ಉಸಿರಾಟ ನಿಲ್ಲಿಸಿದ್ದ ಶಿಶುವಿಗೆ ಜೀವತುಂಬಿದ ಸರ್ಕಾರಿ ಆಸ್ಪತ್ರೆ ವೈದ್ಯರು: ಕೃತಜ್ಞತೆ ಸಲ್ಲಿಸಿದ ಪೋಷಕರು: ಸಾರ್ವಜನಿಕರಿಂದ ವ್ಯಾಪಕ‌ ಪ್ರಶಂಸೆ

ದೊಡ್ಡಬಳ್ಳಾಪುರ: ಜೀವನ್ಮರಣದ ನಡುವೆ ಹೋರಾಟ ನಡೆಸುತ್ತಿದ್ದ ನವಜಾತಾ ಶಿಶುವನ್ನು ದೊಡ್ಡಬಳ್ಳಾಪುರ ತಾಯಿ-ಮಗು ಆಸ್ಪತ್ರೆಯ ವೈದ್ಯರು ಸಕಾಲಕ್ಕೆ ಚಿಕಿತ್ಸೆ ನೀಡುವ ಮೂಲಕ ಜೀವ ಉಳಿಸಿದ್ದಾರೆ. ವೈದ್ಯರ ಸಮಯಪ್ರಜ್ಞೆ ಹಾಗೂ ಸೇವಾ ಮನೋಭಾವಕ್ಕೆ ಸಾರ್ವಜನಿಕರು ಪ್ರಶಂಸೆ ವ್ಯಕ್ತಪಡಿಸುತ್ತಿದ್ದಾರೆ.

ಅಕ್ಟೋಬರ್ 7ರ ಮುಂಜಾನೆ ಉತ್ತರ ಪ್ರದೇಶದ ಆದರ್ಶ ಮತ್ತು ಗುಡಿಯ ಕುಮಾರಿ ದಂಪತಿಯ 19 ದಿನಗಳ ಶಿಶು ಉಸಿರಾಟ ಇಲ್ಲದೆ, ತನ್ನ ದೇಹದ ಸಂಪೂರ್ಣ ಸ್ವಾಧೀನ ಕಳೆದುಕೊಂಡ ಸ್ಥಿತಿಯಲ್ಲಿತ್ತು. ಕೂಡಲೇ ಆಸ್ಪತ್ರೆ ಆಂಬುಲೆನ್ಸ್ ಚಾಲಕ ಮಧು ಸ್ಥಳಕ್ಕೆ ಧಾವಿಸಿ ಮಗುವನ್ನು ದೊಡ್ಡಬಳ್ಳಾಪುರ ಸಾರ್ವಜನಿಕ ಆಸ್ಪತ್ರೆಗೆ ತಲುಪಿಸಿದ್ದರು. ಪೋಷಕರೇ ನಮ್ಮ ಮಗು ನಮ್ಮ ಪಾಲಿಗಿಲ್ಲ ಎಂದು ಕೈಚಲ್ಲಿ ಕೂತಿದ್ದರು. ಆದರೆ, ಸರ್ಕಾರಿ ಆಸ್ಪತ್ರೆಯ ಮಕ್ಕಳ ತಜ್ಞರಾದ ಡಾ. ಗಾಯತ್ರಿ. ಸಹ ವೈದ್ಯರಾದ ಲಲಿತಾ, ಶ್ರುಶುಷಕಾಧಿಕಾರಿಗಳಾದ ಶೋಭಾ, ಲಾವಣ್ಯ ರವರ ಸಹಕಾರದೊಂದಿಗೆ ಕೂಡಲೇ ಕಾರ್ಯ ಪ್ರವೃತ್ತರಾಗಿ ತಮ್ಮ ಸೇವಾ ನಿಷ್ಠೆ ಮರೆಯದೇ ಮಗುವನ್ನು ಎನ್.ಬಿ.ಎಸ್.ಯು(NBSU) ತುರ್ತು ಘಟಕಕ್ಕೆ ರವಾನಿಸಿ ಅವಶ್ಯಕ ತುರ್ತು ಚಿಕಿತ್ಸೆ ನೀಡಿ ಮಗು ಮತ್ತೆ ಉಸಿರಾಡುವಂತೆ ಮಾಡಿದ್ದಾರೆ.

ಮಗುವಿನ ಉಸಿರಾಟದ ಸ್ಥಿತಿ ಹತೋಟಿಗೆ ಬಂದ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಾಣಿ ವಿಲಾಸ್ ಆಸ್ಪತ್ರೆಗೆ ರವಾನಿಸಿದ್ದರು. ಇಂದು ಮಗು ಸಂಪೂರ್ಣ ಚೇತರಿಕೆ ಕಂಡು ತನ್ನ ಮನೆಗೆ ಹಿಂದಿರುಗಿದೆ. ಜೀವ ಉಳಿಸಿದ ಸಾರ್ವಜನಿಕ ಆಸ್ಪತ್ರೆ ವೈದ್ಯರಿಗೆ ಹಾಗೂ ಸಿಬ್ಬಂದಿಗೆ ಪೋಷಕರು ಅಭಿನಂದನೆ ಸಲ್ಲಿಸಿದ್ದು, ಸಾಮಾಜಿಕ ವಲಯದಲ್ಲಿ ವೈದ್ಯರ ಕಾರ್ಯ ವೈಖರಿಗೆ ಮೆಚ್ಚುಗೆ ವ್ಯಕ್ತವಾಗಿದೆ.

Ramesh Babu

Journalist

Recent Posts

ಫ್ರಿಡ್ಜ್ ಕ್ಲೀನ್ ಮಾಡುವಾಗ ವಿದ್ಯುತ್ ಶಾಕ್: ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಫ್ರಿಡ್ಜ್ ಸ್ವಚ್ಛಗೊಳಿಸುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ ದೊಡ್ಡಬಳ್ಳಾಪುರ ನಗರದ ಚೈತನ್ಯನಗರದಲ್ಲಿ ನಡೆದಿದೆ. ಮೃತರನ್ನು…

3 hours ago

“ಎಲ್ಲವೂ ವಿಫಲವಾದಾಗ ತಾಳ್ಮೆ ಸಫಲವಾಗುತ್ತದೆ”…….

" ಎಲ್ಲವೂ ವಿಫಲವಾದಾಗ ತಾಳ್ಮೆಯು ಸಫಲವಾಗುತ್ತದೆ....." ಎಂಬ ದಾರ್ಶನಿಕರ ಮಾತು ಎಷ್ಟೊಂದು ಅನುಭಾವದ ಅರ್ಥಪೂರ್ಣ ಮಾತಲ್ಲವೇ.... ಇದಕ್ಕೆ ಅತ್ಯಂತ ನೈಜ…

12 hours ago

ಎಲ್ರಿ ಅಧಿಕಾರಿಗಳು, ಜನರ ಸಮಸ್ಯೆ ಕೇಳೋದ್ಯಾರು..?- ತಹಶೀಲ್ದಾರ್ ಮಲ್ಲಪ್ಪ ಕೆ ಯರಗೋಳಗೆ ಸಚಿವ ಕೆ.ಎಚ್ ಮುನಿಯಪ್ಪ ತೀವ್ರ ತರಾಟೆ

ಎಲ್ರಿ ಅಧಿಕಾರಿಗಳು, ಜನ್ರ ಸಮಸ್ಯೆ ಕೇಳೋದ್ಯಾರು..?ಜನ ನನಗೆ ವೋಟ್ ಹಾಕಿದ್ಯಾಕೆ..? ಅಧಿಕಾರಿಗಳು ಇಲ್ಲಿದ್ರೆ ಜನರ ಸಮಸ್ಯೆ ಕೂಡಲೇ ಬಗೆಹರಿಸಬಹುದಲ್ವಾ.. ವೋಟ್…

23 hours ago

1 ಕೋಟಿ ರೂ. ವೆಚ್ಚದ ಸಿಸಿ ರಸ್ತೆ, ಚರಂಡಿ ಕಾಮಗಾರಿಗೆ ಚಾಲನೆ

ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದ ಶಾಸಕನಾಗಿರುವ ಜೊತೆಗೆ ಜಿಲ್ಲೆಯ ಉಸ್ತುವಾರಿ ಮಂತ್ರಿಯಾಗಿದ್ದು, ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತಗಳ ಸರ್ವಾಂಗೀಣ ಅಭಿವೃದ್ಧಿಗಳಿಗೆ…

1 day ago

ಪ್ರಸ್ತುತ ಒಂದು ಮಲೇರಿಯಾ, 6 ಡೆಂಗ್ಯೂ ದಾಖಲು: ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ:- ಡಿಸಿ ಡಾ.ಕೆ ಎನ್ ಅನುರಾಧ

ಮುಂಗಾರು ಹಂಗಾಮಿನಲ್ಲಿ ಮಳೆಯಿಂದಾಗಿ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗಲಿದ್ದು ಇದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇರುವುದರಿಂದ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ…

2 days ago

ಗ್ರಾಮಾಂತರ ಪೊಲೀಸ್ ಠಾಣೆಗೆ ಬೊಲೆರೋ ವಾಹನ ಹಸ್ತಾಂತರ

ನಗರಕ್ಕೆ ಸಂಚಾರಿ ಪೊಲೀಸ್ ಠಾಣೆ ಮಂಜೂರಾಗಿದೆ. ಆದರೆ, ಇಲ್ಲಿಯವರೆಗೂ ಅನುದಾನ ಬಿಡುಗಡೆ ಮಾಡಿಲ್ಲ. ಪೊಲೀಸ್ ಠಾಣೆಯ ಜೀಪ್ ಗೂ ಶಾಸಕರ…

2 days ago