Categories: ಆರೋಗ್ಯ

ಉಸಿರಾಟದಲ್ಲಿ ಸೀಟಿ ಶಬ್ಧ – ಅಪರೂಪದ ಚಿಕಿತ್ಸೆ ನೀಡಿ ಬದುಕು ಉಳಿಸಿದ ಮೆಡಿಕವರ್‌ ಆಸ್ಪತ್ರೆ ವೈದ್ಯರು

ವೈಟ್‌ ಫಿಲ್ದ್‌ , ಬೆಂಗಳೂರು : ಪಶ್ವಿಮ ಬಂಗಾಳದಲ್ಲಿದ್ದ ಬಾಲಕ ಆಟವಾಡುವಾಗ ತಪ್ಪಿ ಸೀಟಿಯನ್ನು ನುಂಗಿದ ಕಾರಣ, ಅದಕ್ಕೆ ಕೂಡಲೇ ಸರಿಯಾದ ಚಿಕಿತ್ಸೆ ಸಿಗದ ಹಿನ್ನೆಲೆ, ನ್ಯುಮೋನೀಯಾ ಶುರುವಾಗಿ ಬಾಲಕನ ಜೀವಕ್ಕೆ ಕಂಟಕ ಎದುರಾಗಿತ್ತು. ಬಳಿಕ ಬೆಂಗಳೂರಿನಲ್ಲಿರುವ ಮೆಡಿಕವರ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಬಳಿಕ ಬಾಲಕ ಸಂಪೂರ್ಣವಾಗಿ ಗುಣಮುಖವಾಗಿ ಮರಳಿ ತಮ್ಮೂರಿಗೆ ತೆರಳಿದ.

7 ವರ್ಷದ ಬಾಲಕ ಮಾತಾನಾಡುವಾಗ, ಕಿರಿಚಾಡುವಾಗ ಸೀಟಿ ಸೌಂಡ್‌ ಬರುತ್ತಾ ಇತ್ತು. ಏನಕ್ಕೆ ಹೀಗಾಗುತ್ತಾ ಇದೆ ಎಂದು ಹೆತ್ತವರು ಬಾಲಕನಲ್ಲಿ ಕೇಳಿದಾಗ, ಬಾಲಕ ಆಟವಾಡುತ್ತಾ ಇರುವಾಗ ಸೀಟಿಯನ್ನು ನುಂಗಿರೋದು ತಿಳಿದು ಬಂದಿದೆ. ಸುಮಾರು 2 ಸೆಂಟಿ ಮೀಟರ್‌ ಉದ್ದದ ಸೀಟಿಯನ್ನು ಬಾಲಕ ನುಂಗಿದ್ದ . ಹಾಗಾಗೀ ಆತನ ಹೆತ್ತವರು ಸ್ವಲ್ಪನೂ ತಡಮಾಡದೇ, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ತೆರಳಿದರು. ಅಲ್ಲಿ ಸಿಟಿ ಸ್ಕಾನ್‌ ಮಾಡಿಸಿ, ಬ್ರಾಂಕೋಸ್ಕೊಪಿ ಮೂಲಕ ಸೀಟಿಯನ್ನು ತೆಗೆಯುವ ಪ್ರಯತ್ನ ಮಾಡಿದಾಗ, ಅದು ಶ್ವಾಸನಾಳದಲ್ಲಿ ಗಟ್ಟಿಯಾಗಿ ಸಿಕ್ಕಿ ಹಾಕಿಕೊಂಡಿತ್ತು. ಇದರಿಂದ ಬಾಲಕನಿಗೆ ನ್ಯುಮೋನಿಯಾ ಕೂಡ ಶುರುವಾಗಿತ್ತು. ಸುಮಾರು ಹತ್ತು ದಿನಗಳ ಬಳಿಕ ಬೆಂಗಳೂರಿನಲ್ಲಿರುವ ಮೆಡಿಕವರ್‌ ಆಸ್ಪತ್ರೆಗೆ ಕರೆದುಕೊಂಡು ಬರುವಷ್ಟರಲ್ಲಿ ನ್ಯುಮೋನಿಯಾ ಹೆಚ್ಚಾಗಿತ್ತು. ಹಾಗಾಗೀ ಕೂಡಲೇ ಶ್ವಾಸಕೋಶತಜ್ಞ ಡಾ ಮಂಜುನಾಥ್‌ ಬಿ.ಜಿ ಅವರನ್ನು ಭೇಟಿ ಮಾಡಿ ಚಿಕಿತ್ಸೆ ಪಡೆದರು.

ನ್ಯುಮೋನಿಯಾ ಹೆಚ್ಚಾಗಿದ್ದ ಕಾರಣ ಬ್ರಾಂಕೋಸ್ಕೊಪಿ ಮೂಲಕ ಸೀಟಿಯನ್ನು ತೆಗೆಯುವ ಬದಲು ಆಧುನಿಕ ತಂತ್ರಜ್ಞಾನವಾದ 1.1 mm ಕ್ರಯೋಪ್ರೋಬ್ ಮೂಲಕ ಬಾಲಕ ನುಂಗಿರುವ ಸೀಟಿಯನ್ನು ಹೊರತೆಗೆಯಲಾಯಿತು. ಶಸ್ತ್ರಚಿಕಿತ್ಸೆ ಬಳಿಕ ಬಲ ಕೆಳಗಿನ ಶ್ವಾಸನಾಳದಲ್ಲಿ ರಕ್ತಸ್ರಾವ ಸ್ವಲ್ಪ ಉಂಟಾಗಿತ್ತು, ಹೆಪ್ಪು ಗಟ್ಟಿದ ರಕ್ತವನ್ನು ಕ್ರಯೋ ಬಳಸಿ ತೆಗೆದುಹಾಕಲಾಯಿತು. ಜತೆಗೆ ನ್ಯುಮೋನಿಯಾಗೂ ಕೂಡ ಸೂಕ್ತ ಚಿಕಿತ್ಸೆಯನ್ನು ನೀಡಲಾಗಿತ್ತು .

