Categories: ಆರೋಗ್ಯ

ಉಸಿರಾಟದ ಸೋಂಕಿನ ಹೊಸ ಅಲೆ-ಮೈಕೋಪ್ಲಾಸ್ಮಾ ನ್ಯೂಮೊನಿಯಾ ಬಗ್ಗೆ ಹುಷಾರ್‌

ವೈಟ್‌ ಪೀಲ್ದ್‌ – ಇತ್ತೀಚೆಗೆ ಮೈಕೋಪ್ಲಾಸ್ಮಾ ನ್ಯೂಮೊನಿಯಾ ಸೋಂಕು ಮಕ್ಕಳಲ್ಲಿ ಜಾಸ್ತಿಯಾಗುತ್ತಾ ಇದೆ. ಇದು ಶ್ವಾಸಕೋಶಕ್ಕೆ ತಗಲುವ ಸೋಂಕಿನಿಂದ ಶುರುವಾಗುತ್ತದೆ. ವೈಟ್‌ ಫೀಲ್ದ್‌ ನಲ್ಲಿರುವ ಮೆಡಿಕವರ್‌ ಆಸ್ಪತ್ರೆಯಲ್ಲಿ ಇಬ್ಬರು ಮಕ್ಕಳಲ್ಲಿ ಕಾಡುತ್ತಾ ಇದ್ದ ಸಮಸ್ಯೆಗೆ ಮಕ್ಕಳ ತಜ್ಞ ಡಾ. ಆನಂದ್ ಪಾಟೀಲ್‌ ಸೂಕ್ತ ಚಿಕಿತ್ಸೆ ನೀಡಿ ಗುಣಮುಖ ಮಾಡಿದ್ದಾರೆ.

ಸೋಂಕಿನ ಪ್ರಮುಖ ರೋಗ ಲಕ್ಷಣಗಳು

ಸುಮಾರು ದಿನಗಳ ಕಾಲ ಮಕ್ಕಳಲ್ಲಿ ಜ್ವರ, ತೀವ್ರ ಶೀತ ಮತ್ತು ಕೆಮ್ಮು ಕಾಣಿಸಿಕೊಳ್ಳುತ್ತದೆ. ಬಳಿಕ ಉಸಿರಾಟದ ತೊಂದರೆ, ದೇಹದ ಉಷ್ಣತಾಪ ಹೆಚ್ಚಾಗಿ ಎದೆನೋವು ಕಾಣಿಸಿಕೊಳ್ಳುತ್ತದೆ. ಹಾಗೂ ಬಾಯಿಯಲ್ಲಿ ದೊಡ್ಡ ದೊಡ್ಡ ಗಾಯವಾಗಿ ರಕ್ತಸ್ರಾವವಾಗುತ್ತದೆ. ಇದೇ ರೀತಿ ಸಮಸ್ಯೆಯನ್ನು ಎದುರಿಸಿದ ಇಬ್ಬರು ಮಕ್ಕಳು ಮೆಡಿಕವರ್‌ ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲಿಸಲಾಗಿದೆ.

