Categories: ಆರೋಗ್ಯ

ಉಸಿರಾಟದಲ್ಲಿ ಸೀಟಿ ಶಬ್ಧ – ಅಪರೂಪದ ಚಿಕಿತ್ಸೆ ನೀಡಿ ಬದುಕು ಉಳಿಸಿದ ಮೆಡಿಕವರ್‌ ಆಸ್ಪತ್ರೆ ವೈದ್ಯರು

ವೈಟ್‌ ಫಿಲ್ದ್‌ , ಬೆಂಗಳೂರು : ಪಶ್ವಿಮ ಬಂಗಾಳದಲ್ಲಿದ್ದ ಬಾಲಕ ಆಟವಾಡುವಾಗ ತಪ್ಪಿ ಸೀಟಿಯನ್ನು ನುಂಗಿದ ಕಾರಣ, ಅದಕ್ಕೆ ಕೂಡಲೇ ಸರಿಯಾದ ಚಿಕಿತ್ಸೆ ಸಿಗದ ಹಿನ್ನೆಲೆ, ನ್ಯುಮೋನೀಯಾ ಶುರುವಾಗಿ ಬಾಲಕನ ಜೀವಕ್ಕೆ ಕಂಟಕ ಎದುರಾಗಿತ್ತು. ಬಳಿಕ ಬೆಂಗಳೂರಿನಲ್ಲಿರುವ ಮೆಡಿಕವರ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಬಳಿಕ ಬಾಲಕ ಸಂಪೂರ್ಣವಾಗಿ ಗುಣಮುಖವಾಗಿ ಮರಳಿ ತಮ್ಮೂರಿಗೆ ತೆರಳಿದ.

7 ವರ್ಷದ ಬಾಲಕ ಮಾತಾನಾಡುವಾಗ, ಕಿರಿಚಾಡುವಾಗ ಸೀಟಿ ಸೌಂಡ್‌ ಬರುತ್ತಾ ಇತ್ತು. ಏನಕ್ಕೆ ಹೀಗಾಗುತ್ತಾ ಇದೆ ಎಂದು ಹೆತ್ತವರು ಬಾಲಕನಲ್ಲಿ ಕೇಳಿದಾಗ, ಬಾಲಕ ಆಟವಾಡುತ್ತಾ ಇರುವಾಗ ಸೀಟಿಯನ್ನು ನುಂಗಿರೋದು ತಿಳಿದು ಬಂದಿದೆ. ಸುಮಾರು 2 ಸೆಂಟಿ ಮೀಟರ್‌ ಉದ್ದದ ಸೀಟಿಯನ್ನು ಬಾಲಕ ನುಂಗಿದ್ದ . ಹಾಗಾಗೀ ಆತನ ಹೆತ್ತವರು ಸ್ವಲ್ಪನೂ ತಡಮಾಡದೇ, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ತೆರಳಿದರು. ಅಲ್ಲಿ ಸಿಟಿ ಸ್ಕಾನ್‌ ಮಾಡಿಸಿ, ಬ್ರಾಂಕೋಸ್ಕೊಪಿ ಮೂಲಕ ಸೀಟಿಯನ್ನು ತೆಗೆಯುವ ಪ್ರಯತ್ನ ಮಾಡಿದಾಗ, ಅದು ಶ್ವಾಸನಾಳದಲ್ಲಿ ಗಟ್ಟಿಯಾಗಿ ಸಿಕ್ಕಿ ಹಾಕಿಕೊಂಡಿತ್ತು. ಇದರಿಂದ ಬಾಲಕನಿಗೆ ನ್ಯುಮೋನಿಯಾ ಕೂಡ ಶುರುವಾಗಿತ್ತು. ಸುಮಾರು ಹತ್ತು ದಿನಗಳ ಬಳಿಕ ಬೆಂಗಳೂರಿನಲ್ಲಿರುವ ಮೆಡಿಕವರ್‌ ಆಸ್ಪತ್ರೆಗೆ ಕರೆದುಕೊಂಡು ಬರುವಷ್ಟರಲ್ಲಿ ನ್ಯುಮೋನಿಯಾ ಹೆಚ್ಚಾಗಿತ್ತು. ಹಾಗಾಗೀ ಕೂಡಲೇ ಶ್ವಾಸಕೋಶತಜ್ಞ ಡಾ ಮಂಜುನಾಥ್‌ ಬಿ.ಜಿ ಅವರನ್ನು ಭೇಟಿ ಮಾಡಿ ಚಿಕಿತ್ಸೆ ಪಡೆದರು.

ನ್ಯುಮೋನಿಯಾ ಹೆಚ್ಚಾಗಿದ್ದ ಕಾರಣ ಬ್ರಾಂಕೋಸ್ಕೊಪಿ ಮೂಲಕ ಸೀಟಿಯನ್ನು ತೆಗೆಯುವ ಬದಲು ಆಧುನಿಕ ತಂತ್ರಜ್ಞಾನವಾದ 1.1 mm ಕ್ರಯೋಪ್ರೋಬ್ ಮೂಲಕ ಬಾಲಕ ನುಂಗಿರುವ ಸೀಟಿಯನ್ನು ಹೊರತೆಗೆಯಲಾಯಿತು. ಶಸ್ತ್ರಚಿಕಿತ್ಸೆ ಬಳಿಕ ಬಲ ಕೆಳಗಿನ ಶ್ವಾಸನಾಳದಲ್ಲಿ ರಕ್ತಸ್ರಾವ ಸ್ವಲ್ಪ ಉಂಟಾಗಿತ್ತು, ಹೆಪ್ಪು ಗಟ್ಟಿದ ರಕ್ತವನ್ನು ಕ್ರಯೋ ಬಳಸಿ ತೆಗೆದುಹಾಕಲಾಯಿತು. ಜತೆಗೆ ನ್ಯುಮೋನಿಯಾಗೂ ಕೂಡ ಸೂಕ್ತ ಚಿಕಿತ್ಸೆಯನ್ನು ನೀಡಲಾಗಿತ್ತು .

ಸಮಯೋಚಿತ ಮತ್ತು ಆಧುನಿಕ ಚಿಕಿತ್ಸೆಯಿಂದ ಗಂಭೀರ ಸಮಸ್ಯೆಗಳನ್ನು ತಪ್ಪಿಸಲಾಗುತ್ತದೆ ಮತ್ತು ರೋಗಿಯು ಸುರಕ್ಷಿವಾಗಿ ಚೇತರಿಕಯಾಗಲು ಅನುಕೂಲವಾಗುತ್ತದೆ. ಕ್ರಯೋಯಂಥ ಆಧುನಿಕ ತಂತ್ರಜ್ಞಾನದ ಮೂಲಕ ಈಗ ಇಂತಹ ಸಮಸ್ಯೆಗಳಿಗೆ ಬೇಗ ಪರಿಹಾರ ಹುಡುಕೋದಕ್ಕೆ ಅನುಕೂಲವಾಗುತ್ತದೆ ಎಂದು ಶ್ವಾಸಕೋಶತಜ್ಞ ಡಾ. ಮಂಜುನಾಥ್‌ ಬಿಜಿ ಅಭಿಪ್ರಾಯಪಟ್ಟಿದ್ದಾರೆ .

Ramesh Babu

Journalist

Recent Posts

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

10 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

10 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

12 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

12 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

19 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

2 days ago