ಉಳುಮೆ ಮಾಡಿ ಜೀವನ ಸಾಗಿಸುವ ಬಡವರನ್ನು‌ ಒಕ್ಕಲೆಬ್ಬಿಸಿ, ಮನುಷ್ಯತ್ವ ಮತ್ತು ಕಾಯ್ದೆ ಎರಡನ್ನೂ ಮೀರಿ ಬಲಾಢ್ಯರ ಪರ ಅರಣ್ಯ ಇಲಾಖೆ ಕೆಲಸ ಮಾಡುತ್ತಿದೆ- ಸಿರಿಮನೆ ನಾಗರಾಜ್ ಆರೋಪ

ದಶಕಗಳಿಂದಲು ಉಳುಮೆ ಮಾಡುತ್ತ ಜೀವನ ನಡೆಸುತ್ತಿರುವ ಬಡವರನ್ನು‌ ಒಕ್ಕಲೆಬಿಸಿ, ಮನುಷ್ಯತ್ವ ಮತ್ತು ಕಾಯ್ದೆ ಎರಡನ್ನೂ ಮೀರಿ ಬಲಾಢ್ಯರ ಪರವಾಗಿ ಅರಣ್ಯ ಇಲಾಖೆ ಕೆಲಸ ಮಾಡುತ್ತಿದೆ ಎಂದು ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ರಾಜ್ಯ ಸಮಿತಿ ಹಿರಿಯ ಉಪಾಧ್ಯಕ್ಷ ಸಿರಿಮನೆ ನಾಗರಾಜ್ ಆರೋಪಿಸಿದರು.

ನಗರದಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲೂಕಿನ ಪೆರಮಗೊಂಡೆನಹಳ್ಳಿ ಸಮೀಪ ಪರಿಶಿಷ್ಟ ಜನಾಂಗಕ್ಕೆ ಸೇರಿರುವ ಕುಟುಂಬಗಳು ನಾಲ್ಕು ದಶಕಗಳಿಂದ ಉಳುಮೆ ಮಾಡಿಕೊಂಡು ಬೇಸಾಯ ಮಾಡುತ್ತಿರುವ ಹಾಗೂ ಸರ್ಕಾರದಿಂದ ಅನುದಾನ ಪಡೆದು ಮನೆಗಳನ್ನು ಕಟ್ಟಿಕೊಂಡಿರುವ ಜಮೀನುಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಒತ್ತುವರಿ ನೆಪದಲ್ಲಿ ತೆರವು ಮಾಡುತ್ತಿದ್ದಾರೆ. ಈ ತೆರವಿನ ವಿರುದ್ಧ ಹೈಕೋರ್ಟ್ ಆದೇಶವನ್ನು ಸಹ ಅರಣ್ಯ ಇಲಾಖೆ ಅಧಿಕಾರಿಗಳು ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳು ತಾಲ್ಲೂಕು ಮತ್ತು ಜಿಲ್ಲಾ ಆಡಳಿತದ ಯಾವುದೇ ಸೂಚನೆಗಳನ್ನು ಪಾಲಿಸದೆ, ಸಂವಿಧಾನದ ಅಡಿಯಲ್ಲಿ ಕೆಲಸ ಮಾಡಬೇಕು ಎನ್ನುವುದನ್ನು ಸಹ ಮರೆತು ಸರ್ವಾಧಿಕಾರಿಗಳಂತೆ ವರ್ತಿಸುತ್ತಿದ್ದಾರೆ ಎಂದು ದೂರಿದರು.

ಕರ್ನಾಟಕ ರಾಜ್ಯದಾದ್ಯಂತ ಇರುವಂತೆ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಭೂಮಿ ಮತ್ತು ವಸತಿ ಹಕ್ಕಿನ ವಿಷಯದಲ್ಲಿ ಹಲವಾರು ಸಮಸ್ಯೆಗಳಿವೆ, ಅವುಗಳ ಪರಿಹಾರಕ್ಕಾಗಿ ನಮ್ಮ ಸಂಘಟನೆಯ ವತಿಯಿಂದ ಹತ್ತು ಹಲವು ಹೋರಾಟಗಳು ನಡದಿವೆ. ಜಿಲ್ಲಾ / ತಾಲ್ಲೂಕು ಆಡಳಿತ ಈ ಭಾಗದಲ್ಲಿ ಏನೂ ಸಮಸ್ಯೆ ಇಲ್ಲ ಎನ್ನುವಂತೆ ಸುಮ್ಮನೆ ಕುಳಿತಿದೆ. ನಮ್ಮ ರಾಜ್ಯ ಸಮಿತಿಯ ನಿರಂತರ ಹೋರಾಟದ ಫಲವಾಗಿ ಸರ್ಕಾರ ಹಲವು ಜನಪರ ಕಾನೂನುಗಳನ್ನು ಜಾರಿಗೆ ತಂದಿದೆ ಎಂದರು.