7 ವರ್ಷದ ಬಾಲಕನಿಗೆ 5 ದಿನಗಳಿಂದ ನಿರಂತರವಾಗಿ ಜ್ವರ ಇದ್ದು, ಕಣ್ಣಿನಲ್ಲಿ ಸೋಂಕು ಆಗಿದ್ದು, ಬಾಯಿಯಲ್ಲಿ ಗಾಯಗಳು ಆಗಿ ರಕ್ತಸ್ರಾವ ಕೂಡ ಆಗುತ್ತಾ ಇದೆ. ವೈಟ್‌ ಫೀಲ್ದ್‌ ನಲ್ಲಿರುವ ಮೆಡಿಕವರ್‌ ಆಸ್ಪತ್ರೆಯಲ್ಲಿರುವ ಹಿರಿಯ ಮಕ್ಕಳ ತಜ್ಞ ಡಾ ಆನಂದ್‌ ಪಾಟೀಲ್‌ ಅವರನ್ನು ಭೇಟಿ ಮಾಡಿ ಚಿಕಿತ್ಸೆ ಶುರು ಮಾಡಲಾಯ್ತು. ಬಾಲಕನಿಗೆ ಇದ್ದ ರೋಗ ಲಕ್ಷಣಗಳನ್ನು ನೋಡಿದ ಬಳಿಕ ಆರಂಭದಲ್ಲಿ ವೈರಲ್ ಮೂಕೋಸಿಟಿಸ್ ಸೋಂಕು ಎಂದು ವೈದ್ಯರು ಸಂಶಯಪಟ್ಟರು, ಆದರೆ ಸೂಕ್ತ ಪರೀಕ್ಷೆ ನಡೆಸಿದ ಬಳಿಕ ಮೈಕೋಪ್ಲಾಸ್ಮಾ ನ್ಯೂಮೊನಿಯೆ ಸೋಂಕು ಎಂದು ಧೃಢಪಟ್ಟಿದೆ. ಬಾಲಕನಿಗೆ ವ್ಯವಸ್ಥಿತ ಮತ್ತು ಸ್ಥಳೀಯ ಸ್ಟೆರಾಯ್ಡ್‌ಗಳ, ಆಂಟಿಫಂಗಲ್ ಟ್ರಿಟೆಮೆಂಟ್ ಮಾಡಲಾಯ್ತು. ಆಸ್ಪತ್ರೆಯಲ್ಲಿ ಸುಮಾರು 10 ದಿನಗಳ ಚಿಕಿತ್ಸೆ ನೀಡಿದ ಬಳಿಕ ಬಾಲಕನೂ ಸಂಪೂರ್ಣವಾಗಿ ಗುಣಮುಖರಾದ ಬಳಿಕ ಮನೆಗೆ ಕಳಿಸಿಕೊಡಲಾಗಿದೆ. ಈಗ ವೈದ್ಯರು ಆ ಹುಡುಗನಿಗೆ ಚಿಕಿತ್ಸೆಯಲ್ಲಿ ಪಾಲೋಅಫ್‌ ಮಾಡ್ತಾ ಇದ್ದು, ಆರೋಗ್ಯದಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ಡಾ . ಆನಂದ್‌ ಪಾಟೀಲ್‌ ಧೃಡಪಡಿಸಿಕೊಂಡಿದ್ದಾರೆ.

ಇನ್ನೂ 3 ವರ್ಷದ ಮಗುವಿಗೂ ಕೂಡ ಈ ಸೋಂಕು ತಗಲಿತ್ತು. ಮಗುವಿಗೆ ಉಸಿರಾಟದ ತೊಂದರೆ, ಕೆಮ್ಮು ಮತ್ತು ಜ್ವರ ಸಮಸ್ಯೆಯಿಂದ ಬಳಲುತ್ತಾ ಇದೆ ಎಂದು ಹೆತ್ತವರು ಆಸ್ಪತ್ರೆಗೆ ಕರೆತಂದರು. ದಾಖಲಾತಿಯ ಸಮಯದಲ್ಲಿ ಮಗುವು ತೀವ್ರ ಅಸ್ವಸ್ಥವಾಗಿತ್ತು. ಉಸಿರಾಟದ ತೊಂದರೆ ಹಾಗೂ ಆಕ್ಸಿಜನ್‌ ಮಟ್ಟ ಕಡಿಮೆಯಾಗಿತ್ತು. ಈ ಮಗುವಿಗೂ ಕೂಡ ಸುಮಾರು ದಿನಳಿಂದ ಜ್ವರ, ತೀವ್ರ ಶೀತ ಮತ್ತು ಕೆಮ್ಮಿನೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದರು. ಮಗುವಿಗೆ ಉಸಿರಾಟದ ತೊಂದರೆ, ಸತತ ಉಷ್ಣತಾಪ ಮತ್ತು ಎದೆನೋವು ಕೂಡ ಕಾಣಿಸಿಕೊಂಡಿತ್ತು.ಪ್ರಾಥಮಿಕ ಚಿಕಿತ್ಸೆಗಾಗಿ ಆಂಟಿಬಯೋಟಿಕ್ ಔಷಧಗಳನ್ನು ನೀಡಲಾಯಿತಾದರೂ, ಲಕ್ಷಣಗಳು ಉಲ್ಬಣಗೊಂಡ ಕಾರಣ ಹೆಚ್ಚುವರಿ ಆಕ್ಸಿಜನ್‌ನ ವ್ಯವಸ್ಥೆ ಮಾಡಲಾಯಿತು.

ಮುಂದುವರಿದ ಪರೀಕ್ಷೆಯಲ್ಲಿ ಮೈಕೊಪ್ಲಾಸ್ಮಾ ನ್ಯೂಮೋನಿಯಾ ಸೋಂಕು ತಗಲಿರೋದು ಅನ್ನೋದು ವೈದ್ಯರು ದೃಢೀಕರಿಸಿದರು. ಬಳಿಕ ಡಾ. ಆನಂದ ಪಾಟೀಲ್‌ ಅವರ ನೇತ್ರತ್ವದಲ್ಲಿ ಸೂಕ್ತ ಚಿಕಿತ್ಸೆ ನೀಡಿ , ಅವರನ್ನು ಆಸ್ಪತ್ರೆಯಿಂದ ಮನೆಗೆ ಕಳಿಸಿಕೊಡಲಾಯಿತು .

