Categories: ಆರೋಗ್ಯ

ಉಸಿರಾಟದಲ್ಲಿ ಸೀಟಿ ಶಬ್ಧ – ಅಪರೂಪದ ಚಿಕಿತ್ಸೆ ನೀಡಿ ಬದುಕು ಉಳಿಸಿದ ಮೆಡಿಕವರ್‌ ಆಸ್ಪತ್ರೆ ವೈದ್ಯರು

ವೈಟ್‌ ಫಿಲ್ದ್‌ , ಬೆಂಗಳೂರು : ಪಶ್ವಿಮ ಬಂಗಾಳದಲ್ಲಿದ್ದ ಬಾಲಕ ಆಟವಾಡುವಾಗ ತಪ್ಪಿ ಸೀಟಿಯನ್ನು ನುಂಗಿದ ಕಾರಣ, ಅದಕ್ಕೆ ಕೂಡಲೇ ಸರಿಯಾದ ಚಿಕಿತ್ಸೆ ಸಿಗದ ಹಿನ್ನೆಲೆ, ನ್ಯುಮೋನೀಯಾ ಶುರುವಾಗಿ ಬಾಲಕನ ಜೀವಕ್ಕೆ ಕಂಟಕ ಎದುರಾಗಿತ್ತು. ಬಳಿಕ ಬೆಂಗಳೂರಿನಲ್ಲಿರುವ ಮೆಡಿಕವರ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಬಳಿಕ ಬಾಲಕ ಸಂಪೂರ್ಣವಾಗಿ ಗುಣಮುಖವಾಗಿ ಮರಳಿ ತಮ್ಮೂರಿಗೆ ತೆರಳಿದ.

7 ವರ್ಷದ ಬಾಲಕ ಮಾತಾನಾಡುವಾಗ, ಕಿರಿಚಾಡುವಾಗ ಸೀಟಿ ಸೌಂಡ್‌ ಬರುತ್ತಾ ಇತ್ತು. ಏನಕ್ಕೆ ಹೀಗಾಗುತ್ತಾ ಇದೆ ಎಂದು ಹೆತ್ತವರು ಬಾಲಕನಲ್ಲಿ ಕೇಳಿದಾಗ, ಬಾಲಕ ಆಟವಾಡುತ್ತಾ ಇರುವಾಗ ಸೀಟಿಯನ್ನು ನುಂಗಿರೋದು ತಿಳಿದು ಬಂದಿದೆ. ಸುಮಾರು 2 ಸೆಂಟಿ ಮೀಟರ್‌ ಉದ್ದದ ಸೀಟಿಯನ್ನು ಬಾಲಕ ನುಂಗಿದ್ದ . ಹಾಗಾಗೀ ಆತನ ಹೆತ್ತವರು ಸ್ವಲ್ಪನೂ ತಡಮಾಡದೇ, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ತೆರಳಿದರು. ಅಲ್ಲಿ ಸಿಟಿ ಸ್ಕಾನ್‌ ಮಾಡಿಸಿ, ಬ್ರಾಂಕೋಸ್ಕೊಪಿ ಮೂಲಕ ಸೀಟಿಯನ್ನು ತೆಗೆಯುವ ಪ್ರಯತ್ನ ಮಾಡಿದಾಗ, ಅದು ಶ್ವಾಸನಾಳದಲ್ಲಿ ಗಟ್ಟಿಯಾಗಿ ಸಿಕ್ಕಿ ಹಾಕಿಕೊಂಡಿತ್ತು. ಇದರಿಂದ ಬಾಲಕನಿಗೆ ನ್ಯುಮೋನಿಯಾ ಕೂಡ ಶುರುವಾಗಿತ್ತು. ಸುಮಾರು ಹತ್ತು ದಿನಗಳ ಬಳಿಕ ಬೆಂಗಳೂರಿನಲ್ಲಿರುವ ಮೆಡಿಕವರ್‌ ಆಸ್ಪತ್ರೆಗೆ ಕರೆದುಕೊಂಡು ಬರುವಷ್ಟರಲ್ಲಿ ನ್ಯುಮೋನಿಯಾ ಹೆಚ್ಚಾಗಿತ್ತು. ಹಾಗಾಗೀ ಕೂಡಲೇ ಶ್ವಾಸಕೋಶತಜ್ಞ ಡಾ ಮಂಜುನಾಥ್‌ ಬಿ.ಜಿ ಅವರನ್ನು ಭೇಟಿ ಮಾಡಿ ಚಿಕಿತ್ಸೆ ಪಡೆದರು.

