Categories: ಆರೋಗ್ಯ

ಉಸಿರಾಟದಲ್ಲಿ ಸೀಟಿ ಶಬ್ಧ – ಅಪರೂಪದ ಚಿಕಿತ್ಸೆ ನೀಡಿ ಬದುಕು ಉಳಿಸಿದ ಮೆಡಿಕವರ್‌ ಆಸ್ಪತ್ರೆ ವೈದ್ಯರು

ವೈಟ್‌ ಫಿಲ್ದ್‌ , ಬೆಂಗಳೂರು : ಪಶ್ವಿಮ ಬಂಗಾಳದಲ್ಲಿದ್ದ ಬಾಲಕ ಆಟವಾಡುವಾಗ ತಪ್ಪಿ ಸೀಟಿಯನ್ನು ನುಂಗಿದ ಕಾರಣ, ಅದಕ್ಕೆ ಕೂಡಲೇ ಸರಿಯಾದ ಚಿಕಿತ್ಸೆ ಸಿಗದ ಹಿನ್ನೆಲೆ, ನ್ಯುಮೋನೀಯಾ ಶುರುವಾಗಿ ಬಾಲಕನ ಜೀವಕ್ಕೆ ಕಂಟಕ ಎದುರಾಗಿತ್ತು. ಬಳಿಕ ಬೆಂಗಳೂರಿನಲ್ಲಿರುವ ಮೆಡಿಕವರ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಬಳಿಕ ಬಾಲಕ ಸಂಪೂರ್ಣವಾಗಿ ಗುಣಮುಖವಾಗಿ ಮರಳಿ ತಮ್ಮೂರಿಗೆ ತೆರಳಿದ.

7 ವರ್ಷದ ಬಾಲಕ ಮಾತಾನಾಡುವಾಗ, ಕಿರಿಚಾಡುವಾಗ ಸೀಟಿ ಸೌಂಡ್‌ ಬರುತ್ತಾ ಇತ್ತು. ಏನಕ್ಕೆ ಹೀಗಾಗುತ್ತಾ ಇದೆ ಎಂದು ಹೆತ್ತವರು ಬಾಲಕನಲ್ಲಿ ಕೇಳಿದಾಗ, ಬಾಲಕ ಆಟವಾಡುತ್ತಾ ಇರುವಾಗ ಸೀಟಿಯನ್ನು ನುಂಗಿರೋದು ತಿಳಿದು ಬಂದಿದೆ. ಸುಮಾರು 2 ಸೆಂಟಿ ಮೀಟರ್‌ ಉದ್ದದ ಸೀಟಿಯನ್ನು ಬಾಲಕ ನುಂಗಿದ್ದ . ಹಾಗಾಗೀ ಆತನ ಹೆತ್ತವರು ಸ್ವಲ್ಪನೂ ತಡಮಾಡದೇ, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ತೆರಳಿದರು. ಅಲ್ಲಿ ಸಿಟಿ ಸ್ಕಾನ್‌ ಮಾಡಿಸಿ, ಬ್ರಾಂಕೋಸ್ಕೊಪಿ ಮೂಲಕ ಸೀಟಿಯನ್ನು ತೆಗೆಯುವ ಪ್ರಯತ್ನ ಮಾಡಿದಾಗ, ಅದು ಶ್ವಾಸನಾಳದಲ್ಲಿ ಗಟ್ಟಿಯಾಗಿ ಸಿಕ್ಕಿ ಹಾಕಿಕೊಂಡಿತ್ತು. ಇದರಿಂದ ಬಾಲಕನಿಗೆ ನ್ಯುಮೋನಿಯಾ ಕೂಡ ಶುರುವಾಗಿತ್ತು. ಸುಮಾರು ಹತ್ತು ದಿನಗಳ ಬಳಿಕ ಬೆಂಗಳೂರಿನಲ್ಲಿರುವ ಮೆಡಿಕವರ್‌ ಆಸ್ಪತ್ರೆಗೆ ಕರೆದುಕೊಂಡು ಬರುವಷ್ಟರಲ್ಲಿ ನ್ಯುಮೋನಿಯಾ ಹೆಚ್ಚಾಗಿತ್ತು. ಹಾಗಾಗೀ ಕೂಡಲೇ ಶ್ವಾಸಕೋಶತಜ್ಞ ಡಾ ಮಂಜುನಾಥ್‌ ಬಿ.ಜಿ ಅವರನ್ನು ಭೇಟಿ ಮಾಡಿ ಚಿಕಿತ್ಸೆ ಪಡೆದರು.