*ಮೈಕೊಪ್ಲಾಸ್ಮಾ ನ್ಯುಮೊನಿಯ ಲಕ್ಷಣಗಳು:*

ನಿಧಾನವಾಗಿ ಪ್ರಾರಂಭವಾಗುವ ಲಕ್ಷಣಗಳು
ಒಣಕೆಮ್ಮು (ಉಷ್ಣತೆ ಕಡಿಮೆಯಾದರೂ ಕೆಮ್ಮು ಸಾಕಷ್ಟು ದಿನಗಳು ಇರಬಹುದು)
ಗಂಟಲುಕಿರಿತ, ಮೈಕೈ ನೋವು, ತಲೆನೋವು, ದಣಿವು
ಸ್ವಲ್ಪ ಉಷ್ಣತೆ, ಮೂಗು ಬ್ಲಾಕ್‌ ಆಗುವುದು
ಕೆಲವು ವೇಳೆ ಉಸಿರಾಟದ ತೊಂದರೆ ಮತ್ತು ಹೃದಯಭಾಗದಲ್ಲಿ ನೋವು

*ಸೋಂಕು ಹರಡುವ ರೀತಿ:*
ಶೀತ, ಕೆಮ್ಮಿನ ಮೂಲಕ ಹಬ್ಬುತ್ತದೆ
ಪೋಷಣೆಯ ಕೊರತೆ, ಉಸಿರಾಟದ ಸೋಂಕುಗಳ ಇತಿಹಾಸ ಇರುವವರಿಗೆ ಹೆಚ್ಚು ಅಪಾಯ
1 ರಿಂದ 4 ವಾರಗಳ ವರೆಗೆ ಗುಪ್ತಾವಧಿ

*ಸಂಭಾವ್ಯ ತೊಂದರೆಗಳು :*
ಗಂಭೀರ ನ್ಯುಮೊನಿಯಾ
ಮೆದುಳಿನ ತೊಂದರೆ
ಚರ್ಮದಲ್ಲಿ ತುರಿಕೆ
ರಕ್ತಹೀನತೆ (ಅನೀಮಿಯಾ)
ಮೈಕೋಪ್ಲಾಸ್ಮಾ ನ್ಯೂಮೊನಿಯೆ ಸೋಂಕು ಮಕ್ಕಳಲ್ಲಿ ಹೆಚ್ಚಾಗುತ್ತಿರುವ ಕಾರಣ, ಹೆತ್ತವರಾಗಿ ನೀವು ಎಚ್ಚರಿಕೆ ವಹಿಸಲು ಅಗತ್ಯವಿದೆ. ಇದು ಮುಖ್ಯವಾಗಿ ಉಸಿರಾಟದ ಸೋಂಕುಗಳನ್ನುಂಟುಮಾಡುವ ಬ್ಯಾಕ್ಟೀರಿಯಾದಿಂದ ಉಂಟಾಗುವ ರೋಗವಾಗಿದ್ದು, ಮಕ್ಕಳಲ್ಲಿ ಉಸಿರಾಟದ ತೊಂದರೆ, ಜ್ವರ, ಕೆಮ್ಮು ಮತ್ತು ಅಸ್ವಸ್ಥತೆ ಹೆಚ್ಚಿಸುವ ಸಾಧ್ಯತೆ ಇದೆ.

ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳು:*
– ಮಕ್ಕಳಲ್ಲಿ ಸ್ವಚ್ಛತೆ ಕಾಪಾಡಿ .
– ಕೈಯನ್ನು ನಿಯಮಿತವಾಗಿ ತೊಳೆಸುವುದು.
– ಶೀತ ಮತ್ತು ಕೆಮ್ಮಿನಿಂದ ಬಳಲುವವರ ಸಂಪರ್ಕದಿಂದ ದೂರ ಇರಿಸಿ.
– ಯಾವುದೇ ಉಸಿರಾಟದ ತೊಂದರೆ ಕಾಣಿಸಿದರೆ ತಕ್ಷಣವೇ ವೈದ್ಯರನ್ನು ಸಂಪರ್ಕಿಸಿ.
– ಹಿತಕರ ಆಹಾರ ಮತ್ತು ಸಾಕಷ್ಟು ತ್ಯಾಜ್ಯಪದಾರ್ಥಗಳನ್ನು ಬಳಸುವ ಅಭ್ಯಾಸ ರೂಢಿಸಬೇಕು.

