ದೊಡ್ಡಬಳ್ಳಾಪುರ: ಜೀವನ್ಮರಣದ ನಡುವೆ ಹೋರಾಟ ನಡೆಸುತ್ತಿದ್ದ ನವಜಾತಾ ಶಿಶುವನ್ನು ದೊಡ್ಡಬಳ್ಳಾಪುರ ತಾಯಿ-ಮಗು ಆಸ್ಪತ್ರೆಯ ವೈದ್ಯರು ಸಕಾಲಕ್ಕೆ ಚಿಕಿತ್ಸೆ ನೀಡುವ ಮೂಲಕ ಜೀವ ಉಳಿಸಿದ್ದಾರೆ. ವೈದ್ಯರ ಸಮಯಪ್ರಜ್ಞೆ ಹಾಗೂ ಸೇವಾ ಮನೋಭಾವಕ್ಕೆ ಸಾರ್ವಜನಿಕರು ಪ್ರಶಂಸೆ ವ್ಯಕ್ತಪಡಿಸುತ್ತಿದ್ದಾರೆ.
ಅಕ್ಟೋಬರ್ 7ರ ಮುಂಜಾನೆ ಉತ್ತರ ಪ್ರದೇಶದ ಆದರ್ಶ ಮತ್ತು ಗುಡಿಯ ಕುಮಾರಿ ದಂಪತಿಯ 19 ದಿನಗಳ ಶಿಶು ಉಸಿರಾಟ ಇಲ್ಲದೆ, ತನ್ನ ದೇಹದ ಸಂಪೂರ್ಣ ಸ್ವಾಧೀನ ಕಳೆದುಕೊಂಡ ಸ್ಥಿತಿಯಲ್ಲಿತ್ತು. ಕೂಡಲೇ ಆಸ್ಪತ್ರೆ ಆಂಬುಲೆನ್ಸ್ ಚಾಲಕ ಮಧು ಸ್ಥಳಕ್ಕೆ ಧಾವಿಸಿ ಮಗುವನ್ನು ದೊಡ್ಡಬಳ್ಳಾಪುರ ಸಾರ್ವಜನಿಕ ಆಸ್ಪತ್ರೆಗೆ ತಲುಪಿಸಿದ್ದರು. ಪೋಷಕರೇ ನಮ್ಮ ಮಗು ನಮ್ಮ ಪಾಲಿಗಿಲ್ಲ ಎಂದು ಕೈಚಲ್ಲಿ ಕೂತಿದ್ದರು. ಆದರೆ, ಸರ್ಕಾರಿ ಆಸ್ಪತ್ರೆಯ ಮಕ್ಕಳ ತಜ್ಞರಾದ ಡಾ. ಗಾಯತ್ರಿ. ಸಹ ವೈದ್ಯರಾದ ಲಲಿತಾ, ಶ್ರುಶುಷಕಾಧಿಕಾರಿಗಳಾದ ಶೋಭಾ, ಲಾವಣ್ಯ ರವರ ಸಹಕಾರದೊಂದಿಗೆ ಕೂಡಲೇ ಕಾರ್ಯ ಪ್ರವೃತ್ತರಾಗಿ ತಮ್ಮ ಸೇವಾ ನಿಷ್ಠೆ ಮರೆಯದೇ ಮಗುವನ್ನು ಎನ್.ಬಿ.ಎಸ್.ಯು(NBSU) ತುರ್ತು ಘಟಕಕ್ಕೆ ರವಾನಿಸಿ ಅವಶ್ಯಕ ತುರ್ತು ಚಿಕಿತ್ಸೆ ನೀಡಿ ಮಗು ಮತ್ತೆ ಉಸಿರಾಡುವಂತೆ ಮಾಡಿದ್ದಾರೆ.
ಮಗುವಿನ ಉಸಿರಾಟದ ಸ್ಥಿತಿ ಹತೋಟಿಗೆ ಬಂದ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಾಣಿ ವಿಲಾಸ್ ಆಸ್ಪತ್ರೆಗೆ ರವಾನಿಸಿದ್ದರು. ಇಂದು ಮಗು ಸಂಪೂರ್ಣ ಚೇತರಿಕೆ ಕಂಡು ತನ್ನ ಮನೆಗೆ ಹಿಂದಿರುಗಿದೆ. ಜೀವ ಉಳಿಸಿದ ಸಾರ್ವಜನಿಕ ಆಸ್ಪತ್ರೆ ವೈದ್ಯರಿಗೆ ಹಾಗೂ ಸಿಬ್ಬಂದಿಗೆ ಪೋಷಕರು ಅಭಿನಂದನೆ ಸಲ್ಲಿಸಿದ್ದು, ಸಾಮಾಜಿಕ ವಲಯದಲ್ಲಿ ವೈದ್ಯರ ಕಾರ್ಯ ವೈಖರಿಗೆ ಮೆಚ್ಚುಗೆ ವ್ಯಕ್ತವಾಗಿದೆ.
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…