ನಗರ ಪರಿದಿ ಮಿತಿಯ ನೆಪದಲ್ಲಿ ಬಡವರು ದಶಕಗಳಿಂದ ಸಾಗುವಳಿ ಮಾಡುತ್ತಿದ್ದ ಭೂಮಿಗೆ ಹಕ್ಕು ಪತ್ರಗಳನ್ನು ನೀಡದೆ ತಾಲ್ಲೂಕು ಆಡಳಿತ ವಂಚಿಸುತ್ತಿದೆ. ಆದರೆ ಇದೇ ಸಂದರ್ಭದಲ್ಲಿ ಹಣವಂತರಿಗೆ ನಗರಕ್ಕೆ ಕೂಗಳೆತೆ ದೂರದಲ್ಲೇ ಇರುವ ಕೋಟ್ಯಾಂತರ ರೂಪಾಯಿ ಬೆಲೆ ಬಾಳುವ ಅರಹಳ್ಳಿ ಗುಡ್ಡದಹಳ್ಳಿ ಗ್ರಾಮದ ಸರ್ವೇ ನಂಬರ್ 57ರಲ್ಲಿ 2023-324ರಲ್ಲಿ ಸುಮಾರು 6 ಎಕರೆ ಜಮೀನು ಮಂಜೂರು ಮಾಡಿದೆ. ದೊಡ್ಡಬಳ್ಳಾಪುರದಲ್ಲಿ ಸರ್ಕಾರದ ಕಾನೂನು ಎಲ್ಲರಿಗೂ ಒಂದೇ ಆಗಿಲ್ಲ. ಶ್ರೀಮಂತರಿಗೆ ಪ್ರತ್ಯೇಕ ಕಾನೂನು ಇದೆ ಎನ್ನುವುದನ್ನು ಈ ಪ್ರಕರಣದಿಂದ ಸ್ಪಷ್ಟಪಡಿಸಿದ್ದಾರೆ. ದಶಕಗಳಿಂದಲು ಬೇಸಾಯ ಮಾಡಿಕೊಂಡು ಇರುವ ಭೂಮಿ ವಂಚಿತ ಬಡಕುಟುಂಬಗಳಿಗೆ ಹಕ್ಕು ಪತ್ರಗಳ ಹಂಚಿಕೆ ಕೆಲಸ ತ್ವರಿತವಾಗಿ ಆಗಬೇಕು ಎಂದು ಆಗ್ರಹಿಸಿದರು.

ಸಮಿತಿಯ ತಾಲ್ಲೂಕು ಮುಖಂಡರಾದ ರಮೇಶ್ ಸಂಕ್ರಾತಿ, ಸುಬ್ರಮಣಿ ಮಾತನಾಡಿ, ತಾಲ್ಲೂಕಿನ ಗೊಲ್ಲಹಳ್ಳಿತಾಂಡ, ಗ್ರಾಮದ ಸರ್ವೇ ನಂ. 31 ಮತ್ತು 33, ಪೆರಮಗೊಂಡನಹಳ್ಳಿ, ಕೆಳಗಿನನಾಯಕರಂಡಹಳ್ಳಿ ಗ್ರಾಮದ ಸರ್ವೇ ನಂ.8ರಲ್ಲಿ ಕಂದಾಯ ಇಲಾಖೆ 1950 ರಿಂದ 2000ರವರೆಗೂ ಹಲವಾರು ಜನ ರೈತರಿಗೆ ಸಾಗುವಳಿ ಪತ್ರಗಳನ್ನು ನೀಡಿದೆ. ಆದರೆ ಈಗ ಇದೇ ಜಮೀನನ್ನು ಅರಣ್ಯ ಇಲಾಖೆ ಒತ್ತುವರಿ ನೆಪದಲ್ಲಿ ತೆರವು ಮಾಡುತ್ತಿದೆ ಎಂದು ಗುಡುಗಿದರು.

ತಾಲ್ಲೂಕಿನ ಹಲವೆಡೆ ರೈತರಿಗೆ ಜಮೀನು ಮಂಜೂರಾಗಿ ಹತ್ತಾರು ವರ್ಷಗಳೇ ಕಳೆದಿವೆ ಆದರೂ ಇವರಿಗೆ ಹಕ್ಕು ಪತ್ರ ಕೊಟ್ಟಿಲ್ಲ. ಕಂದಾಯ ಇಲಾಖೆಯವರು ಕೆಲವು ಹಳ್ಳಿಗಳಲ್ಲಿ ಬಲಾಡ್ಯರಿಗೆ ಹಾಗೂ ಅವರ ಹಿಂಬಾಲಕರ ಜಮೀನಿಗಳಿಗೆ ಯಾವುದೋ ಸರ್ಕಾಲ ಆದೇಶವನ್ನು ಅನ್ವಯವಾಗುವಂತೆ ತಿರುಚಿ ಕೆಲಸ ಮಾಡುತ್ತಿದ್ದಾರೆ. ಸಾಮಾನ್ಯ ರೈತರಿಗೆ ಕುಂಟು ನೆಪ ಹೊತ್ತಿ ಭೂಮಿ ಹಕ್ಕು ವಂಚಿತರನ್ನಾಗಿ ಮಾಡುವ ಕೆಲಸ ಭರದಿಂದ ಸಾಗಿದೆ ಎಂದರು.

