Categories: ಕೋಲಾರ

ಉಸ್ತುವಾರಿ ಸಚಿವರ ಬದಲಾವಣೆಗೆ ರೈತ ಸಂಘ ಒತ್ತಾಯ

ಕೋಲಾರ: ಜಿಲ್ಲೆಯ ರೈತರ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸದ ಜಿಲ್ಲಾ ಉಸ್ತುವಾರಿ ಸಚಿವರನ್ನು ಬದಲಾವಣೆ ಮಾಡಿ ಜಿಲ್ಲೆಯ ನಾಡಿ ಮಿಡಿತವಿರುವ ಸಚಿವರನ್ನು ನೇಮಕ ಮಾಡಬೇಕೆಂದು ರೈತಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಪತ್ರಿಕಾ ಹೇಳಿಕೆ ಮುಖಾಂತರ ಮುಖ್ಯಮಂತ್ರಿಗಳನ್ನು ಒತ್ತಾಯಿಸಿದರು.

ಈ ಕುರಿತು ನಗರ ಹೊರವಲಯದ ಅರಣ್ಯ ಉದ್ಯಾನವನದಲ್ಲಿ ಪತ್ರಿಕಾ ಹೇಳಿಕೆ ನೀಡಿ ಮಾತನಾಡಿದ ಅವರು, ಜಿಲ್ಲಾ ಉಸ್ತುವಾರಿ ಸಚಿವರಾದ ಬೈರತಿ ಸುರೇಶ್ ಅವರು ನಾಮಕಾವಸ್ತೆ ಹಾಗೂ ಪಕ್ಷದ ಕಾರ್ಯಕ್ರಮಗಳಿಗೆ ಮಾತ್ರ ಸೀಮಿತವಾಗುವ ಜೊತೆಗೆ ರಾಷ್ಟ್ರೀಯ ಹಬ್ಬಗಳ ಸಮಯದಲ್ಲಿ ಬಂದು ಕಾಣಿಸಿಕೊಂಡು ನಾಪತ್ತೆಯಾದರೆ ಮತ್ತೆ ಅವರನ್ನು ಹುಡುಕಾಡಿದರೂ ಸಿಗಲಾರದ ಮಟ್ಟಕ್ಕೆ ನಾಪತ್ತೆಯಾಗಿದ್ದಾರೆಂದು ಆರೋಪಿಸಿದರು.

ಜಿಲ್ಲೆಯಲ್ಲಿ ರೈತರು ಹಾಗೂ ಅರಣ್ಯ ಅಧಿಕಾರಿಗಳ ಮಧ್ಯೆ ಹಗ್ಗಜಗ್ಗಾಟ ನಿರಂತರವಾಗಿ ನಡೆಯುತ್ತಿದೆ. ಜೊತೆಗೆ ಉಪ ಲೋಕಾಯುಕ್ತರು ಭೇಟಿ ನೀಡಿದಾಗ ಸರ್ಕಾರಿ ಕಚೇರಿಗಳಲ್ಲಿನ ಭ್ರಷ್ಟಾಚಾರ ದರ್ಶನವವಾಗುತ್ತಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಅವಧಿ ಮೀರಿದ ಔಷಧಿಗಳನ್ನು ನೀಡಿ ಬಡವರ ಬದುಕನ್ನು ಬೀದಿಗೆ ತಳ್ಳುತ್ತಿದ್ದಾರೆ. ನಕಲಿ ಬಿತ್ತನೆ ಬೀಜ ಕೀಟನಾಶಕಗಳವರು ಜಿಲ್ಲೆಯಲ್ಲಿ ಆರ್ಭಟ ಮಾಡುತ್ತಿದ್ದರೂ ಜಿಲ್ಲಾ ಉಸ್ತುವಾರಿ ಸಚಿವರು ಇದರ ಕಡೆ ಗಮನ ಹರಿಸದೇ ಇರುವುದು ದುರಾದೃಷ್ಟಕರವೆಂದು ವಿಷಾಧ ವ್ಯಕ್ತಪಡಿಸಿದರು.