ನ್ಯುಮೋನಿಯಾ ಹೆಚ್ಚಾಗಿದ್ದ ಕಾರಣ ಬ್ರಾಂಕೋಸ್ಕೊಪಿ ಮೂಲಕ ಸೀಟಿಯನ್ನು ತೆಗೆಯುವ ಬದಲು ಆಧುನಿಕ ತಂತ್ರಜ್ಞಾನವಾದ 1.1 mm ಕ್ರಯೋಪ್ರೋಬ್ ಮೂಲಕ ಬಾಲಕ ನುಂಗಿರುವ ಸೀಟಿಯನ್ನು ಹೊರತೆಗೆಯಲಾಯಿತು. ಶಸ್ತ್ರಚಿಕಿತ್ಸೆ ಬಳಿಕ ಬಲ ಕೆಳಗಿನ ಶ್ವಾಸನಾಳದಲ್ಲಿ ರಕ್ತಸ್ರಾವ ಸ್ವಲ್ಪ ಉಂಟಾಗಿತ್ತು, ಹೆಪ್ಪು ಗಟ್ಟಿದ ರಕ್ತವನ್ನು ಕ್ರಯೋ ಬಳಸಿ ತೆಗೆದುಹಾಕಲಾಯಿತು. ಜತೆಗೆ ನ್ಯುಮೋನಿಯಾಗೂ ಕೂಡ ಸೂಕ್ತ ಚಿಕಿತ್ಸೆಯನ್ನು ನೀಡಲಾಗಿತ್ತು .

ಸಮಯೋಚಿತ ಮತ್ತು ಆಧುನಿಕ ಚಿಕಿತ್ಸೆಯಿಂದ ಗಂಭೀರ ಸಮಸ್ಯೆಗಳನ್ನು ತಪ್ಪಿಸಲಾಗುತ್ತದೆ ಮತ್ತು ರೋಗಿಯು ಸುರಕ್ಷಿವಾಗಿ ಚೇತರಿಕಯಾಗಲು ಅನುಕೂಲವಾಗುತ್ತದೆ. ಕ್ರಯೋಯಂಥ ಆಧುನಿಕ ತಂತ್ರಜ್ಞಾನದ ಮೂಲಕ ಈಗ ಇಂತಹ ಸಮಸ್ಯೆಗಳಿಗೆ ಬೇಗ ಪರಿಹಾರ ಹುಡುಕೋದಕ್ಕೆ ಅನುಕೂಲವಾಗುತ್ತದೆ ಎಂದು ಶ್ವಾಸಕೋಶತಜ್ಞ ಡಾ. ಮಂಜುನಾಥ್‌ ಬಿಜಿ ಅಭಿಪ್ರಾಯಪಟ್ಟಿದ್ದಾರೆ .

Ramesh Babu

Journalist

Recent Posts

ಕೆ.ಜಿ.ಹಳ್ಳಿ ಮೂಲಸೌಕರ್ಯ ಸಮಸ್ಯೆಗಳ ಪರಿಹಾರಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್ ಸೂಚನೆ

‘ಪ್ರಜಾಪ್ರಭುತ್ವದಲ್ಲಿ ಜನರೇ ಪ್ರಭುಗಳು. ಅವರು ಕೇಳಿದ ಕೆಲಸ ಮಾಡಿಕೊಡಬೇಕು, ವಿಳಂಬ ಮಾಡಬೇಡಿ’ ಎಂದು ಇಂಧನ ಸಚಿವ ಹಾಗೂ ಸರ್ವಜ್ಞ ನಗರ…

