Categories: ಆರೋಗ್ಯ

ಉಸಿರಾಟದಲ್ಲಿ ಸೀಟಿ ಶಬ್ಧ – ಅಪರೂಪದ ಚಿಕಿತ್ಸೆ ನೀಡಿ ಬದುಕು ಉಳಿಸಿದ ಮೆಡಿಕವರ್‌ ಆಸ್ಪತ್ರೆ ವೈದ್ಯರು

ವೈಟ್‌ ಫಿಲ್ದ್‌ , ಬೆಂಗಳೂರು : ಪಶ್ವಿಮ ಬಂಗಾಳದಲ್ಲಿದ್ದ ಬಾಲಕ ಆಟವಾಡುವಾಗ ತಪ್ಪಿ ಸೀಟಿಯನ್ನು ನುಂಗಿದ ಕಾರಣ, ಅದಕ್ಕೆ ಕೂಡಲೇ ಸರಿಯಾದ ಚಿಕಿತ್ಸೆ ಸಿಗದ ಹಿನ್ನೆಲೆ, ನ್ಯುಮೋನೀಯಾ ಶುರುವಾಗಿ ಬಾಲಕನ ಜೀವಕ್ಕೆ ಕಂಟಕ ಎದುರಾಗಿತ್ತು. ಬಳಿಕ ಬೆಂಗಳೂರಿನಲ್ಲಿರುವ ಮೆಡಿಕವರ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಬಳಿಕ ಬಾಲಕ ಸಂಪೂರ್ಣವಾಗಿ ಗುಣಮುಖವಾಗಿ ಮರಳಿ ತಮ್ಮೂರಿಗೆ ತೆರಳಿದ.

7 ವರ್ಷದ ಬಾಲಕ ಮಾತಾನಾಡುವಾಗ, ಕಿರಿಚಾಡುವಾಗ ಸೀಟಿ ಸೌಂಡ್‌ ಬರುತ್ತಾ ಇತ್ತು. ಏನಕ್ಕೆ ಹೀಗಾಗುತ್ತಾ ಇದೆ ಎಂದು ಹೆತ್ತವರು ಬಾಲಕನಲ್ಲಿ ಕೇಳಿದಾಗ, ಬಾಲಕ ಆಟವಾಡುತ್ತಾ ಇರುವಾಗ ಸೀಟಿಯನ್ನು ನುಂಗಿರೋದು ತಿಳಿದು ಬಂದಿದೆ. ಸುಮಾರು 2 ಸೆಂಟಿ ಮೀಟರ್‌ ಉದ್ದದ ಸೀಟಿಯನ್ನು ಬಾಲಕ ನುಂಗಿದ್ದ . ಹಾಗಾಗೀ ಆತನ ಹೆತ್ತವರು ಸ್ವಲ್ಪನೂ ತಡಮಾಡದೇ, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ತೆರಳಿದರು. ಅಲ್ಲಿ ಸಿಟಿ ಸ್ಕಾನ್‌ ಮಾಡಿಸಿ, ಬ್ರಾಂಕೋಸ್ಕೊಪಿ ಮೂಲಕ ಸೀಟಿಯನ್ನು ತೆಗೆಯುವ ಪ್ರಯತ್ನ ಮಾಡಿದಾಗ, ಅದು ಶ್ವಾಸನಾಳದಲ್ಲಿ ಗಟ್ಟಿಯಾಗಿ ಸಿಕ್ಕಿ ಹಾಕಿಕೊಂಡಿತ್ತು. ಇದರಿಂದ ಬಾಲಕನಿಗೆ ನ್ಯುಮೋನಿಯಾ ಕೂಡ ಶುರುವಾಗಿತ್ತು. ಸುಮಾರು ಹತ್ತು ದಿನಗಳ ಬಳಿಕ ಬೆಂಗಳೂರಿನಲ್ಲಿರುವ ಮೆಡಿಕವರ್‌ ಆಸ್ಪತ್ರೆಗೆ ಕರೆದುಕೊಂಡು ಬರುವಷ್ಟರಲ್ಲಿ ನ್ಯುಮೋನಿಯಾ ಹೆಚ್ಚಾಗಿತ್ತು. ಹಾಗಾಗೀ ಕೂಡಲೇ ಶ್ವಾಸಕೋಶತಜ್ಞ ಡಾ ಮಂಜುನಾಥ್‌ ಬಿ.ಜಿ ಅವರನ್ನು ಭೇಟಿ ಮಾಡಿ ಚಿಕಿತ್ಸೆ ಪಡೆದರು.

