Categories: ಆರೋಗ್ಯ

ಉಸಿರಾಟದಲ್ಲಿ ಸೀಟಿ ಶಬ್ಧ – ಅಪರೂಪದ ಚಿಕಿತ್ಸೆ ನೀಡಿ ಬದುಕು ಉಳಿಸಿದ ಮೆಡಿಕವರ್‌ ಆಸ್ಪತ್ರೆ ವೈದ್ಯರು

ವೈಟ್‌ ಫಿಲ್ದ್‌ , ಬೆಂಗಳೂರು : ಪಶ್ವಿಮ ಬಂಗಾಳದಲ್ಲಿದ್ದ ಬಾಲಕ ಆಟವಾಡುವಾಗ ತಪ್ಪಿ ಸೀಟಿಯನ್ನು ನುಂಗಿದ ಕಾರಣ, ಅದಕ್ಕೆ ಕೂಡಲೇ ಸರಿಯಾದ ಚಿಕಿತ್ಸೆ ಸಿಗದ ಹಿನ್ನೆಲೆ, ನ್ಯುಮೋನೀಯಾ ಶುರುವಾಗಿ ಬಾಲಕನ ಜೀವಕ್ಕೆ ಕಂಟಕ ಎದುರಾಗಿತ್ತು. ಬಳಿಕ ಬೆಂಗಳೂರಿನಲ್ಲಿರುವ ಮೆಡಿಕವರ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಬಳಿಕ ಬಾಲಕ ಸಂಪೂರ್ಣವಾಗಿ ಗುಣಮುಖವಾಗಿ ಮರಳಿ ತಮ್ಮೂರಿಗೆ ತೆರಳಿದ.

7 ವರ್ಷದ ಬಾಲಕ ಮಾತಾನಾಡುವಾಗ, ಕಿರಿಚಾಡುವಾಗ ಸೀಟಿ ಸೌಂಡ್‌ ಬರುತ್ತಾ ಇತ್ತು. ಏನಕ್ಕೆ ಹೀಗಾಗುತ್ತಾ ಇದೆ ಎಂದು ಹೆತ್ತವರು ಬಾಲಕನಲ್ಲಿ ಕೇಳಿದಾಗ, ಬಾಲಕ ಆಟವಾಡುತ್ತಾ ಇರುವಾಗ ಸೀಟಿಯನ್ನು ನುಂಗಿರೋದು ತಿಳಿದು ಬಂದಿದೆ. ಸುಮಾರು 2 ಸೆಂಟಿ ಮೀಟರ್‌ ಉದ್ದದ ಸೀಟಿಯನ್ನು ಬಾಲಕ ನುಂಗಿದ್ದ . ಹಾಗಾಗೀ ಆತನ ಹೆತ್ತವರು ಸ್ವಲ್ಪನೂ ತಡಮಾಡದೇ, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ತೆರಳಿದರು. ಅಲ್ಲಿ ಸಿಟಿ ಸ್ಕಾನ್‌ ಮಾಡಿಸಿ, ಬ್ರಾಂಕೋಸ್ಕೊಪಿ ಮೂಲಕ ಸೀಟಿಯನ್ನು ತೆಗೆಯುವ ಪ್ರಯತ್ನ ಮಾಡಿದಾಗ, ಅದು ಶ್ವಾಸನಾಳದಲ್ಲಿ ಗಟ್ಟಿಯಾಗಿ ಸಿಕ್ಕಿ ಹಾಕಿಕೊಂಡಿತ್ತು. ಇದರಿಂದ ಬಾಲಕನಿಗೆ ನ್ಯುಮೋನಿಯಾ ಕೂಡ ಶುರುವಾಗಿತ್ತು. ಸುಮಾರು ಹತ್ತು ದಿನಗಳ ಬಳಿಕ ಬೆಂಗಳೂರಿನಲ್ಲಿರುವ ಮೆಡಿಕವರ್‌ ಆಸ್ಪತ್ರೆಗೆ ಕರೆದುಕೊಂಡು ಬರುವಷ್ಟರಲ್ಲಿ ನ್ಯುಮೋನಿಯಾ ಹೆಚ್ಚಾಗಿತ್ತು. ಹಾಗಾಗೀ ಕೂಡಲೇ ಶ್ವಾಸಕೋಶತಜ್ಞ ಡಾ ಮಂಜುನಾಥ್‌ ಬಿ.ಜಿ ಅವರನ್ನು ಭೇಟಿ ಮಾಡಿ ಚಿಕಿತ್ಸೆ ಪಡೆದರು.