ಜಿಲ್ಲೆಯಲ್ಲಿ ಅಕಾಲಿಕ ಮಳೆಯಿಂದ ರೈತರ ಬೆಳೆ ನಷ್ಟವಾಗುತ್ತಿದೆ. ಮತ್ತೊಂದೆಡೆ ಕೆಸಿವ್ಯಾಲಿ ೩ನೇ ಹಂತದ ಶುದ್ಧೀಕರಣವಿಲ್ಲದೆ ಲಕ್ಷಾಂತರ ರೂಪಾಯಿ ಬಂಡವಾಳ ಹಾಕಿ ಬೆಳೆದಂತಹ ಟೊಮೇಟೊ ಮತ್ತಿತರರ ಬೆಳೆಗಳಿಗೆ ಬಾಧಿಸುತ್ತಿರುವ ರೋಗಗಳು ನಿಯಂತ್ರಣಕ್ಕೆ ಬಾರದೆ ಹಾಕಿದ ಬಂಡವಾಳ ಕೈಗೆ ಸಿಗದೆ ರೈತ ಸಾಲಗಾರನಾಗುತ್ತಿದ್ದರೂ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸದ ಜೊತೆಗೆ ಟೊಮೇಟೊ ಮಾರುಕಟ್ಟೆ ಜಾಗದ ಸಮಸ್ಯೆ ಡಿಸಿಸಿ ಬ್ಯಾಂಕ್ ಹಾಲು ಒಕ್ಕೂಟದ ನೂರಾರು ಕೋಟಿ ಭ್ರಷ್ಟಾಚಾರ ಆರೋಪಗಳನ್ನು ಅವರ ಪಕ್ಷದ ಶಾಸಕರೇ ಬೀದಿ ಜಗಳವಾಡುತ್ತಿದ್ದರೂ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸದ ಉಸ್ತುವಾರಿ ಸಚಿವರನ್ನು ಬದಲಾವಣೆ ಮಾಡಿ ಪುಣ್ಯ ಕಟ್ಟಿಕೊಳ್ಳಿ ಎಂದು ಸರ್ಕಾರಕ್ಕೆ ಒತ್ತಾಯ ಮಾಡಿದರು.