ನ್ಯುಮೋನಿಯಾ ಹೆಚ್ಚಾಗಿದ್ದ ಕಾರಣ ಬ್ರಾಂಕೋಸ್ಕೊಪಿ ಮೂಲಕ ಸೀಟಿಯನ್ನು ತೆಗೆಯುವ ಬದಲು ಆಧುನಿಕ ತಂತ್ರಜ್ಞಾನವಾದ 1.1 mm ಕ್ರಯೋಪ್ರೋಬ್ ಮೂಲಕ ಬಾಲಕ ನುಂಗಿರುವ ಸೀಟಿಯನ್ನು ಹೊರತೆಗೆಯಲಾಯಿತು. ಶಸ್ತ್ರಚಿಕಿತ್ಸೆ ಬಳಿಕ ಬಲ ಕೆಳಗಿನ ಶ್ವಾಸನಾಳದಲ್ಲಿ ರಕ್ತಸ್ರಾವ ಸ್ವಲ್ಪ ಉಂಟಾಗಿತ್ತು, ಹೆಪ್ಪು ಗಟ್ಟಿದ ರಕ್ತವನ್ನು ಕ್ರಯೋ ಬಳಸಿ ತೆಗೆದುಹಾಕಲಾಯಿತು. ಜತೆಗೆ ನ್ಯುಮೋನಿಯಾಗೂ ಕೂಡ ಸೂಕ್ತ ಚಿಕಿತ್ಸೆಯನ್ನು ನೀಡಲಾಗಿತ್ತು .

ಸಮಯೋಚಿತ ಮತ್ತು ಆಧುನಿಕ ಚಿಕಿತ್ಸೆಯಿಂದ ಗಂಭೀರ ಸಮಸ್ಯೆಗಳನ್ನು ತಪ್ಪಿಸಲಾಗುತ್ತದೆ ಮತ್ತು ರೋಗಿಯು ಸುರಕ್ಷಿವಾಗಿ ಚೇತರಿಕಯಾಗಲು ಅನುಕೂಲವಾಗುತ್ತದೆ. ಕ್ರಯೋಯಂಥ ಆಧುನಿಕ ತಂತ್ರಜ್ಞಾನದ ಮೂಲಕ ಈಗ ಇಂತಹ ಸಮಸ್ಯೆಗಳಿಗೆ ಬೇಗ ಪರಿಹಾರ ಹುಡುಕೋದಕ್ಕೆ ಅನುಕೂಲವಾಗುತ್ತದೆ ಎಂದು ಶ್ವಾಸಕೋಶತಜ್ಞ ಡಾ. ಮಂಜುನಾಥ್‌ ಬಿಜಿ ಅಭಿಪ್ರಾಯಪಟ್ಟಿದ್ದಾರೆ .