ನ್ಯುಮೋನಿಯಾ ಹೆಚ್ಚಾಗಿದ್ದ ಕಾರಣ ಬ್ರಾಂಕೋಸ್ಕೊಪಿ ಮೂಲಕ ಸೀಟಿಯನ್ನು ತೆಗೆಯುವ ಬದಲು ಆಧುನಿಕ ತಂತ್ರಜ್ಞಾನವಾದ 1.1 mm ಕ್ರಯೋಪ್ರೋಬ್ ಮೂಲಕ ಬಾಲಕ ನುಂಗಿರುವ ಸೀಟಿಯನ್ನು ಹೊರತೆಗೆಯಲಾಯಿತು. ಶಸ್ತ್ರಚಿಕಿತ್ಸೆ ಬಳಿಕ ಬಲ ಕೆಳಗಿನ ಶ್ವಾಸನಾಳದಲ್ಲಿ ರಕ್ತಸ್ರಾವ ಸ್ವಲ್ಪ ಉಂಟಾಗಿತ್ತು, ಹೆಪ್ಪು ಗಟ್ಟಿದ ರಕ್ತವನ್ನು ಕ್ರಯೋ ಬಳಸಿ ತೆಗೆದುಹಾಕಲಾಯಿತು. ಜತೆಗೆ ನ್ಯುಮೋನಿಯಾಗೂ ಕೂಡ ಸೂಕ್ತ ಚಿಕಿತ್ಸೆಯನ್ನು ನೀಡಲಾಗಿತ್ತು .

ಸಮಯೋಚಿತ ಮತ್ತು ಆಧುನಿಕ ಚಿಕಿತ್ಸೆಯಿಂದ ಗಂಭೀರ ಸಮಸ್ಯೆಗಳನ್ನು ತಪ್ಪಿಸಲಾಗುತ್ತದೆ ಮತ್ತು ರೋಗಿಯು ಸುರಕ್ಷಿವಾಗಿ ಚೇತರಿಕಯಾಗಲು ಅನುಕೂಲವಾಗುತ್ತದೆ. ಕ್ರಯೋಯಂಥ ಆಧುನಿಕ ತಂತ್ರಜ್ಞಾನದ ಮೂಲಕ ಈಗ ಇಂತಹ ಸಮಸ್ಯೆಗಳಿಗೆ ಬೇಗ ಪರಿಹಾರ ಹುಡುಕೋದಕ್ಕೆ ಅನುಕೂಲವಾಗುತ್ತದೆ ಎಂದು ಶ್ವಾಸಕೋಶತಜ್ಞ ಡಾ. ಮಂಜುನಾಥ್‌ ಬಿಜಿ ಅಭಿಪ್ರಾಯಪಟ್ಟಿದ್ದಾರೆ .

Ramesh Babu

Journalist

Recent Posts

ನಾನು ಜೆಡಿಎಸ್ ತಾಲೂಕು ಅಧ್ಯಕ್ಷ ಸ್ಥಾನಕ್ಕಾಗಿ ವರಿಷ್ಠರ ಬಳಿ ಕೇಳಿದ್ದೇನೆ- ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ಬದ್ಧ- ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ

ನಾನು ಜೆಡಿಎಸ್ ತಾಲೂಕು ಅಧ್ಯಕ್ಷ ಸ್ಥಾನಕ್ಕಾಗಿ ವರಿಷ್ಠರ ಬಳಿ ಕೇಳಿದ್ದೇನೆ. ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ. ಪಕ್ಷದ ವರಿಷ್ಠರು ಯಾವುದೇ…

7 hours ago

ಹೆಣ್ಣಿನ‌ ಹಿತರಕ್ಷಣೆಗಾಗಿ ಮಹಿಳಾ ಪೊಲೀಸ್ ಠಾಣೆ ಸದಾ ಸನ್ನದ್ಧ- ಮಹಿಳಾ ಪೊಲೀಸ್ ಠಾಣೆ ಸಬ್ ಇನ್ಸ್ ಪೆಕ್ಟರ್ ಪಂಕಜಾ

ಹೆಣ್ಣಿನ‌ ಹಿತರಕ್ಷಣೆಗಾಗಿ ದೊಡ್ಡಬಳ್ಳಾಪುರದಲ್ಲಿ ಮಹಿಳಾ ಪೊಲೀಸ್ ಠಾಣೆಯನ್ನು ಸ್ಥಾಪನೆ ಮಾಡಲಾಗಿದೆ..ಈ ಮಹಿಳಾ ಠಾಣೆಯಲ್ಲಿ ಅತ್ಯಾಚಾರ, ವರದಕ್ಷಿಣೆ ನಿಷೇಧ ಕಾಯ್ದೆ, ಮಕ್ಕಳ…

10 hours ago

ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ವ್ಯಕ್ತಿತ್ವ ಮತ್ತು ಸಾಧನೆ

ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಮುನ್ನ ( ಏಪ್ರಿಲ್ ‌14 ) ಅವರ ವ್ಯಕ್ತಿತ್ವ ಮತ್ತು…

20 hours ago

Документ_12

In der heutigen akademischen Welt steht die Qualität der schriftlichen Arbeiten im Mittelpunkt des Interesses.…

1 day ago

‘ಆಸರೆ’ ಯೋಜನೆ: ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ, ಆರೋಗ್ಯ ನೆರವು ಹಾಗೂ ಯೋಗಕ್ಷೇಮ ವಿಚಾರಣೆ

'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…

1 day ago

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು- ಸಿಎಂ ಸಿದ್ದರಾಮಯ್ಯ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ..…

1 day ago