ಉಳುಮೆ ಮಾಡುವಾಗ ಪುರಾತನ ವಿಗ್ರಹ ಪತ್ತೆ: ವೀರಭದ್ರೇಶ್ವರ ಅಥವಾ ಚೆನ್ನಕೇಶವ ದೇವರ ವಿಗ್ರಹವೆಂಬ ಶಂಕೆ

ಗೌರಿಬಿದನೂರು ತಾಲೂಕಿನ ಮೇಳ್ಯಾ ಗ್ರಾಮದ ರೈತ ರಾಜು ಅವರ ತೋಟದಲ್ಲಿ ಪುರಾತನ ವಿಗ್ರಹವು ಬೆಳಕಿಗೆ ಬಂದಿದೆ.

ಗ್ರಾಮದ ರೈತ ರಾಜು ಟ್ರಾಕ್ಟರ್ ಮೂಲಕ ಉಳುಮೆ ಮಾಡುವಾಗ ಈ ವಿಗ್ರಹ ಪತ್ತೆಯಾಗಿದ್ದು, ಮೊದಲಿಗೆ ಈ ವಿಗ್ರಹವನ್ನು ವೀರಭದ್ರೇಶ್ವರ ಅಥವಾ ಚೆನ್ನಕೇಶವ ದೇವರ ವಿಗ್ರಹವೆಂಬ ಶಂಕೆ ವ್ಯಕ್ತಪಡಿಸಲಾಗಿತ್ತು.

ಗ್ರಾಮಸ್ಥರ ಪ್ರಕಾರ, ಈ ವಿಗ್ರಹವು ವಿಜಯನಗರ, ಚೋಳ ಅಥವಾ ಗಂಗರ ಸಾಮ್ರಾಜ್ಯದ ಕಾಲದ ಛಾಯೆಯನ್ನು ಹೊಂದಿದೆ ಎಂದು ಅಂದಾಜಿಸಲಾಗುತ್ತಿದೆ.

ಕಲ್ಲಿನಿಂದ ನಿರ್ಮಿತವಾಗಿರುವ ಈ ಪುರಾತನ ವಿಗ್ರಹವನ್ನು ನೋಡಿದಾಗ ಗ್ರಾಮಸ್ಥರು ಆಶ್ಚರ್ಯಗೊಂಡಿದ್ದಾರೆ. ರಾಜು ಅವರು ತೋಟದಲ್ಲಿ ಕೃಷಿ ಕಾರ್ಯನಿಮಿತ್ತ ಉಳುಮೆ ಮಾಡುವ ವೇಳೆ ಕಲ್ಲಿನ ಭಾಗದಂತೆ ಒಂದು ವಿಗ್ರಹದ ಭಾಗ ಕಾಣಿಸಿಕೊಂಡಿದೆ. ನಂತರ ಗ್ರಾಮಸ್ಥರು ಇದು ಪುರಾತನ ಕಾಲದ ವಿಗ್ರಹ ಎಂದು ಊಹಿಸಿದ್ದಾರೆ.

ತಕ್ಷಣವೇ ಅಧಿಕಾರಿಗಳಿಗೆ ವಿಗ್ರಹ ಪತ್ತೆಯ ಬಗ್ಗೆ ಮಾಹಿತಿ ನೀಡಲಾಗಿದೆ.

ಇನ್ನೂ ಈ ವಿಗ್ರಹದ ಕುರಿತು ಪುರತತ್ವ ವಿಜ್ಙಾನಿ ನರಸಿಂಹಮೂರ್ತಿ ಮಾತನಾಡಿ, ಈ ವಿಗ್ರಹ ನಳಂದ ಹಾಗೂ ಗಂಗರ ಕಾಳದ ವಿಗ್ರಹ ಎಂದು ತಿಳಿಯುತ್ತಿದ್ದು, ಇದು ಸೂರ್ಯ ದೇವರ ವಿಗ್ರಹ ಎಂದು ಗುರುತ್ತಿಸಿದ್ದಾರೆ.

ಇನ್ನೂ ಈಗಾಗಲೇ ಈ ಭಾಗದಲ್ಲಿ ತನಿಖೆಯನ್ನು ನಡೆಸಿದ ವೇಳೆ ಇಲ್ಲಿ ಕಾಲಭೈರವನ ದೇವಸ್ಥಾನ ಇತ್ತು ಎಂದು ತಿಳಿದು ಬಂದಿತ್ತು. ಆದರೆ ಈಗ ಸಾವಿರ ವರ್ಷಗಳ ಇತಿಹಾಸವಿರುವ ವಿಗ್ರಹ ಪತ್ತೆಯಾಗಿದ್ದು ಸಂಶೋದನೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

Ramesh Babu

Journalist

Recent Posts

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

24 minutes ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

14 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

15 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

16 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

16 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

20 hours ago