ಗೌರಿಬಿದನೂರು ತಾಲೂಕಿನ ಮೇಳ್ಯಾ ಗ್ರಾಮದ ರೈತ ರಾಜು ಅವರ ತೋಟದಲ್ಲಿ ಪುರಾತನ ವಿಗ್ರಹವು ಬೆಳಕಿಗೆ ಬಂದಿದೆ.
ಗ್ರಾಮದ ರೈತ ರಾಜು ಟ್ರಾಕ್ಟರ್ ಮೂಲಕ ಉಳುಮೆ ಮಾಡುವಾಗ ಈ ವಿಗ್ರಹ ಪತ್ತೆಯಾಗಿದ್ದು, ಮೊದಲಿಗೆ ಈ ವಿಗ್ರಹವನ್ನು ವೀರಭದ್ರೇಶ್ವರ ಅಥವಾ ಚೆನ್ನಕೇಶವ ದೇವರ ವಿಗ್ರಹವೆಂಬ ಶಂಕೆ ವ್ಯಕ್ತಪಡಿಸಲಾಗಿತ್ತು.
ಗ್ರಾಮಸ್ಥರ ಪ್ರಕಾರ, ಈ ವಿಗ್ರಹವು ವಿಜಯನಗರ, ಚೋಳ ಅಥವಾ ಗಂಗರ ಸಾಮ್ರಾಜ್ಯದ ಕಾಲದ ಛಾಯೆಯನ್ನು ಹೊಂದಿದೆ ಎಂದು ಅಂದಾಜಿಸಲಾಗುತ್ತಿದೆ.
ಕಲ್ಲಿನಿಂದ ನಿರ್ಮಿತವಾಗಿರುವ ಈ ಪುರಾತನ ವಿಗ್ರಹವನ್ನು ನೋಡಿದಾಗ ಗ್ರಾಮಸ್ಥರು ಆಶ್ಚರ್ಯಗೊಂಡಿದ್ದಾರೆ. ರಾಜು ಅವರು ತೋಟದಲ್ಲಿ ಕೃಷಿ ಕಾರ್ಯನಿಮಿತ್ತ ಉಳುಮೆ ಮಾಡುವ ವೇಳೆ ಕಲ್ಲಿನ ಭಾಗದಂತೆ ಒಂದು ವಿಗ್ರಹದ ಭಾಗ ಕಾಣಿಸಿಕೊಂಡಿದೆ. ನಂತರ ಗ್ರಾಮಸ್ಥರು ಇದು ಪುರಾತನ ಕಾಲದ ವಿಗ್ರಹ ಎಂದು ಊಹಿಸಿದ್ದಾರೆ.
ತಕ್ಷಣವೇ ಅಧಿಕಾರಿಗಳಿಗೆ ವಿಗ್ರಹ ಪತ್ತೆಯ ಬಗ್ಗೆ ಮಾಹಿತಿ ನೀಡಲಾಗಿದೆ.
ಇನ್ನೂ ಈ ವಿಗ್ರಹದ ಕುರಿತು ಪುರತತ್ವ ವಿಜ್ಙಾನಿ ನರಸಿಂಹಮೂರ್ತಿ ಮಾತನಾಡಿ, ಈ ವಿಗ್ರಹ ನಳಂದ ಹಾಗೂ ಗಂಗರ ಕಾಳದ ವಿಗ್ರಹ ಎಂದು ತಿಳಿಯುತ್ತಿದ್ದು, ಇದು ಸೂರ್ಯ ದೇವರ ವಿಗ್ರಹ ಎಂದು ಗುರುತ್ತಿಸಿದ್ದಾರೆ.
ಇನ್ನೂ ಈಗಾಗಲೇ ಈ ಭಾಗದಲ್ಲಿ ತನಿಖೆಯನ್ನು ನಡೆಸಿದ ವೇಳೆ ಇಲ್ಲಿ ಕಾಲಭೈರವನ ದೇವಸ್ಥಾನ ಇತ್ತು ಎಂದು ತಿಳಿದು ಬಂದಿತ್ತು. ಆದರೆ ಈಗ ಸಾವಿರ ವರ್ಷಗಳ ಇತಿಹಾಸವಿರುವ ವಿಗ್ರಹ ಪತ್ತೆಯಾಗಿದ್ದು ಸಂಶೋದನೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ಪ್ರತಿಭಾ ಪುರಸ್ಕಾರಗಳು ವಿದ್ಯಾರ್ಥಿಗಳ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸುವುದರ ಜೊತೆಗೆ ಇತರೆ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗುತ್ತವೆ ಎಂದು ಶಾಸಕ ಧೀರಜ್ ಮುನಿರಾಜು…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವಿವಿಧ ವಿಷಯಗಳ ಕುರಿತು…
ಬೆಂಗಳೂರು ಗ್ರಾಮಾಂತರ: ಸಾಲದ ಸುಳಿಯಲ್ಲಿ ಸಿಲುಕಿದ್ದ ವ್ಯಕ್ತಿಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ದೊಡ್ಡಸಾಗರಹಳ್ಳಿ…
ಸರ್ಕಾರಗಳ ಸಾಧನೋತ್ಸವ....... ಕರ್ನಾಟಕದ ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯನವರ 8ನೇ ವರ್ಷದ ( 5+3 ) ಸಾಧನಾ ಉತ್ಸವ, ಭಾರತದ…
ದೊಡ್ಡಬಳ್ಳಾಪುರ ತಾಲೂಕಿನ ತಿಪ್ಪೂರು ವ್ಯವಸಾಯ ಸೇವಾ ಸಹಕಾರ ಸಂಘ(ವಿಎಸ್ಎಸ್ ಎನ್) ಚುನಾವಣೆ ನಡೆದಿದ್ದು, ವಿಎಸ್ಎಸ್ ಎನ್ ನ ನೂತನ ಅಧ್ಯಕ್ಷರಾಗಿ…
ನೆಲಮಂಗಲ: ನೆಲಮಂಗಲದಲ್ಲಿ ನವಿಲುಗಳ ಸಾಮೂಹಿಕ ಸಾವು ಪ್ರಕರಣ ಬೆಳಕಿಗೆ ಬಂದಿದೆ. ಹಕ್ಕಿಜ್ವರ (Bird Flu)ಶಂಕೆಯಿಂದ ಸುಮಾರು 10-15 ನವಿಲುಗಳು ಸಾವನ್ನಪ್ಪಿದ…