ಉಸಿರಾಟ ನಿಲ್ಲಿಸಿದ್ದ ಶಿಶುವಿಗೆ ಜೀವತುಂಬಿದ ಸರ್ಕಾರಿ ಆಸ್ಪತ್ರೆ ವೈದ್ಯರು: ಕೃತಜ್ಞತೆ ಸಲ್ಲಿಸಿದ ಪೋಷಕರು: ಸಾರ್ವಜನಿಕರಿಂದ ವ್ಯಾಪಕ‌ ಪ್ರಶಂಸೆ

ದೊಡ್ಡಬಳ್ಳಾಪುರ: ಜೀವನ್ಮರಣದ ನಡುವೆ ಹೋರಾಟ ನಡೆಸುತ್ತಿದ್ದ ನವಜಾತಾ ಶಿಶುವನ್ನು ದೊಡ್ಡಬಳ್ಳಾಪುರ ತಾಯಿ-ಮಗು ಆಸ್ಪತ್ರೆಯ ವೈದ್ಯರು ಸಕಾಲಕ್ಕೆ ಚಿಕಿತ್ಸೆ ನೀಡುವ ಮೂಲಕ ಜೀವ ಉಳಿಸಿದ್ದಾರೆ. ವೈದ್ಯರ ಸಮಯಪ್ರಜ್ಞೆ ಹಾಗೂ ಸೇವಾ ಮನೋಭಾವಕ್ಕೆ ಸಾರ್ವಜನಿಕರು ಪ್ರಶಂಸೆ ವ್ಯಕ್ತಪಡಿಸುತ್ತಿದ್ದಾರೆ.

ಅಕ್ಟೋಬರ್ 7ರ ಮುಂಜಾನೆ ಉತ್ತರ ಪ್ರದೇಶದ ಆದರ್ಶ ಮತ್ತು ಗುಡಿಯ ಕುಮಾರಿ ದಂಪತಿಯ 19 ದಿನಗಳ ಶಿಶು ಉಸಿರಾಟ ಇಲ್ಲದೆ, ತನ್ನ ದೇಹದ ಸಂಪೂರ್ಣ ಸ್ವಾಧೀನ ಕಳೆದುಕೊಂಡ ಸ್ಥಿತಿಯಲ್ಲಿತ್ತು. ಕೂಡಲೇ ಆಸ್ಪತ್ರೆ ಆಂಬುಲೆನ್ಸ್ ಚಾಲಕ ಮಧು ಸ್ಥಳಕ್ಕೆ ಧಾವಿಸಿ ಮಗುವನ್ನು ದೊಡ್ಡಬಳ್ಳಾಪುರ ಸಾರ್ವಜನಿಕ ಆಸ್ಪತ್ರೆಗೆ ತಲುಪಿಸಿದ್ದರು. ಪೋಷಕರೇ ನಮ್ಮ ಮಗು ನಮ್ಮ ಪಾಲಿಗಿಲ್ಲ ಎಂದು ಕೈಚಲ್ಲಿ ಕೂತಿದ್ದರು. ಆದರೆ, ಸರ್ಕಾರಿ ಆಸ್ಪತ್ರೆಯ ಮಕ್ಕಳ ತಜ್ಞರಾದ ಡಾ. ಗಾಯತ್ರಿ. ಸಹ ವೈದ್ಯರಾದ ಲಲಿತಾ, ಶ್ರುಶುಷಕಾಧಿಕಾರಿಗಳಾದ ಶೋಭಾ, ಲಾವಣ್ಯ ರವರ ಸಹಕಾರದೊಂದಿಗೆ ಕೂಡಲೇ ಕಾರ್ಯ ಪ್ರವೃತ್ತರಾಗಿ ತಮ್ಮ ಸೇವಾ ನಿಷ್ಠೆ ಮರೆಯದೇ ಮಗುವನ್ನು ಎನ್.ಬಿ.ಎಸ್.ಯು(NBSU) ತುರ್ತು ಘಟಕಕ್ಕೆ ರವಾನಿಸಿ ಅವಶ್ಯಕ ತುರ್ತು ಚಿಕಿತ್ಸೆ ನೀಡಿ ಮಗು ಮತ್ತೆ ಉಸಿರಾಡುವಂತೆ ಮಾಡಿದ್ದಾರೆ.

