ಉಳುಮೆ ಮಾಡುವಾಗ ಪುರಾತನ ವಿಗ್ರಹ ಪತ್ತೆ: ವೀರಭದ್ರೇಶ್ವರ ಅಥವಾ ಚೆನ್ನಕೇಶವ ದೇವರ ವಿಗ್ರಹವೆಂಬ ಶಂಕೆ

ಗೌರಿಬಿದನೂರು ತಾಲೂಕಿನ ಮೇಳ್ಯಾ ಗ್ರಾಮದ ರೈತ ರಾಜು ಅವರ ತೋಟದಲ್ಲಿ ಪುರಾತನ ವಿಗ್ರಹವು ಬೆಳಕಿಗೆ ಬಂದಿದೆ.

ಗ್ರಾಮದ ರೈತ ರಾಜು ಟ್ರಾಕ್ಟರ್ ಮೂಲಕ ಉಳುಮೆ ಮಾಡುವಾಗ ಈ ವಿಗ್ರಹ ಪತ್ತೆಯಾಗಿದ್ದು, ಮೊದಲಿಗೆ ಈ ವಿಗ್ರಹವನ್ನು ವೀರಭದ್ರೇಶ್ವರ ಅಥವಾ ಚೆನ್ನಕೇಶವ ದೇವರ ವಿಗ್ರಹವೆಂಬ ಶಂಕೆ ವ್ಯಕ್ತಪಡಿಸಲಾಗಿತ್ತು.

ಗ್ರಾಮಸ್ಥರ ಪ್ರಕಾರ, ಈ ವಿಗ್ರಹವು ವಿಜಯನಗರ, ಚೋಳ ಅಥವಾ ಗಂಗರ ಸಾಮ್ರಾಜ್ಯದ ಕಾಲದ ಛಾಯೆಯನ್ನು ಹೊಂದಿದೆ ಎಂದು ಅಂದಾಜಿಸಲಾಗುತ್ತಿದೆ.

ಕಲ್ಲಿನಿಂದ ನಿರ್ಮಿತವಾಗಿರುವ ಈ ಪುರಾತನ ವಿಗ್ರಹವನ್ನು ನೋಡಿದಾಗ ಗ್ರಾಮಸ್ಥರು ಆಶ್ಚರ್ಯಗೊಂಡಿದ್ದಾರೆ. ರಾಜು ಅವರು ತೋಟದಲ್ಲಿ ಕೃಷಿ ಕಾರ್ಯನಿಮಿತ್ತ ಉಳುಮೆ ಮಾಡುವ ವೇಳೆ ಕಲ್ಲಿನ ಭಾಗದಂತೆ ಒಂದು ವಿಗ್ರಹದ ಭಾಗ ಕಾಣಿಸಿಕೊಂಡಿದೆ. ನಂತರ ಗ್ರಾಮಸ್ಥರು ಇದು ಪುರಾತನ ಕಾಲದ ವಿಗ್ರಹ ಎಂದು ಊಹಿಸಿದ್ದಾರೆ.

ತಕ್ಷಣವೇ ಅಧಿಕಾರಿಗಳಿಗೆ ವಿಗ್ರಹ ಪತ್ತೆಯ ಬಗ್ಗೆ ಮಾಹಿತಿ ನೀಡಲಾಗಿದೆ.

ಇನ್ನೂ ಈ ವಿಗ್ರಹದ ಕುರಿತು ಪುರತತ್ವ ವಿಜ್ಙಾನಿ ನರಸಿಂಹಮೂರ್ತಿ ಮಾತನಾಡಿ, ಈ ವಿಗ್ರಹ ನಳಂದ ಹಾಗೂ ಗಂಗರ ಕಾಳದ ವಿಗ್ರಹ ಎಂದು ತಿಳಿಯುತ್ತಿದ್ದು, ಇದು ಸೂರ್ಯ ದೇವರ ವಿಗ್ರಹ ಎಂದು ಗುರುತ್ತಿಸಿದ್ದಾರೆ.

ಇನ್ನೂ ಈಗಾಗಲೇ ಈ ಭಾಗದಲ್ಲಿ ತನಿಖೆಯನ್ನು ನಡೆಸಿದ ವೇಳೆ ಇಲ್ಲಿ ಕಾಲಭೈರವನ ದೇವಸ್ಥಾನ ಇತ್ತು ಎಂದು ತಿಳಿದು ಬಂದಿತ್ತು. ಆದರೆ ಈಗ ಸಾವಿರ ವರ್ಷಗಳ ಇತಿಹಾಸವಿರುವ ವಿಗ್ರಹ ಪತ್ತೆಯಾಗಿದ್ದು ಸಂಶೋದನೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

Ramesh Babu

Journalist

Recent Posts

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

17 hours ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

1 day ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

1 day ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

2 days ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

2 days ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

2 days ago