ಉಸಿರಾಟ ನಿಲ್ಲಿಸಿದ್ದ ಶಿಶುವಿಗೆ ಜೀವತುಂಬಿದ ಸರ್ಕಾರಿ ಆಸ್ಪತ್ರೆ ವೈದ್ಯರು: ಕೃತಜ್ಞತೆ ಸಲ್ಲಿಸಿದ ಪೋಷಕರು: ಸಾರ್ವಜನಿಕರಿಂದ ವ್ಯಾಪಕ‌ ಪ್ರಶಂಸೆ

ದೊಡ್ಡಬಳ್ಳಾಪುರ: ಜೀವನ್ಮರಣದ ನಡುವೆ ಹೋರಾಟ ನಡೆಸುತ್ತಿದ್ದ ನವಜಾತಾ ಶಿಶುವನ್ನು ದೊಡ್ಡಬಳ್ಳಾಪುರ ತಾಯಿ-ಮಗು ಆಸ್ಪತ್ರೆಯ ವೈದ್ಯರು ಸಕಾಲಕ್ಕೆ ಚಿಕಿತ್ಸೆ ನೀಡುವ ಮೂಲಕ ಜೀವ ಉಳಿಸಿದ್ದಾರೆ. ವೈದ್ಯರ ಸಮಯಪ್ರಜ್ಞೆ ಹಾಗೂ ಸೇವಾ ಮನೋಭಾವಕ್ಕೆ ಸಾರ್ವಜನಿಕರು ಪ್ರಶಂಸೆ ವ್ಯಕ್ತಪಡಿಸುತ್ತಿದ್ದಾರೆ.

ಅಕ್ಟೋಬರ್ 7ರ ಮುಂಜಾನೆ ಉತ್ತರ ಪ್ರದೇಶದ ಆದರ್ಶ ಮತ್ತು ಗುಡಿಯ ಕುಮಾರಿ ದಂಪತಿಯ 19 ದಿನಗಳ ಶಿಶು ಉಸಿರಾಟ ಇಲ್ಲದೆ, ತನ್ನ ದೇಹದ ಸಂಪೂರ್ಣ ಸ್ವಾಧೀನ ಕಳೆದುಕೊಂಡ ಸ್ಥಿತಿಯಲ್ಲಿತ್ತು. ಕೂಡಲೇ ಆಸ್ಪತ್ರೆ ಆಂಬುಲೆನ್ಸ್ ಚಾಲಕ ಮಧು ಸ್ಥಳಕ್ಕೆ ಧಾವಿಸಿ ಮಗುವನ್ನು ದೊಡ್ಡಬಳ್ಳಾಪುರ ಸಾರ್ವಜನಿಕ ಆಸ್ಪತ್ರೆಗೆ ತಲುಪಿಸಿದ್ದರು. ಪೋಷಕರೇ ನಮ್ಮ ಮಗು ನಮ್ಮ ಪಾಲಿಗಿಲ್ಲ ಎಂದು ಕೈಚಲ್ಲಿ ಕೂತಿದ್ದರು. ಆದರೆ, ಸರ್ಕಾರಿ ಆಸ್ಪತ್ರೆಯ ಮಕ್ಕಳ ತಜ್ಞರಾದ ಡಾ. ಗಾಯತ್ರಿ. ಸಹ ವೈದ್ಯರಾದ ಲಲಿತಾ, ಶ್ರುಶುಷಕಾಧಿಕಾರಿಗಳಾದ ಶೋಭಾ, ಲಾವಣ್ಯ ರವರ ಸಹಕಾರದೊಂದಿಗೆ ಕೂಡಲೇ ಕಾರ್ಯ ಪ್ರವೃತ್ತರಾಗಿ ತಮ್ಮ ಸೇವಾ ನಿಷ್ಠೆ ಮರೆಯದೇ ಮಗುವನ್ನು ಎನ್.ಬಿ.ಎಸ್.ಯು(NBSU) ತುರ್ತು ಘಟಕಕ್ಕೆ ರವಾನಿಸಿ ಅವಶ್ಯಕ ತುರ್ತು ಚಿಕಿತ್ಸೆ ನೀಡಿ ಮಗು ಮತ್ತೆ ಉಸಿರಾಡುವಂತೆ ಮಾಡಿದ್ದಾರೆ.

ಮಗುವಿನ ಉಸಿರಾಟದ ಸ್ಥಿತಿ ಹತೋಟಿಗೆ ಬಂದ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಾಣಿ ವಿಲಾಸ್ ಆಸ್ಪತ್ರೆಗೆ ರವಾನಿಸಿದ್ದರು. ಇಂದು ಮಗು ಸಂಪೂರ್ಣ ಚೇತರಿಕೆ ಕಂಡು ತನ್ನ ಮನೆಗೆ ಹಿಂದಿರುಗಿದೆ. ಜೀವ ಉಳಿಸಿದ ಸಾರ್ವಜನಿಕ ಆಸ್ಪತ್ರೆ ವೈದ್ಯರಿಗೆ ಹಾಗೂ ಸಿಬ್ಬಂದಿಗೆ ಪೋಷಕರು ಅಭಿನಂದನೆ ಸಲ್ಲಿಸಿದ್ದು, ಸಾಮಾಜಿಕ ವಲಯದಲ್ಲಿ ವೈದ್ಯರ ಕಾರ್ಯ ವೈಖರಿಗೆ ಮೆಚ್ಚುಗೆ ವ್ಯಕ್ತವಾಗಿದೆ.

Ramesh Babu

Journalist

Recent Posts

‘ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಲ್ಪಿಗಳು’

ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…

10 hours ago

ಬೆಸ್ಕಾಂ ವಿರುದ್ಧ ಒಣ ಮೆಣಸಿನಕಾಯಿ ಹೊಗೆ ಹೋರಾಟಕ್ಕೆ ರೈತರ ನಿರ್ಧಾರ

ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…

12 hours ago

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

17 hours ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

1 day ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

1 day ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

1 day ago