ನ್ಯುಮೋನಿಯಾ ಹೆಚ್ಚಾಗಿದ್ದ ಕಾರಣ ಬ್ರಾಂಕೋಸ್ಕೊಪಿ ಮೂಲಕ ಸೀಟಿಯನ್ನು ತೆಗೆಯುವ ಬದಲು ಆಧುನಿಕ ತಂತ್ರಜ್ಞಾನವಾದ 1.1 mm ಕ್ರಯೋಪ್ರೋಬ್ ಮೂಲಕ ಬಾಲಕ ನುಂಗಿರುವ ಸೀಟಿಯನ್ನು ಹೊರತೆಗೆಯಲಾಯಿತು. ಶಸ್ತ್ರಚಿಕಿತ್ಸೆ ಬಳಿಕ ಬಲ ಕೆಳಗಿನ ಶ್ವಾಸನಾಳದಲ್ಲಿ ರಕ್ತಸ್ರಾವ ಸ್ವಲ್ಪ ಉಂಟಾಗಿತ್ತು, ಹೆಪ್ಪು ಗಟ್ಟಿದ ರಕ್ತವನ್ನು ಕ್ರಯೋ ಬಳಸಿ ತೆಗೆದುಹಾಕಲಾಯಿತು. ಜತೆಗೆ ನ್ಯುಮೋನಿಯಾಗೂ ಕೂಡ ಸೂಕ್ತ ಚಿಕಿತ್ಸೆಯನ್ನು ನೀಡಲಾಗಿತ್ತು .

ಸಮಯೋಚಿತ ಮತ್ತು ಆಧುನಿಕ ಚಿಕಿತ್ಸೆಯಿಂದ ಗಂಭೀರ ಸಮಸ್ಯೆಗಳನ್ನು ತಪ್ಪಿಸಲಾಗುತ್ತದೆ ಮತ್ತು ರೋಗಿಯು ಸುರಕ್ಷಿವಾಗಿ ಚೇತರಿಕಯಾಗಲು ಅನುಕೂಲವಾಗುತ್ತದೆ. ಕ್ರಯೋಯಂಥ ಆಧುನಿಕ ತಂತ್ರಜ್ಞಾನದ ಮೂಲಕ ಈಗ ಇಂತಹ ಸಮಸ್ಯೆಗಳಿಗೆ ಬೇಗ ಪರಿಹಾರ ಹುಡುಕೋದಕ್ಕೆ ಅನುಕೂಲವಾಗುತ್ತದೆ ಎಂದು ಶ್ವಾಸಕೋಶತಜ್ಞ ಡಾ. ಮಂಜುನಾಥ್‌ ಬಿಜಿ ಅಭಿಪ್ರಾಯಪಟ್ಟಿದ್ದಾರೆ .

Ramesh Babu

Journalist

Recent Posts

ಕಾಲೇಜಿನಿಂದ ಸಹೋದರನನ್ನು ಮನೆಗೆ ಕರೆದುಕೊಂಡು ಬರುವಾಗ ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ನಲ್ಲಿದ್ದ ಅಣ್ಣ ಸಾವು, ತಮ್ಮನಿಗೆ ಗಾಯ

ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…

1 hour ago

ಸರ್ಕಾರಿ ಆಸ್ಪತ್ರೆಯಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ರೌಂಡ್ಸ್​

ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…

3 hours ago

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

18 hours ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

19 hours ago

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

1 day ago

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್​​ಪಿ ಗುಂಜನ್…

1 day ago