ಸೋಂಕು ತೀವ್ರಗೊಂಡರೆ, ಸೂಕ್ತ ಚಿಕಿತ್ಸೆ ಪಡೆಯುವುದು ಅನಿವಾರ್ಯ. ನಿಮ್ಮ ಮಕ್ಕಳ ಆರೋಗ್ಯವನ್ನು ಸಂರಕ್ಷಿಸಲು, ಈ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಿ.
ಮೈಕೋಪ್ಲಾಸ್ಮಾ ನ್ಯೂಮೊನಿಯೆ ಸೋಂಕು ತೀವ್ರವಾದ ಶ್ವಾಸಕೋಶ ಮತ್ತು ಮೂಕೋಕುಟೇನಿಯಸ್ ತೊಂದರೆಗಳಿಗೆ ಕಾರಣವಾಗುತ್ತದೆ. ಈ ಸೋಂಕಿನ ಬಗ್ಗೆ ಮುಂದೆ ಏನ್‌ ಮಾಡಬೇಕು ಎಂದು ವೈದ್ಯರು ಸೂಕ್ತ ನಿರ್ಧಾರ ಕೈಗೊಳ್ಳಬೇಕು ಹಾಗೂ ಬೇರೆ ವಿಭಾಗದ ತಜ್ಞರ ನೆರವಿನ ಅಗತ್ಯ ಕೂಡ ಸಾಕಷ್ಟು ಇದೆ. ಹಾಗಾಗೀ ಬೇಗನೆ ರೋಗನಿರ್ಣಯ ಚಿಕಿತ್ಸೆ ನೀಡಬೇಕು . ರೋಗಿಯ ಆದಷ್ಟು ಬೇಗ ಚೇತರಿಕೆಯಾಗೋದಕ್ಕೆ ಸಹಾಯವಾಗುವಂತೆ ಮಾಡಬೇಕೆಂದು ಮಕ್ಕಳ ತಜ್ಞ ಡಾ. ಆನಂದ ಪಾಟೀಲ್‌ ತಿಳಿಸಿದ್ದಾರೆ.

Ramesh Babu

Journalist

Recent Posts

‘ಫೊರೆನ್ಸಿಕ್ ತನಿಖೆಯಲ್ಲಿ ಕರ್ನಾಟಕಕ್ಕೆ ದೇಶದಲ್ಲೇ ಮುಂಚೂಣಿ ಸ್ಥಾನ’-ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್‌ಎಸ್‌ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…

11 hours ago

ಜೂ. 28 ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…

14 hours ago

24 ಗಂಟೆಯೊಳಗೆ ಸರಗಳ್ಳರ ಬಂಧನ: ₹2.96 ಲಕ್ಷ ಮೌಲ್ಯದ ಮಾಲು ವಶ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…

15 hours ago

ದೊಡ್ಡಬೆಲವಂಗಲ ಠಾಣೆ ಇನ್ಸ್‌ಪೆಕ್ಟರ್ ಕಲ್ಲಪ್ಪ ಎಸ್. ಖರತ್‌ಗೆ ಡಿಜಿ-ಐಜಿಪಿ ಪ್ರಶಂಸನಾ ಪದಕ

ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…

17 hours ago

ಕೆಐಎಎಲ್ ನಲ್ಲಿ ಸರಣಿ ಕಳ್ಳಸಾಗಣೆ ಪ್ರಕರಣಗಳು ಪತ್ತೆ: ₹4.33 ಕೋಟಿಗೂ ಅಧಿಕ ಮೌಲ್ಯದ ಮಾದಕ ವಸ್ತು, ಚಿನ್ನ ವಶ

ದೇವನಹಳ್ಳಿ: ಕೆಂಪೇಗೌಡರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಕೆಲ ದಿನಗಳಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಗಳಲ್ಲಿ ಮಾದಕ ವಸ್ತುಗಳು…

18 hours ago

ಯುವತಿಯ ಕುರಿತು ಅಪಪ್ರಚಾರದ ದ್ವೇಷ: ರೌಡಿ ಶೀಟರ್ ಖಲೀಮ್‌ನ ಬರ್ಬರ ಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಕುಟುಂಬದ ಬಗ್ಗೆ ಅವಹೇಳನ ಆರೋಪ: 7 ಮಂದಿಯ ತಂಡದ ಸಂಚು, 5 ಆರೋಪಿಗಳ ಬಂಧನ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ಖಲೀಮ್ (35)…

21 hours ago