ಸಮಯೋಚಿತ ಮತ್ತು ಆಧುನಿಕ ಚಿಕಿತ್ಸೆಯಿಂದ ಗಂಭೀರ ಸಮಸ್ಯೆಗಳನ್ನು ತಪ್ಪಿಸಲಾಗುತ್ತದೆ ಮತ್ತು ರೋಗಿಯು ಸುರಕ್ಷಿವಾಗಿ ಚೇತರಿಕಯಾಗಲು ಅನುಕೂಲವಾಗುತ್ತದೆ. ಕ್ರಯೋಯಂಥ ಆಧುನಿಕ ತಂತ್ರಜ್ಞಾನದ ಮೂಲಕ ಈಗ ಇಂತಹ ಸಮಸ್ಯೆಗಳಿಗೆ ಬೇಗ ಪರಿಹಾರ ಹುಡುಕೋದಕ್ಕೆ ಅನುಕೂಲವಾಗುತ್ತದೆ ಎಂದು ಶ್ವಾಸಕೋಶತಜ್ಞ ಡಾ. ಮಂಜುನಾಥ್‌ ಬಿಜಿ ಅಭಿಪ್ರಾಯಪಟ್ಟಿದ್ದಾರೆ .

Ramesh Babu

Journalist

Recent Posts

ರೀಲ್ಸ್ ಮಾಡುವ ಮಹಿಳೆಯರ ಜೊತೆ ರೀಲ್ಸ್ ಮಂಜಣ್ಣ ಹೆಲ್ಮೆಟ್ ಇಲ್ಲದೇ ಬೈಕಿನಲ್ಲಿ ತ್ರಿಬಲ್ ರೈಡಿಂಗ್: ಸಾಮಾಜಿಕ‌ ಜಾಲತಣದಲ್ಲಿ ವಿಡಿಯೋ ಪೋಸ್ಟ್: ಪೊಲೀಸರಿಂದ ಬಿತ್ತು ಫೈನ್: ಕೊನೆಗೆ ಫೈನ್ ಕಟ್ಟಿ ಕ್ಷಮೆಯಾಚನೆ

ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…

3 hours ago

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

16 hours ago

ಪ್ರತ್ಯೇಕ ಅಪಘಾತ ಕೇಸ್ : ಮೂವರು ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌ಗಳು ಸೇರಿ ನಾಲ್ವರು ಸಾವು: ಹಲವರಿಗೆ ಗಾಯ

ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್‌ಸ್ಪೆಕ್ಟರ್‌ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…

17 hours ago

ಕಾನ್ಸಿರಾಮ್ ಅವರ 92ನೇ ಹುಟ್ಟುಹಬ್ಬ: ಬಹುಜನರ ಏಳಿಗೆಗಾಗಿ ಕಾನ್ಸಿರಾಮ್ ಕೊಡುಗೆ ಅಪಾರ- ನಂದಿಗುಂದ ಪಿ‌.ವೆಂಕಟೇಶ್

ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್‌) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್‌…

18 hours ago

ಪುರುಷಾಧಿಪತ್ಯಕ್ಕೆ ಸೆಡ್ಡು ಹೊಡೆದು, ತಂದೆ ಅಂತ್ಯಸಂಸ್ಕಾರ ಮಾಡಿದ ಹೆಣ್ಣುಮಕ್ಕಳು

ಚಿಕ್ಕಮಗಳೂರು: ಪುರುಷ ಪ್ರಾಧಾನ್ಯತೆಯ ಸಂಪ್ರದಾಯಕ್ಕೆ ತಿಲಾಂಜಲಿ ಇಟ್ಟು, ಹೆಣ್ಣು ಮಕ್ಕಳೇ ತಮ್ಮ ತಂದೆಯ ಅಂತ್ಯಸಂಸ್ಕಾರ ನಡೆಸಿ ಲಿಂಗ ಸಮಾನತೆಯ ಸಂದೇಶ…

19 hours ago

ಯುವತಿಯಿಂದ ಮದ್ವೆಗೆ ನಿರಾಕರಣೆ: HIV ಇಂಜೆಕ್ಷನ್ ಚುಚ್ಚಿದ ಯುವಕ.!

ಹೈದರಾಬಾದ್: ಮದುವೆಯಾಗಲು ನಿರಾಕರಿಸಿದ ಯುವತಿಯೊಬ್ಬಳಿಗೆ ಆಕೆಯ ಪ್ರಿಯಕರನೇ HIV ಪಾಸಿಟಿವ್ ಇಂಜಕ್ಷನ್ ಚುಚ್ಚಿದ ಆಘಾತಕಾರಿ ಘಟನೆ ಹೈದರಾಬಾದ್‌ನ ಮೆಡ್ಚಲ್ ಪ್ರದೇಶದಲ್ಲಿ…

1 day ago