ಕಂದಾಯ ಹಾಗೂ ಅರಣ್ಯ ಇಲಾಖೆ ವತಿಯಿಂದ ಜಂಟಿ ಸರ್ವೇ ನಡೆಸಲು ಮನವಿ ಮಾಡುತ್ತಲೇ ಬಂದಿದ್ದರು ಸಹ ಇದಕ್ಕೆ ಅಧಿಕಾರಿಗಳು ಆಸಕ್ತಿ ತೋರುತ್ತಿಲ್ಲ. ಒತ್ತುವರಿ ತೆರವಿಗೆ ಮಾತ್ರ ಮುಂದಾಗುತ್ತಿದ್ದಾರೆ. ಇದರ ವಿರುದ್ಧ ಹಲವಾರು ಬಾರಿ ಹೋರಾಟಗಳನ್ನು ನಡೆಸಿ ವಿಧಾನ ಸಭೆ, ಲೋಕಸಭಾ ಚುನಾವಣೆಗಳಲ್ಲಿ ಮತದಾನ ಬಹಿಷ್ಕರಿಸಲಾಗಿತ್ತು. ಆದರೆ ಆ ಸಂದರ್ಭದಲ್ಲಿ ಮಾತ್ರ ಅಧಿಕಾರಿಗಳು ಗ್ರಾಮಸ್ಥರ ಸಭೆ ನಡೆಸಿ ಸಮಸ್ಯೆ ಪರಿಹರಿಸುವ ಭರವಸೆ ನೀಡಿ ಮತದಾನದಲ್ಲಿ ಭಾಗವಹಿಸುವಂತೆ ಮಾಡುತ್ತಾರೆ. ಮತದಾನ ಮುಕ್ತಾಯವಾದ ನಂತರ ಈ ಬಗ್ಗೆ ಯಾವುದೇ ಕ್ರಮವನ್ನು ವಹಿಸುತ್ತಿಲ್ಲ. ನಮ್ಮ ಮನವಿಗೆ ಸೂಕ್ತ ರೀತಿಯಲಿ ಸ್ಪಂದಿಸದೇ ಇದ್ದರೆ ನವೆಂಬರ್ 5 ನಂತರ ಈ ಭಾಗದ ರೈತರು ದಯಾಮರಣಕ್ಕೆ ಅನುಮತಿ ನೀಡುವಂತೆ ಕೋರಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಗುವುದು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಸಮಿತಿಯ ರಾಜ್ಯ ಖಜಾಂಚಿ ಶ್ರೀರಂಗಚಾರ್, ಸ್ಥಳೀಯ ಮುಖಂಡರಾದ ಗೋಪಾಲನಾಯಕ್, ಪಾಪಣ್ಣ, ಮುನಿರಾಜ್, ಹನುಮನಾಯಕ್ ಇದ್ದರು.

Ramesh Babu

Journalist

Recent Posts

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌ ಜಾರಿಗೆ ಸಿಎಂ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌…

10 hours ago

ಸಂಭ್ರಮದ ಹಸಿ ಕರಗ ಮಹೋತ್ಸವ

ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…

12 hours ago

ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾ- ಬೆಂ ಗ್ರಾ ಜಿಪಂ ಸಿಇಒ ಡಾ. ವಾಸಂತಿ ಅಮರ್ ಬಿ.ವಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ 101 ಗ್ರಾಪಂ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾವಹಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಪಂ…

12 hours ago

ಒಳಮೀಸಲಾತಿ ಜಾರಿ ಸ್ವಾಗತಾರ್ಹ, ಹಲವು ವರ್ಷಗಳ ಹೋರಾಟಕ್ಕೆ ಸಿಕ್ಕ ಜಯ- ಕರ್ನಾಟಕ ಮಾದಾರ ಮಹಾಸಭಾ ಬೆಂ.ಗ್ರಾ ಜಿಲ್ಲಾಧ್ಯಕ್ಷ ಸುಬ್ಬರಾಜು

ದೊಡ್ಡಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ…

12 hours ago

Rain Update: ಬೆಂ ಗ್ರಾ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್

ಇಂದು ಸಂಜೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಜಿಲ್ಲಾ ವಿಪತ್ತು…

15 hours ago

ಹಸೆಮಣೆ ಏರಬೇಕಿದ್ದ ವರ ಅಪಘಾತದಲ್ಲಿ ಸಾವು: ಪ್ರೀವೆಡ್ಡಿಂಗ್ ಶೂಟ್ ಗೆ ವಧು ಕರೆತರಲು ತೆರಳಿದ್ದ ವೇಳೆ ಘಟನೆ

ಹಸೆಮಣೆ ಏರಬೇಕಿದ್ದ ವರ ಅಪಘಾತದಲ್ಲಿ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಮೂಗಲಿ ಗ್ರಾಮದ ಬಳಿ ಇಂದು…

18 hours ago