ಜಿಲ್ಲಾ ಕಾರ್ಯಾಧ್ಯಕ್ಷ ವಕ್ಕಲೇರಿ ಹನುಮಯ್ಯ ಮಾತನಾಡಿ, ಪ್ರತಿ ೫ ವರ್ಷಕ್ಕೊಮ್ಮೆ ಜನಪ್ರತಿನಿಧಿಗಳು ಬದಲಾಗುತ್ತಾರೆ. ೨ ವರ್ಷಕ್ಕೊಮ್ಮೆ ಜಿಲ್ಲಾಧಿಕಾರಿಗಳು ಒಳಗೊಂಡಂತೆ ಹಿರಿಯ ಅಧಿಕಾರಿಗಳು ಬದಲಾಗುತ್ತಾರೆಯೇ ಹೊರತು ಜಿಲ್ಲೆಯ ರೈತರ ಜ್ವಲಂತ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸುವಲ್ಲಿ ಜಿಲ್ಲಾಡಳಿತ ಉಸ್ತುವಾರಿ ಸಚಿವರು ವಿಫಲವಾಗಿದ್ದಾರೆ.
ಪ್ರತಿ ಸರ್ಕಾರಿ ಕಚೇರಿಯಲ್ಲಿ ಲಂಚವಿಲ್ಲದೆ ಬಡವನ ನೆರಳೂ ಸಹ ಸರ್ಕಾರಿ ಕಚೇರಿಯ ಬಾಗಿಲಿಗೂ ಬೀಳುವಂತಿಲ್ಲ. ಅಷ್ಟರ ಮಟ್ಟಿಗೆ ಜಿಲ್ಲಾಡಳಿತ ಹದಗೆಟ್ಟಿರುವ ಜೊತೆಗೆ ಹೆಜ್ಜೆಹೆಜ್ಜೆಗೂ ಭ್ರಷ್ಟಾಚಾರ, ದಲ್ಲಾಳಿಗಳ ಹಾವಳಿ ಮಿತಿ ಮೀರಿದೆ. ಕನಿಷ್ಟ ಸೌಜನ್ಯಕ್ಕಾದರೂ ಜಿಲ್ಲಾ ಉಸ್ತುವಾರಿ ಸಚಿವರು ರೈತರ ಸಮಸ್ಯೆಗಳ ಬಗ್ಗೆ ಸಭೆ ಕರೆಯಲು ಪುರಸೊತ್ತಿಲ್ಲ. ಅತ್ತೆ ಮನೆಗೆ ಅಳಿಯ ಬಂದ ಹಾಗೆ ಕೆಡಿಪಿ ಸಭೆಗಳಿಗೆ ಬಂದು ಅಧಿಕಾರಿಗಳ ಮೇಲೆ ಪ್ರತಾಪ ತೋರಿ ನಾಪತ್ತೆಯಾಗುವ ಜಿಲ್ಲೆಯ ನಾಡಿ ಮಿಡಿತವಿಲ್ಲದ ಉಸ್ತುವಾರಿ ಸಚಿವರನ್ನು ಬದಲಾವಣೆ ಮಾಡಿ ಪುಣ್ಯ ಕಟ್ಟಿಕೊಂಡು ಜಿಲ್ಲೆಯ ನಾಲ್ಕು ಶಾಸಕರಲ್ಲಿ ಒಬ್ಬರಿಗೆ ಸಚಿವ ಸ್ಥಾನ ನೀಡಿ ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಿ ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಸಂಚಾಲಕ ಬಂಗವಾದಿ ನಾಗರಾಜಗೌಡ, ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ್, ತೆರ್ನಹಳ್ಳಿ ಅಂಜಿನಪ್ಪ, ಅಪ್ಪೋಜಿರಾವ್, ಮಂಗಸಂದ್ರ ತಿಮ್ಮಣ್ಣ, ವೆಂಕಟೇಶಪ್ಪ, ನರಸಿಂಹಪ್ಪ, ಸುಪ್ರಿಂ ಚಲ, ಚಂದ್ರಪ್ಪ, ಶೈಲಜ, ಗೌರಮ್ಮ, ರತ್ನಮ್ಮ, ವೆಂಕಟಮ್ಮ, ಮುನಿರತ್ನಮ್ಮ, ಶಾರದಮ್ಮ, ಮುಂತಾದವರು ಇದ್ದರು.

Ramesh Babu

Journalist

Recent Posts

ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿದ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವ

ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…

5 hours ago

ಜಗತ್ತಿನ ಬೆಳಕಿನ ಹಬ್ಬ – ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ…..

ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…

8 hours ago

ಖಾಸಗಿ ಬಸ್ ಲಾರಿಗೆ ಡಿಕ್ಕಿ: ಹೊತ್ತಿ ಉರಿದ ಬಸ್: 9 ಮಂದಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಬಸ್ ಒಳಗಡೆಯೇ ಸಜೀವ ದಹನ

ಎಲ್ಲರನ್ನು ಬೆಚ್ಚಿಬೀಳಿಸುವಂತಹ ಭೀಕರ ರಸ್ತೆ ಅಪಘಾತವೊಂದು ಚಿತ್ರದುರ್ಗದ ಬಳಿ ನಡೆದಿದ್ದು, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ 'ಸೀ ಬರ್ಡ್' ಖಾಸಗಿ ಬಸ್…

8 hours ago

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು ಇಲ್ಲಿವೆ ನೋಡಿ…

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…

21 hours ago

ನಾಳೆ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಬ್ರಹ್ಮರಥೋತ್ಸವ: ಬ್ರಹ್ಮ ರಥೋತ್ಸವಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ: ಇಂದು ಕ್ಷೇತ್ರಕ್ಕೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಭೇಟಿ, ಪರಿಶೀಲನೆ

ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…

22 hours ago