Ramesh Babu

Journalist

Recent Posts

ಅಕ್ರಮ ಸಂಬಂಧಕ್ಕೆ ಒಪ್ಪದ ಮಹಿಳೆಯ ಖಾಸಗಿ ಅಂಗ ತುಳಿದು ದೌರ್ಜನ್ಯ: ಚಿಕಿತ್ಸೆ ಫಲಕಾರಿಯಾಗದೇ ಮಹಿಳೆ ಸಾವು: ವ್ಯಕ್ತಿ ಬಂಧನ

ಅಕ್ರಮ ಸಂಬಂಧಕ್ಕೆ ಒಪ್ಪದ ಮಹಿಳೆಯ ಖಾಸಗಿ ಅಂಗವನ್ನು ತುಳಿದು ದೌರ್ಜನ್ಯ ನಡೆಸಿ ಮಹಿಳೆಯ ಸಾವಿಗೆ ಕಾರಣನಾದ ಕಾಮುಕನನ್ನು ಪೊಲೀಸರು ಬಂಧಿಸಿರುವ…

5 hours ago

ಮೇ.5ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಮೇ.5ರಂದು 66/11 ಕೆವಿ ಡಿ.ಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ DF17-ನಂದಿ ಮೋರಿ, DF18-ಬೀಡಿಕೆರೆ ಫೀಡರ್‌ಗಳಲ್ಲಿ ವಿದ್ಯುತ್…

11 hours ago

ಚುನಾವಣಾ ಫಲಿತಾಂಶದ ವಿಶ್ಲೇಷಣೆ…..

ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…

18 hours ago

ಕಾರ್ಮಿಕ ವರ್ಗದ ವೈದ್ಯಕೀಯ ಸೇವೆಗೆ ಇಎಸ್ಐಸಿ ಆಸ್ಪತ್ರೆ ವರದಾನ- ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ

ಶ್ರಮಿಕ ವರ್ಗದವರು ಹಾಗೂ ಅವರ ಅವಲಂಬಿತರಿಗೆ ಉಚಿತ ವೈದ್ಯಕೀಯ ಸೇವೆಗಳನ್ನು ಒದಗಿಸುವಲ್ಲಿ ಇಎಸ್ಐಸಿ ಆಸ್ಪತ್ರೆಯು ವರದಾನವಾಗಲಿದೆ. ಎಲ್ಲಾ ಕಾರ್ಮಿಕರು ವೈದ್ಯಕೀಯ…

1 day ago

ಕೊನಘಟ್ಟ ಪ್ರೀಮಿಯರ್ ಲೀಗ್(ಕೆಪಿಎಲ್ ಸೀಸನ್-1): ‘ಎ’ ತಂಡವನ್ನು ಮಣಿಸಿ ಕೊನಘಟ್ಟ ಪ್ರೀಮಿಯರ್ ಲೀಗ್ ಟ್ರೋಫಿ ಪಡೆದ ಕೊನಘಟ್ಟ ‘ಬಿ’ ತಂಡ: ಗಣ್ಯರಿಂದ ಅಭಿನಂದನೆ, ಪ್ರೋತ್ಸಾಹ

. ಕೊನಘಟ್ಟ ಪ್ರೀಮಿಯರ್ ಲೀಗ್(ಕೆಪಿಎಲ್ ಸೀಸನ್-1) ನ್ನು ಕೊನಘಟ್ಟ ಗ್ರಾಮದಲ್ಲಿ ಆಯೋಜನೆ ಮಾಡಲಾಗಿತ್ತು. ಅಂತಿಮ ಹಣಾಹಣಿಯಲ್ಲಿ 'ಎ' ತಂಡವನ್ನು ಮಣಿಸಿ…

1 day ago

ಕಾರಿನಲ್ಲಿ ಬೆಂಕಿ: ಮಹಿಳೆ ಅನುಮಾನಾಸ್ಪದ ಸಾವು ಪ್ರಕರಣ: ಮಹಿಳೆಯ ಜೊತೆ ಕಾರಿನಲ್ಲಿದ್ದ ವ್ಯಕ್ತಿ ಕೂಡ ರೈಲಿಗೆ ಸಿಲುಕಿ ಸಾವು

ದೊಡ್ಡಬಳ್ಳಾಪುರ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಮೇ.2ರ ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ…

1 day ago