ಮಗುವಿನ ಉಸಿರಾಟದ ಸ್ಥಿತಿ ಹತೋಟಿಗೆ ಬಂದ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಾಣಿ ವಿಲಾಸ್ ಆಸ್ಪತ್ರೆಗೆ ರವಾನಿಸಿದ್ದರು. ಇಂದು ಮಗು ಸಂಪೂರ್ಣ ಚೇತರಿಕೆ ಕಂಡು ತನ್ನ ಮನೆಗೆ ಹಿಂದಿರುಗಿದೆ. ಜೀವ ಉಳಿಸಿದ ಸಾರ್ವಜನಿಕ ಆಸ್ಪತ್ರೆ ವೈದ್ಯರಿಗೆ ಹಾಗೂ ಸಿಬ್ಬಂದಿಗೆ ಪೋಷಕರು ಅಭಿನಂದನೆ ಸಲ್ಲಿಸಿದ್ದು, ಸಾಮಾಜಿಕ ವಲಯದಲ್ಲಿ ವೈದ್ಯರ ಕಾರ್ಯ ವೈಖರಿಗೆ ಮೆಚ್ಚುಗೆ ವ್ಯಕ್ತವಾಗಿದೆ.

Ramesh Babu

Journalist

Recent Posts

ಕರ್ನಾಟಕ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ

ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳು ಒಂದೇ ಸೂರಿನಡಿ ಒದಗಿಸಲು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕರ್ನಾಟಕ ಒನ್ ಫ್ರಾಂಚೈಸಿ ಕೇಂದ್ರ…

5 hours ago

ಇತಿಹಾಸ ಒಂದು ಪಾಠವಾಗಬೇಕೆ ಹೊರತು ರಾಜಕೀಯ ಅಸ್ತ್ರವಾಗಬಾರದು

ಶಿವಾಜಿ - ಟಿಪ್ಪು.......... ಇತಿಹಾಸವನ್ನು ತಪ್ಪಾಗಿ ಅರ್ಥ ಮಾಡಿಕೊಂಡು ಹೀಗೆ ಕಚ್ಚಾಡುತ್ತಲೇ ಇರಿ........ ನೀವು ಡಿಜೆ ಸೌಂಡ್ ಹಾಕಿಕೊಂಡು ಮಸೀದಿಗಳ…

7 hours ago

“ದೊಡ್ಡಬಳ್ಳಾಪುರ ಸ್ಯಾರಿ ಸಂತೆ”- ಭರ್ಜರಿ ರೆಸ್ಪಾನ್ಸ್- ಕಾರ್ಯಕ್ರಮದಲ್ಲಿ ಗಿಲ್ಲಿ ನಟ ಹವಾ

ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು, ಈ ಕಾರ್ಯಕ್ರಮಕ್ಕೆ ಮುಖ್ಯ…

19 hours ago

ಇಂದಿನಿಂದ “ದೊಡ್ಡಬಳ್ಳಾಪುರ ಸ್ಯಾರಿ ಸಂತೆ”- ಭರ್ಜರಿ ರೆಸ್ಪಾನ್ಸ್- ಸೀರೆ ಕೊಳ್ಳಲು ಮುಗಿಬಿದ್ದ ಜನ

ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಇಂದಿನಿಂದ ಫೆ.22ರವರೆಗೆ  "ದೊಡ್ಡಬಳ್ಳಾಪುರ…

22 hours ago

ಕೋಲಾರಮ್ಮ ಜಿಲ್ಲಾ ಕೋಳಿ ಸಾಕಾಣಿಕೆದಾರರ ಮತ್ತು ಮಾರಾಟಗಾರರ ಸಹಕಾರ ಸಂಘದ ಜಿಲ್ಲಾ ಸಮ್ಮೇಳನ

ಕೋಲಾರ: ರೈತರು ಕಂಪನಿಯೊಂದಿಗೆ (ಇಂಟಿಗ್ರೇಟೆಡ್) ಒಪ್ಪಂದ ಮಾಡಿಕೊಂಡು ಕೋಳಿ ಸಾಕುವ ಪದ್ದತಿಯಿಂದಾಗಿ ಕಾರ್ಪೊರೇಟ್ ಸಂಸ್ಥೆಗಳಿಂದ ನಿರಂತರವಾಗಿ ಶೋಷಣೆ ನಡೆಯುತ್ತಿದೆ ಸರ್ಕಾರವು…

1 day ago

ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಿಲ್ಲದೆ ಬಾಣಂತಿ ಹಾಗೂ ನವಜಾತ ಗಂಡು ಮಗುವಿನ ಸಾ*ವು..!

ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಬಾಣಂತಿ ಹಾಗೂ ಹಸುಗೂಸು ಸಾ*ವಾಗಿದೆ, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪ‌‌ ಮಾಡಿದ್ದಾರೆ.…

1 day ago