೋಗಿದ್ದು, ಶೌಚಾಲಯದಲ್ಲಿ ಸ್ಫೋಟಗೊಂಡ ಶಬ್ದವನ್ನು ಕೇಳಿ, ವಿದ್ಯಾರ್ಥಿ, ಬೇಗನೇ ತರಗತಿ‌ ಕೊಠಡಿಯೊಳಗೆ ಬಾರದಿರುವುದನ್ನು ಗಮನಿಸಿದ ಶಿಕ್ಷಕರು, ಬೇರೊಬ್ಬ ವಿದ್ಯಾರ್ಥಿಯನ್ನು ಕರೆದುಕೊಂಡು ಬರುವಂತೆ ಹೇಳಿದ್ದು, ವಿದ್ಯಾರ್ಥಿ ಹೋಗುವಷ್ಟರಲ್ಲಿ, ಶೌಚಾಲಯಕ್ಕೆ ಹೋಗಿದ್ದ ವಿದ್ಯಾರ್ಥಿಯ ಬಟ್ಟೆಗಳಿಗೆ ಬೆಂಕಿ ಹೊತ್ತಿಕೊಂಡಿರುವುದು ಗೊತ್ತಾಗಿದೆ.

ತಕ್ಷಣ ವಿದ್ಯಾರ್ಥಿಯನ್ನು ರಕ್ಷಣೆ ಮಾಡಿದ ಶಿಕ್ಷಕರು, ಕೂಡಲೇ, ವಿಜಯಪುರದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ, ದೇವನಹಳ್ಳಿಯ ಆಕಾಶ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.

ಸ್ಥಳಕ್ಕೆ ವಿಜಯಪುರ ಪೊಲೀಸರು ಭೇಟಿ‌‌‌ ನೀಡಿ ಪರಿಶೀಲನೆ ನಡೆಸಿದ್ದಾರೆ.

Ramesh Babu

Journalist

Recent Posts

ಪ್ರಸನ್ನ ಲಕ್ಷ್ಮಿವೆಂಕಟರಮಣ ರಥೋತ್ಸವ: ಸಹ್ಯಾದ್ರಿ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜನೆ

ದೊಡ್ಡಬಳ್ಳಾಪುರದ ತೇರಿನ ಬೀದಿಯಲ್ಲಿ ಪ್ರಸನ್ನ ಲಕ್ಷ್ಮಿವೆಂಕಟರಮಣ ರಥೋತ್ಸವ ಫೆ.3ರ ಮಂಗಳವಾರ ಅದ್ಧೂರಿಯಾಗಿ ನಡೆಯಿತು. ರಥೋತ್ಸವ ಅಂಗವಾಗಿ ಸಹ್ಯಾದ್ರಿ ಆಸ್ಪತ್ರೆ ವತಿಯಿಂದ…

16 hours ago

ರೈತರಿಗೆ ಗುಡ್ ನ್ಯೂಸ್: ‘ಪಿ’ ನಂಬರ್ ಜಮೀನುಗಳಿಗೆ ಪೋಡಿ ಭಾಗ್ಯ

ರೈತರಿಗೆ ಗುಡ್ ನ್ಯೂಸ್: 'ಪಿ' ನಂಬರ್ ಜಮೀನುಗಳಿಗೆ ಪೋಡಿ ಭಾಗ್ಯವನ್ನು ಯಶಸ್ವಿಯಾಗಿ ಪೂರ್ಣಗೊಳಿಸಲು ಜಿಲ್ಲಾಡಳಿತ ಸಕಲ ಸಿದ್ಧತೆ ನಡೆಸಲಾಗಿದೆ. ಬೆಂಗಳೂರು…

17 hours ago

ಭಾರತದ ರಿಪೋರ್ಟ್ ಕಾರ್ಡ್……..

ಇಲ್ಲಿದೆ ನೋಡಿ ಕೆಲವು ಕುತೂಹಲಕರ ಅಂಕಿಅಂಶಗಳು ಮತ್ತು ನಮ್ಮ ದೇಶದ ರಿಪೋರ್ಟ್ ಕಾರ್ಡ್..... ಇದು ಪಕ್ಷಾತೀವಾಗಿ ದೇಶದ ವಾಸ್ತವ ಪರಿಸ್ಥಿತಿ......‌.‌‌........…

1 day ago

ಯುವ ಕಾಂಗ್ರೆಸ್ ತಾ.ಪ್ರ.ಕಾ ಶಿವಕುಮಾರ್ ಆರ್.ವಿ ಅವರ ಜನ್ಮದಿನಾಚರಣೆ: ಹೂಮಾಲೆ ಹಾಕಿ ಹುಟ್ಟುಹಬ್ಬದ ಶುಭಕೋರಿದ ತೂಬಗೆರೆ ಹೋಬಳಿಯ ಯೂತ್ ಕಾಂಗ್ರೆಸ್ ಘಟಕದ ಅಧ್ಯಕ್ಷ ಎಚ್.ಎನ್ ನರಸಿಂಹಮೂರ್ತಿ

ಯುವ ಕಾಂಗ್ರೆಸ್ ಸಮಿತಿಯ ತಾಲೂಕು ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಆರ್.ವಿ ಅವರ ಜನ್ಮದಿನಾಚರಣೆ ಹಿನ್ನೆಲೆ ಕಾಂಗ್ರೆಸ್ ನಾಯಕರು, ಯುವ ಕಾಂಗ್ರೆಸ್,…

2 days ago

ವಕೀಲರು, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಮುನಿರಾಜು ಎಸ್.ಡಿ ಅವರ ಜನ್ಮದಿನಾಚರಣೆ: ಹೂಮಾಲೆ ಹಾಕಿ  ಹುಟ್ಟುಹಬ್ಬದ ಶುಭಕೋರಿದ ತೂಬಗೆರೆ ಹೋಬಳಿಯ ಯೂತ್ ಕಾಂಗ್ರೆಸ್ ಘಟಕದ ಅಧ್ಯಕ್ಷ ಎಚ್.ಎನ್ ನರಸಿಂಹಮೂರ್ತಿ

ವಕೀಲರು, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಮುನಿರಾಜು ಎಸ್.ಡಿ ಅವರ ಜನ್ಮದಿನಾಚರಣೆ ಹಿನ್ನೆಲೆ ಕಾಂಗ್ರೆಸ್ ನಾಯಕರು, ಯುವ ಕಾಂಗ್ರೆಸ್, ಮುಖಂಡರು, ಕಾರ್ಯಕರ್ತರು,…

2 days ago

ಡಯಾಲಿಸಿಸ್ ಅಂತಿಮವಲ್ಲ: ಮೃತ ದಾನಿದಾರ ಕಿಡ್ನಿಯಿಂದ ರೋಗಿಗೆ ಹೊಸ ಬದುಕು

ಬೆಂಗಳೂರು , ವೈಟ್‌ಫೀಲ್ದ್‌ - 48 ವರ್ಷದ ಉನ್ನಿಕೃಷ್ಣನ್ ಅವರ ಜೀವನ ಹಲವು ವರ್ಷಗಳಿಂದ ಡಯಾಲಿಸಿಸ್‌, ಔಷಧ ಮತ್ತುಬದುಕುವ ನಿರೀಕ್ಷೆಯಲ್ಲೇ…

2 days ago