ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲೂಕು, ವಿಜಯಪುರ ಪಟ್ಟಣದ ಜಿಲ್ಲಾ ಗ್ರಂಥಾಲಯ ಮುಂಬಾಗದಲ್ಲಿರುವ, ಸರಕಾರಿ ಉರ್ದು ಬಾಲಕರ ಹಿರಿಯ ಪ್ರಾಥಮಿಕ ಶಾಲೆಯ ಶೌಚಾಲಯದಲ್ಲಿ ನೀರಿನ ಜಗ್ ಸ್ಫೋಟಗೊಂಡು 7 ನೇ ತರಗತಿ ವಿದ್ಯಾರ್ಥಿಗೆ ಗಾಯಗಳಾಗಿವೆ.
ಗಾಯಾಳುವನ್ನು ದೇವನಹಳ್ಳಿಯ ಆಕಾಶ್ ಆಸ್ಪತ್ರೆಗೆ ರವಾನಿಸಲಾಗಿದೆ.
ಶಾಲೆಯಲ್ಲಿ ಕಲಿಯಲು ಬಂದಿದ್ದ ವಿದ್ಯಾರ್ಥಿ, ಮೂತ್ರವಿಸರ್ಜನೆಗೆಂದು ಶೌಚಾಲಯಕ್ಕೆ ಹೋಗಿದ್ದು, ಶೌಚಾಲಯದಲ್ಲಿ ಸ್ಫೋಟಗೊಂಡ ಶಬ್ದವನ್ನು ಕೇಳಿ, ವಿದ್ಯಾರ್ಥಿ, ಬೇಗನೇ ತರಗತಿ ಕೊಠಡಿಯೊಳಗೆ ಬಾರದಿರುವುದನ್ನು ಗಮನಿಸಿದ ಶಿಕ್ಷಕರು, ಬೇರೊಬ್ಬ ವಿದ್ಯಾರ್ಥಿಯನ್ನು ಕರೆದುಕೊಂಡು ಬರುವಂತೆ ಹೇಳಿದ್ದು, ವಿದ್ಯಾರ್ಥಿ ಹೋಗುವಷ್ಟರಲ್ಲಿ, ಶೌಚಾಲಯಕ್ಕೆ ಹೋಗಿದ್ದ ವಿದ್ಯಾರ್ಥಿಯ ಬಟ್ಟೆಗಳಿಗೆ ಬೆಂಕಿ ಹೊತ್ತಿಕೊಂಡಿರುವುದು ಗೊತ್ತಾಗಿದೆ.
ತಕ್ಷಣ ವಿದ್ಯಾರ್ಥಿಯನ್ನು ರಕ್ಷಣೆ ಮಾಡಿದ ಶಿಕ್ಷಕರು, ಕೂಡಲೇ, ವಿಜಯಪುರದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ, ದೇವನಹಳ್ಳಿಯ ಆಕಾಶ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.
ಸ್ಥಳಕ್ಕೆ ವಿಜಯಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ದೊಡ್ಡಬಳ್ಳಾಪುರ: ತ್ರಿಬಲ್ ರೈಡಿಂಗ್ನಲ್ಲಿ ತೆರಳುತ್ತಿದ್ದ ಬೈಕ್ ಹಾಗೂ ಹಾಲಿನ ಕ್ಯಾಂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,…
ಪ್ರವಾಸ ಕಥನಗಳ ಬಗ್ಗೆ ಬಹಳ ಹಿಂದಿನಿಂದಲೂ ಸಾಕಷ್ಟು ಲೇಖನಗಳನ್ನು ಓದುತ್ತಲೇ ಇರುತ್ತೇನೆ. ಅದು ಪ್ರವಾಸೋದ್ಯಮಕ್ಕಾಗಿಯಲ್ಲ. ಏಕೆಂದರೆ ಪ್ರವಾಸ ವ್ಯಾಪಾರಿಗಳಿಗೆ ಒಂದು…
ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಲ್ಲಿ ವಾಡಿಕೆ ಮಳೆಗಿಂತ ಶೇಕಡ 33 ರಷ್ಟು ಮಳೆ ಕೊರತೆಯಾಗಿದ್ದು ಮುಂದಿನ ದಿನಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ…
ದೊಡ್ಡಬಳ್ಳಾಪುರ: ಸಮರ್ಪಕ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ಎದುರಿಸುತ್ತಿರುವ ದೊಡ್ಡಬಳ್ಳಾಪುರ ಕ್ಷೇತ್ರದ ರೈತರಿಗೆ ನೆರವಾಗುವ ಉದ್ದೇಶದಿಂದ, ಕ್ಷೇತ್ರದ ಪ್ರಮುಖ ಬೆಳೆಯಾದ…
ಗೌರಿಬಿದನೂರು: ಕೋಳಿ ವಿಚಾರವಾಗಿ ಆರಂಭವಾದ ನೆರೆಹೊರೆಯವರ ನಡುವಿನ ಜಗಳ ಗಂಭೀರ ಸ್ವರೂಪ ಪಡೆದು, ಸಾರ್ವಜನಿಕ ಆಸ್ಪತ್ರೆಯೊಳಗೂ ಗಲಾಟೆ ನಡೆದ ಘಟನೆ…
ಕನ್ನಡದ ಖ್ಯಾತ, ಪ್ರತಿಭಾವಂತ ಚಲನಚಿತ್ರ ನಟ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶ್ರೀ ಅನಂತನಾಗ್ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ದೆಹಲಿಯ…