ಉರ್ದು ಪ್ರಾಥಮಿಕ ಬಾಲಕರ ಶಾಲೆಯಲ್ಲಿ ಅನುಮಾನಾಸ್ಪದ ಸ್ಫೋಟ: ವಿದ್ಯಾರ್ಥಿಗೆ ಗಾಯ: ಆಸ್ಪತ್ರೆಗೆ ದಾಖಲು

ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲೂಕು, ವಿಜಯಪುರ ಪಟ್ಟಣದ ಜಿಲ್ಲಾ ಗ್ರಂಥಾಲಯ ಮುಂಬಾಗದಲ್ಲಿರುವ, ಸರಕಾರಿ ಉರ್ದು ಬಾಲಕರ ಹಿರಿಯ ಪ್ರಾಥಮಿಕ ಶಾಲೆಯ ಶೌಚಾಲಯದಲ್ಲಿ ನೀರಿನ ಜಗ್ ಸ್ಫೋಟಗೊಂಡು 7 ನೇ ತರಗತಿ ವಿದ್ಯಾರ್ಥಿಗೆ ಗಾಯಗಳಾಗಿವೆ.

ಗಾಯಾಳುವನ್ನು ದೇವನಹಳ್ಳಿಯ ಆಕಾಶ್ ಆಸ್ಪತ್ರೆಗೆ ರವಾನಿಸಲಾಗಿದೆ.

ಶಾಲೆಯಲ್ಲಿ ಕಲಿಯಲು ಬಂದಿದ್ದ ವಿದ್ಯಾರ್ಥಿ, ಮೂತ್ರವಿಸರ್ಜನೆಗೆಂದು ಶೌಚಾಲಯಕ್ಕೆ ಹೋಗಿದ್ದು, ಶೌಚಾಲಯದಲ್ಲಿ ಸ್ಫೋಟಗೊಂಡ ಶಬ್ದವನ್ನು ಕೇಳಿ, ವಿದ್ಯಾರ್ಥಿ, ಬೇಗನೇ ತರಗತಿ‌ ಕೊಠಡಿಯೊಳಗೆ ಬಾರದಿರುವುದನ್ನು ಗಮನಿಸಿದ ಶಿಕ್ಷಕರು, ಬೇರೊಬ್ಬ ವಿದ್ಯಾರ್ಥಿಯನ್ನು ಕರೆದುಕೊಂಡು ಬರುವಂತೆ ಹೇಳಿದ್ದು, ವಿದ್ಯಾರ್ಥಿ ಹೋಗುವಷ್ಟರಲ್ಲಿ, ಶೌಚಾಲಯಕ್ಕೆ ಹೋಗಿದ್ದ ವಿದ್ಯಾರ್ಥಿಯ ಬಟ್ಟೆಗಳಿಗೆ ಬೆಂಕಿ ಹೊತ್ತಿಕೊಂಡಿರುವುದು ಗೊತ್ತಾಗಿದೆ.

ತಕ್ಷಣ ವಿದ್ಯಾರ್ಥಿಯನ್ನು ರಕ್ಷಣೆ ಮಾಡಿದ ಶಿಕ್ಷಕರು, ಕೂಡಲೇ, ವಿಜಯಪುರದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ, ದೇವನಹಳ್ಳಿಯ ಆಕಾಶ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.

ಸ್ಥಳಕ್ಕೆ ವಿಜಯಪುರ ಪೊಲೀಸರು ಭೇಟಿ‌‌‌ ನೀಡಿ ಪರಿಶೀಲನೆ ನಡೆಸಿದ್ದಾರೆ.

Ramesh Babu

Journalist

Recent Posts

ಶಾಸಕ ಪ್ರದೀಪ್ ಈಶ್ವರ್ ಕಾರಿಗೆ ಮುತ್ತಿಗೆ; ಚಪ್ಪಲಿ ಎಸೆತ, ಉದ್ವಿಗ್ನ ವಾತಾವರಣ

ಚಿಕ್ಕಬಳ್ಳಾಪುರ: ಶಾಸಕ ಪ್ರದೀಪ್ ಈಶ್ವರ್ ಅವರ ಕಾರಿಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಬೆಂಬಲಿಗರು ಮುತ್ತಿಗೆ ಹಾಕಿದ ಘಟನೆ ಶನಿವಾರ…

4 hours ago

ಹೆಚ್‌ಡಿಕೆಗೆ ಶಾಸಕ ಪ್ರದೀಪ್ ಈಶ್ವರ್ ಟಾಂಗ್: “32 ಎಕರೆ ಆಸ್ತಿ ದಾಖಲೆ ನನ್ನ ಮುಖದ ಮೇಲೆ ಬಿಸಾಕಿ”

ದೇವನಹಳ್ಳಿ: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ…

5 hours ago

ಕೆಂಪೇಗೌಡರ ಹೆಸರನ್ನು ಶಾಶ್ವತಗೊಳಿಸಲು ಹೊಸ ಯೋಜನೆಗಳು: ಟೌನ್ ಪ್ಲಾನಿಂಗ್, ಕಾಲೇಜು, ಅಭಿವೃದ್ಧಿ ಕೇಂದ್ರ ಸ್ಥಾಪನೆ – ಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು: ನಾಡಪ್ರಭು ಕೆಂಪೇಗೌಡರ 517ನೇ ಜಯಂತಿಯ ಅಂಗವಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

7 hours ago

517ನೇ ಕೆಂಪೇಗೌಡ ಜಯಂತಿ: ವಿಮಾನ ನಿಲ್ದಾಣದಲ್ಲಿ ನಾಡಪ್ರಭುವಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪುಷ್ಪನಮನ

ದೇವನಹಳ್ಳಿ: 517ನೇ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಶನಿವಾರ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ…

9 hours ago

“ರೆಕಾರ್ಡ್ ಮಾಡಲು ನೀಡಿದ ಒಪ್ಪಿಗೆಯು ಪ್ರಸಾರ ಮಾಡಲು ನೀಡಿದ ಒಪ್ಪಿಗೆಯಲ್ಲ” – ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಪ್ರತೀಕಾರಾತ್ಮಕ ಅಶ್ಲೀಲತೆ , ಸೆಕ್ಸ್‌ಟಾರ್ಷನ್ ಹಾಗೂ ಬ್ಲ್ಯಾಕ್‌ಮೇಲ್ ವಿಡಿಯೋಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಕಡ್ಡಾಯವಾಗಿ ಎಫ್‌ಐಆರ್ ದಾಖಲಿಸುವಂತೆ ಗೃಹ ಇಲಾಖೆಗೆ ಸೂಚನೆ…

1 day ago

ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ ನೋಂದಣಿಗೆ ಕರೆ

ಕೃಷಿ ಇಲಾಖೆ ವತಿಯಿಂದ 2026-27 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ…

2 days ago