8 hours ago

ಯೂರಿಯಾ ಅಕ್ರಮ ದಾಸ್ತಾನು ಗೋದಾಮುಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳ ದಾಳಿ…18 ಲಕ್ಷ ಮೌಲ್ಯದ ಗೊಬ್ಬರ ವಶ..1296 ಮೂಟೆ ಯೂರಿಯಾ ವಶ…

ಅಕ್ರಮವಾಗಿ ರಸಗೊಬ್ಬರ ದಾಸ್ತಾನು ಮಾಡಲಾಗಿದ್ದ ಗೋದಾಮುಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ 18 ಲಕ್ಷ ಮೌಲ್ಯದ 1296…

9 hours ago

ಖಾಸಗಿ‌ ಕಂಪನಿ ಅವರಣದಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಅಸ್ಥಿಪಂಜರ ಪತ್ತೆ

ಹೊಂಗೆ ಮರದಲ್ಲಿ ನೇತಾಡುತ್ತಿರುವ ಸ್ಥಿತಿಯಲ್ಲಿ ತಲೆ ಬುರುಡೆ ಪತ್ತೆಯಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಬ್ಯಾಂಕ್ ಸರ್ಕಲ್…

14 hours ago

ಲಾರಿ ಪಲ್ಟಿ, ರಸ್ತೆಗೆ ಚೆಲ್ಲಿದ ಡೀಸೆಲ್: 112 ಸಿಬ್ಬಂದಿ ಸಮಯಪ್ರಜ್ಞೆಗೆ ಶ್ಲಾಘನೆ

ಸಿದ್ದಾಪುರ: ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯ ಜೋಗಿನ್ ಮಠ ಕ್ರಾಸ್ ಬಳಿ ಜಲ್ಲಿ ತುಂಬಿದ ಲಾರಿಯೊಂದು ರಸ್ತೆಗೆ ಉರುಳಿದ ಪರಿಣಾಮ,…

15 hours ago

ಹೆಂಡತಿಯ ಕೊಂ*ದು ಮನೆ ಬಳಿಯೇ ಹೂತು ಕಣ್ಮರೆ ಅಂತ ದೂರು ಕೊಟ್ಟ ಪಾಪಿ ಪತಿ…!

ದೇವರಹಿಪ್ಪರಗಿ: ‍ಪತ್ನಿಯನ್ನು ತಾನೇ ಕೊಂ*ದು ಶವವನ್ನು ಮನೆಯ ಆವರಣದಲ್ಲೇ ಹೂತುಹಾಕಿ ಆಕೆ ನಾಪತ್ತೆಯಾಗಿದ್ದಾಳೆ ಎಂದು ಕಥೆ ಕಟ್ಟಿದ್ದ ಆರೋಪಿಯನ್ನು ಬಂಧಿಸುವಲ್ಲಿ…

19 hours ago

ವಾಹನ ತಪಾಸಣ ಪೊಲೀಸರಿಗೆ ಹೆದರಿ ಜೀವ ಕಳೆದುಕೊಂಡ ಬೈಕ್ ಸವಾರ ಪತಿ….ಕಾಲುಗಳು ಮುರಿದು ಆಪರೇಷನ್ ರೂಮಿನಲ್ಲಿ  ಪತ್ನಿ….

ಬೈಕ್ ನಲ್ಲಿ ಪತ್ನಿಯೊಂದಿಗೆ ಸಂಬಂಧಿಕರ ಮನೆಯ ಸಾವಿಗೆ ತೆರಳುತ್ತಿದ್ದ ಬೈಕ್ ಸವಾರನೊಬ್ಬ ಹೆದ್ದಾರಿಯಲ್ಲಿ ವಾಹನ ತಪಾಸಣೆ ಮಾಡುತ್ತಿದ್ದ ಪೋಲೀಸರನ್ನು ಕಂಡು…

20 hours ago