ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲೂಕು, ವಿಜಯಪುರ ಪಟ್ಟಣದ ಜಿಲ್ಲಾ ಗ್ರಂಥಾಲಯ ಮುಂಬಾಗದಲ್ಲಿರುವ, ಸರಕಾರಿ ಉರ್ದು ಬಾಲಕರ ಹಿರಿಯ ಪ್ರಾಥಮಿಕ ಶಾಲೆಯ ಶೌಚಾಲಯದಲ್ಲಿ ನೀರಿನ ಜಗ್ ಸ್ಫೋಟಗೊಂಡು 7 ನೇ ತರಗತಿ ವಿದ್ಯಾರ್ಥಿಗೆ ಗಾಯಗಳಾಗಿವೆ.
ಗಾಯಾಳುವನ್ನು ದೇವನಹಳ್ಳಿಯ ಆಕಾಶ್ ಆಸ್ಪತ್ರೆಗೆ ರವಾನಿಸಲಾಗಿದೆ.
ಶಾಲೆಯಲ್ಲಿ ಕಲಿಯಲು ಬಂದಿದ್ದ ವಿದ್ಯಾರ್ಥಿ, ಮೂತ್ರವಿಸರ್ಜನೆಗೆಂದು ಶೌಚಾಲಯಕ್ಕೆ ಹೋಗಿದ್ದು, ಶೌಚಾಲಯದಲ್ಲಿ ಸ್ಫೋಟಗೊಂಡ ಶಬ್ದವನ್ನು ಕೇಳಿ, ವಿದ್ಯಾರ್ಥಿ, ಬೇಗನೇ ತರಗತಿ ಕೊಠಡಿಯೊಳಗೆ ಬಾರದಿರುವುದನ್ನು ಗಮನಿಸಿದ ಶಿಕ್ಷಕರು, ಬೇರೊಬ್ಬ ವಿದ್ಯಾರ್ಥಿಯನ್ನು ಕರೆದುಕೊಂಡು ಬರುವಂತೆ ಹೇಳಿದ್ದು, ವಿದ್ಯಾರ್ಥಿ ಹೋಗುವಷ್ಟರಲ್ಲಿ, ಶೌಚಾಲಯಕ್ಕೆ ಹೋಗಿದ್ದ ವಿದ್ಯಾರ್ಥಿಯ ಬಟ್ಟೆಗಳಿಗೆ ಬೆಂಕಿ ಹೊತ್ತಿಕೊಂಡಿರುವುದು ಗೊತ್ತಾಗಿದೆ.
ತಕ್ಷಣ ವಿದ್ಯಾರ್ಥಿಯನ್ನು ರಕ್ಷಣೆ ಮಾಡಿದ ಶಿಕ್ಷಕರು, ಕೂಡಲೇ, ವಿಜಯಪುರದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ, ದೇವನಹಳ್ಳಿಯ ಆಕಾಶ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.
ಸ್ಥಳಕ್ಕೆ ವಿಜಯಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಳೆದ ಎರಡ್ಮೂರು ವರ್ಷಗಳಿಂದ ರಾಜ್ಯ ಸರ್ಕಾರ ಬಾಕಿ ಉಳಿಸಿಕೊಂಡಿರುವ ಗುತ್ತಿಗೆದಾರರ 38 ಸಾವಿರ ಕೋಟಿ ಬಿಲ್ಗಾಗಿ ಆಗ್ರಹಿಸಿ ಮಾ.6ರಂದು ಬೆಂಗಳೂರಿನ…
ಫೆ.24ರಂದು ದೊಡ್ಡಬಳ್ಳಾಪುರ ನಗರದ ಬಸವ ಭವನದಲ್ಲಿ ಅಗಸ್ತ್ಯ ಅಂತರರಾಷ್ಟ್ರೀಯ ಸಂಸ್ಥೆಯ ವತಿಯಿಂದ ವಿಜ್ಞಾನ ರಸಪ್ರಶ್ನೆ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಈ…
ಹಾಸನ: ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿಯೊಬ್ಬರು ಚಿಕಿ*ತ್ಸೆ ಫಲಕಾರಿಯಾಗದೆ ಮೃ*ಪಟ್ಟ ಘಟನೆ ಹಾಸನ ನಗರದ ಹಿಮ್ಸ್ (HIMS) ಆಸ್ಪತ್ರೆಯಲ್ಲಿ ನಡೆದಿದೆ.…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಮಂಗಳವಾರ ಬೆಳಿಗ್ಗೆ ದೇವಾಲಯದ ಬಾಗಿಲಿನ ಬೀಗ…
ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಗಾರ್ಮೆಂಟ್ಸ್ ಕಾರ್ಖಾನೆ(ಶೈಲೇಂದ್ರ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್)ಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಳೆದ…
ಕರ್ನಾಟಕ ಸ್ಥಳೀಯ ಸಂಸ್ಥೆಗಳ(ಪಕ್ಷಾಂತರ ನಿಷೇಧ) ಅಧಿನಿಯಮ 4(2)(|||) ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ…