Categories: ಕೋಲಾರ

ಉಸ್ತುವಾರಿ ಸಚಿವರ ಬದಲಾವಣೆಗೆ ರೈತ ಸಂಘ ಒತ್ತಾಯ

ಕೋಲಾರ: ಜಿಲ್ಲೆಯ ರೈತರ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸದ ಜಿಲ್ಲಾ ಉಸ್ತುವಾರಿ ಸಚಿವರನ್ನು ಬದಲಾವಣೆ ಮಾಡಿ ಜಿಲ್ಲೆಯ ನಾಡಿ ಮಿಡಿತವಿರುವ ಸಚಿವರನ್ನು ನೇಮಕ ಮಾಡಬೇಕೆಂದು ರೈತಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಪತ್ರಿಕಾ ಹೇಳಿಕೆ ಮುಖಾಂತರ ಮುಖ್ಯಮಂತ್ರಿಗಳನ್ನು ಒತ್ತಾಯಿಸಿದರು.

ಈ ಕುರಿತು ನಗರ ಹೊರವಲಯದ ಅರಣ್ಯ ಉದ್ಯಾನವನದಲ್ಲಿ ಪತ್ರಿಕಾ ಹೇಳಿಕೆ ನೀಡಿ ಮಾತನಾಡಿದ ಅವರು, ಜಿಲ್ಲಾ ಉಸ್ತುವಾರಿ ಸಚಿವರಾದ ಬೈರತಿ ಸುರೇಶ್ ಅವರು ನಾಮಕಾವಸ್ತೆ ಹಾಗೂ ಪಕ್ಷದ ಕಾರ್ಯಕ್ರಮಗಳಿಗೆ ಮಾತ್ರ ಸೀಮಿತವಾಗುವ ಜೊತೆಗೆ ರಾಷ್ಟ್ರೀಯ ಹಬ್ಬಗಳ ಸಮಯದಲ್ಲಿ ಬಂದು ಕಾಣಿಸಿಕೊಂಡು ನಾಪತ್ತೆಯಾದರೆ ಮತ್ತೆ ಅವರನ್ನು ಹುಡುಕಾಡಿದರೂ ಸಿಗಲಾರದ ಮಟ್ಟಕ್ಕೆ ನಾಪತ್ತೆಯಾಗಿದ್ದಾರೆಂದು ಆರೋಪಿಸಿದರು.

ಜಿಲ್ಲೆಯಲ್ಲಿ ರೈತರು ಹಾಗೂ ಅರಣ್ಯ ಅಧಿಕಾರಿಗಳ ಮಧ್ಯೆ ಹಗ್ಗಜಗ್ಗಾಟ ನಿರಂತರವಾಗಿ ನಡೆಯುತ್ತಿದೆ. ಜೊತೆಗೆ ಉಪ ಲೋಕಾಯುಕ್ತರು ಭೇಟಿ ನೀಡಿದಾಗ ಸರ್ಕಾರಿ ಕಚೇರಿಗಳಲ್ಲಿನ ಭ್ರಷ್ಟಾಚಾರ ದರ್ಶನವವಾಗುತ್ತಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಅವಧಿ ಮೀರಿದ ಔಷಧಿಗಳನ್ನು ನೀಡಿ ಬಡವರ ಬದುಕನ್ನು ಬೀದಿಗೆ ತಳ್ಳುತ್ತಿದ್ದಾರೆ. ನಕಲಿ ಬಿತ್ತನೆ ಬೀಜ ಕೀಟನಾಶಕಗಳವರು ಜಿಲ್ಲೆಯಲ್ಲಿ ಆರ್ಭಟ ಮಾಡುತ್ತಿದ್ದರೂ ಜಿಲ್ಲಾ ಉಸ್ತುವಾರಿ ಸಚಿವರು ಇದರ ಕಡೆ ಗಮನ ಹರಿಸದೇ ಇರುವುದು ದುರಾದೃಷ್ಟಕರವೆಂದು ವಿಷಾಧ ವ್ಯಕ್ತಪಡಿಸಿದರು.

ಜಿಲ್ಲೆಯಲ್ಲಿ ಅಕಾಲಿಕ ಮಳೆಯಿಂದ ರೈತರ ಬೆಳೆ ನಷ್ಟವಾಗುತ್ತಿದೆ. ಮತ್ತೊಂದೆಡೆ ಕೆಸಿವ್ಯಾಲಿ ೩ನೇ ಹಂತದ ಶುದ್ಧೀಕರಣವಿಲ್ಲದೆ ಲಕ್ಷಾಂತರ ರೂಪಾಯಿ ಬಂಡವಾಳ ಹಾಕಿ ಬೆಳೆದಂತಹ ಟೊಮೇಟೊ ಮತ್ತಿತರರ ಬೆಳೆಗಳಿಗೆ ಬಾಧಿಸುತ್ತಿರುವ ರೋಗಗಳು ನಿಯಂತ್ರಣಕ್ಕೆ ಬಾರದೆ ಹಾಕಿದ ಬಂಡವಾಳ ಕೈಗೆ ಸಿಗದೆ ರೈತ ಸಾಲಗಾರನಾಗುತ್ತಿದ್ದರೂ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸದ ಜೊತೆಗೆ ಟೊಮೇಟೊ ಮಾರುಕಟ್ಟೆ ಜಾಗದ ಸಮಸ್ಯೆ ಡಿಸಿಸಿ ಬ್ಯಾಂಕ್ ಹಾಲು ಒಕ್ಕೂಟದ ನೂರಾರು ಕೋಟಿ ಭ್ರಷ್ಟಾಚಾರ ಆರೋಪಗಳನ್ನು ಅವರ ಪಕ್ಷದ ಶಾಸಕರೇ ಬೀದಿ ಜಗಳವಾಡುತ್ತಿದ್ದರೂ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸದ ಉಸ್ತುವಾರಿ ಸಚಿವರನ್ನು ಬದಲಾವಣೆ ಮಾಡಿ ಪುಣ್ಯ ಕಟ್ಟಿಕೊಳ್ಳಿ ಎಂದು ಸರ್ಕಾರಕ್ಕೆ ಒತ್ತಾಯ ಮಾಡಿದರು.

ಜಿಲ್ಲಾ ಕಾರ್ಯಾಧ್ಯಕ್ಷ ವಕ್ಕಲೇರಿ ಹನುಮಯ್ಯ ಮಾತನಾಡಿ, ಪ್ರತಿ ೫ ವರ್ಷಕ್ಕೊಮ್ಮೆ ಜನಪ್ರತಿನಿಧಿಗಳು ಬದಲಾಗುತ್ತಾರೆ. ೨ ವರ್ಷಕ್ಕೊಮ್ಮೆ ಜಿಲ್ಲಾಧಿಕಾರಿಗಳು ಒಳಗೊಂಡಂತೆ ಹಿರಿಯ ಅಧಿಕಾರಿಗಳು ಬದಲಾಗುತ್ತಾರೆಯೇ ಹೊರತು ಜಿಲ್ಲೆಯ ರೈತರ ಜ್ವಲಂತ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸುವಲ್ಲಿ ಜಿಲ್ಲಾಡಳಿತ ಉಸ್ತುವಾರಿ ಸಚಿವರು ವಿಫಲವಾಗಿದ್ದಾರೆ.
ಪ್ರತಿ ಸರ್ಕಾರಿ ಕಚೇರಿಯಲ್ಲಿ ಲಂಚವಿಲ್ಲದೆ ಬಡವನ ನೆರಳೂ ಸಹ ಸರ್ಕಾರಿ ಕಚೇರಿಯ ಬಾಗಿಲಿಗೂ ಬೀಳುವಂತಿಲ್ಲ. ಅಷ್ಟರ ಮಟ್ಟಿಗೆ ಜಿಲ್ಲಾಡಳಿತ ಹದಗೆಟ್ಟಿರುವ ಜೊತೆಗೆ ಹೆಜ್ಜೆಹೆಜ್ಜೆಗೂ ಭ್ರಷ್ಟಾಚಾರ, ದಲ್ಲಾಳಿಗಳ ಹಾವಳಿ ಮಿತಿ ಮೀರಿದೆ. ಕನಿಷ್ಟ ಸೌಜನ್ಯಕ್ಕಾದರೂ ಜಿಲ್ಲಾ ಉಸ್ತುವಾರಿ ಸಚಿವರು ರೈತರ ಸಮಸ್ಯೆಗಳ ಬಗ್ಗೆ ಸಭೆ ಕರೆಯಲು ಪುರಸೊತ್ತಿಲ್ಲ. ಅತ್ತೆ ಮನೆಗೆ ಅಳಿಯ ಬಂದ ಹಾಗೆ ಕೆಡಿಪಿ ಸಭೆಗಳಿಗೆ ಬಂದು ಅಧಿಕಾರಿಗಳ ಮೇಲೆ ಪ್ರತಾಪ ತೋರಿ ನಾಪತ್ತೆಯಾಗುವ ಜಿಲ್ಲೆಯ ನಾಡಿ ಮಿಡಿತವಿಲ್ಲದ ಉಸ್ತುವಾರಿ ಸಚಿವರನ್ನು ಬದಲಾವಣೆ ಮಾಡಿ ಪುಣ್ಯ ಕಟ್ಟಿಕೊಂಡು ಜಿಲ್ಲೆಯ ನಾಲ್ಕು ಶಾಸಕರಲ್ಲಿ ಒಬ್ಬರಿಗೆ ಸಚಿವ ಸ್ಥಾನ ನೀಡಿ ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಿ ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಸಂಚಾಲಕ ಬಂಗವಾದಿ ನಾಗರಾಜಗೌಡ, ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ್, ತೆರ್ನಹಳ್ಳಿ ಅಂಜಿನಪ್ಪ, ಅಪ್ಪೋಜಿರಾವ್, ಮಂಗಸಂದ್ರ ತಿಮ್ಮಣ್ಣ, ವೆಂಕಟೇಶಪ್ಪ, ನರಸಿಂಹಪ್ಪ, ಸುಪ್ರಿಂ ಚಲ, ಚಂದ್ರಪ್ಪ, ಶೈಲಜ, ಗೌರಮ್ಮ, ರತ್ನಮ್ಮ, ವೆಂಕಟಮ್ಮ, ಮುನಿರತ್ನಮ್ಮ, ಶಾರದಮ್ಮ, ಮುಂತಾದವರು ಇದ್ದರು.

Ramesh Babu

Journalist

Share
Published by
Ramesh Babu

Recent Posts

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

3 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

10 hours ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

13 hours ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

13 hours ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

1 day ago

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…

1 day ago