ಗೌರಿಬಿದನೂರು ತಾಲೂಕಿನ ಮೇಳ್ಯಾ ಗ್ರಾಮದ ರೈತ ರಾಜು ಅವರ ತೋಟದಲ್ಲಿ ಪುರಾತನ ವಿಗ್ರಹವು ಬೆಳಕಿಗೆ ಬಂದಿದೆ.
ಗ್ರಾಮದ ರೈತ ರಾಜು ಟ್ರಾಕ್ಟರ್ ಮೂಲಕ ಉಳುಮೆ ಮಾಡುವಾಗ ಈ ವಿಗ್ರಹ ಪತ್ತೆಯಾಗಿದ್ದು, ಮೊದಲಿಗೆ ಈ ವಿಗ್ರಹವನ್ನು ವೀರಭದ್ರೇಶ್ವರ ಅಥವಾ ಚೆನ್ನಕೇಶವ ದೇವರ ವಿಗ್ರಹವೆಂಬ ಶಂಕೆ ವ್ಯಕ್ತಪಡಿಸಲಾಗಿತ್ತು.
ಗ್ರಾಮಸ್ಥರ ಪ್ರಕಾರ, ಈ ವಿಗ್ರಹವು ವಿಜಯನಗರ, ಚೋಳ ಅಥವಾ ಗಂಗರ ಸಾಮ್ರಾಜ್ಯದ ಕಾಲದ ಛಾಯೆಯನ್ನು ಹೊಂದಿದೆ ಎಂದು ಅಂದಾಜಿಸಲಾಗುತ್ತಿದೆ.
ಕಲ್ಲಿನಿಂದ ನಿರ್ಮಿತವಾಗಿರುವ ಈ ಪುರಾತನ ವಿಗ್ರಹವನ್ನು ನೋಡಿದಾಗ ಗ್ರಾಮಸ್ಥರು ಆಶ್ಚರ್ಯಗೊಂಡಿದ್ದಾರೆ. ರಾಜು ಅವರು ತೋಟದಲ್ಲಿ ಕೃಷಿ ಕಾರ್ಯನಿಮಿತ್ತ ಉಳುಮೆ ಮಾಡುವ ವೇಳೆ ಕಲ್ಲಿನ ಭಾಗದಂತೆ ಒಂದು ವಿಗ್ರಹದ ಭಾಗ ಕಾಣಿಸಿಕೊಂಡಿದೆ. ನಂತರ ಗ್ರಾಮಸ್ಥರು ಇದು ಪುರಾತನ ಕಾಲದ ವಿಗ್ರಹ ಎಂದು ಊಹಿಸಿದ್ದಾರೆ.
ತಕ್ಷಣವೇ ಅಧಿಕಾರಿಗಳಿಗೆ ವಿಗ್ರಹ ಪತ್ತೆಯ ಬಗ್ಗೆ ಮಾಹಿತಿ ನೀಡಲಾಗಿದೆ.
ಇನ್ನೂ ಈ ವಿಗ್ರಹದ ಕುರಿತು ಪುರತತ್ವ ವಿಜ್ಙಾನಿ ನರಸಿಂಹಮೂರ್ತಿ ಮಾತನಾಡಿ, ಈ ವಿಗ್ರಹ ನಳಂದ ಹಾಗೂ ಗಂಗರ ಕಾಳದ ವಿಗ್ರಹ ಎಂದು ತಿಳಿಯುತ್ತಿದ್ದು, ಇದು ಸೂರ್ಯ ದೇವರ ವಿಗ್ರಹ ಎಂದು ಗುರುತ್ತಿಸಿದ್ದಾರೆ.
ಇನ್ನೂ ಈಗಾಗಲೇ ಈ ಭಾಗದಲ್ಲಿ ತನಿಖೆಯನ್ನು ನಡೆಸಿದ ವೇಳೆ ಇಲ್ಲಿ ಕಾಲಭೈರವನ ದೇವಸ್ಥಾನ ಇತ್ತು ಎಂದು ತಿಳಿದು ಬಂದಿತ್ತು. ಆದರೆ ಈಗ ಸಾವಿರ ವರ್ಷಗಳ ಇತಿಹಾಸವಿರುವ ವಿಗ್ರಹ ಪತ್ತೆಯಾಗಿದ್ದು ಸಂಶೋದನೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…