Categories: ಕೋಲಾರ

ಉಸ್ತುವಾರಿ ಸಚಿವರ ಬದಲಾವಣೆಗೆ ರೈತ ಸಂಘ ಒತ್ತಾಯ

ಕೋಲಾರ: ಜಿಲ್ಲೆಯ ರೈತರ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸದ ಜಿಲ್ಲಾ ಉಸ್ತುವಾರಿ ಸಚಿವರನ್ನು ಬದಲಾವಣೆ ಮಾಡಿ ಜಿಲ್ಲೆಯ ನಾಡಿ ಮಿಡಿತವಿರುವ ಸಚಿವರನ್ನು ನೇಮಕ ಮಾಡಬೇಕೆಂದು ರೈತಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಪತ್ರಿಕಾ ಹೇಳಿಕೆ ಮುಖಾಂತರ ಮುಖ್ಯಮಂತ್ರಿಗಳನ್ನು ಒತ್ತಾಯಿಸಿದರು.

ಈ ಕುರಿತು ನಗರ ಹೊರವಲಯದ ಅರಣ್ಯ ಉದ್ಯಾನವನದಲ್ಲಿ ಪತ್ರಿಕಾ ಹೇಳಿಕೆ ನೀಡಿ ಮಾತನಾಡಿದ ಅವರು, ಜಿಲ್ಲಾ ಉಸ್ತುವಾರಿ ಸಚಿವರಾದ ಬೈರತಿ ಸುರೇಶ್ ಅವರು ನಾಮಕಾವಸ್ತೆ ಹಾಗೂ ಪಕ್ಷದ ಕಾರ್ಯಕ್ರಮಗಳಿಗೆ ಮಾತ್ರ ಸೀಮಿತವಾಗುವ ಜೊತೆಗೆ ರಾಷ್ಟ್ರೀಯ ಹಬ್ಬಗಳ ಸಮಯದಲ್ಲಿ ಬಂದು ಕಾಣಿಸಿಕೊಂಡು ನಾಪತ್ತೆಯಾದರೆ ಮತ್ತೆ ಅವರನ್ನು ಹುಡುಕಾಡಿದರೂ ಸಿಗಲಾರದ ಮಟ್ಟಕ್ಕೆ ನಾಪತ್ತೆಯಾಗಿದ್ದಾರೆಂದು ಆರೋಪಿಸಿದರು.

ಜಿಲ್ಲೆಯಲ್ಲಿ ರೈತರು ಹಾಗೂ ಅರಣ್ಯ ಅಧಿಕಾರಿಗಳ ಮಧ್ಯೆ ಹಗ್ಗಜಗ್ಗಾಟ ನಿರಂತರವಾಗಿ ನಡೆಯುತ್ತಿದೆ. ಜೊತೆಗೆ ಉಪ ಲೋಕಾಯುಕ್ತರು ಭೇಟಿ ನೀಡಿದಾಗ ಸರ್ಕಾರಿ ಕಚೇರಿಗಳಲ್ಲಿನ ಭ್ರಷ್ಟಾಚಾರ ದರ್ಶನವವಾಗುತ್ತಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಅವಧಿ ಮೀರಿದ ಔಷಧಿಗಳನ್ನು ನೀಡಿ ಬಡವರ ಬದುಕನ್ನು ಬೀದಿಗೆ ತಳ್ಳುತ್ತಿದ್ದಾರೆ. ನಕಲಿ ಬಿತ್ತನೆ ಬೀಜ ಕೀಟನಾಶಕಗಳವರು ಜಿಲ್ಲೆಯಲ್ಲಿ ಆರ್ಭಟ ಮಾಡುತ್ತಿದ್ದರೂ ಜಿಲ್ಲಾ ಉಸ್ತುವಾರಿ ಸಚಿವರು ಇದರ ಕಡೆ ಗಮನ ಹರಿಸದೇ ಇರುವುದು ದುರಾದೃಷ್ಟಕರವೆಂದು ವಿಷಾಧ ವ್ಯಕ್ತಪಡಿಸಿದರು.

ಜಿಲ್ಲೆಯಲ್ಲಿ ಅಕಾಲಿಕ ಮಳೆಯಿಂದ ರೈತರ ಬೆಳೆ ನಷ್ಟವಾಗುತ್ತಿದೆ. ಮತ್ತೊಂದೆಡೆ ಕೆಸಿವ್ಯಾಲಿ ೩ನೇ ಹಂತದ ಶುದ್ಧೀಕರಣವಿಲ್ಲದೆ ಲಕ್ಷಾಂತರ ರೂಪಾಯಿ ಬಂಡವಾಳ ಹಾಕಿ ಬೆಳೆದಂತಹ ಟೊಮೇಟೊ ಮತ್ತಿತರರ ಬೆಳೆಗಳಿಗೆ ಬಾಧಿಸುತ್ತಿರುವ ರೋಗಗಳು ನಿಯಂತ್ರಣಕ್ಕೆ ಬಾರದೆ ಹಾಕಿದ ಬಂಡವಾಳ ಕೈಗೆ ಸಿಗದೆ ರೈತ ಸಾಲಗಾರನಾಗುತ್ತಿದ್ದರೂ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸದ ಜೊತೆಗೆ ಟೊಮೇಟೊ ಮಾರುಕಟ್ಟೆ ಜಾಗದ ಸಮಸ್ಯೆ ಡಿಸಿಸಿ ಬ್ಯಾಂಕ್ ಹಾಲು ಒಕ್ಕೂಟದ ನೂರಾರು ಕೋಟಿ ಭ್ರಷ್ಟಾಚಾರ ಆರೋಪಗಳನ್ನು ಅವರ ಪಕ್ಷದ ಶಾಸಕರೇ ಬೀದಿ ಜಗಳವಾಡುತ್ತಿದ್ದರೂ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸದ ಉಸ್ತುವಾರಿ ಸಚಿವರನ್ನು ಬದಲಾವಣೆ ಮಾಡಿ ಪುಣ್ಯ ಕಟ್ಟಿಕೊಳ್ಳಿ ಎಂದು ಸರ್ಕಾರಕ್ಕೆ ಒತ್ತಾಯ ಮಾಡಿದರು.

ಜಿಲ್ಲಾ ಕಾರ್ಯಾಧ್ಯಕ್ಷ ವಕ್ಕಲೇರಿ ಹನುಮಯ್ಯ ಮಾತನಾಡಿ, ಪ್ರತಿ ೫ ವರ್ಷಕ್ಕೊಮ್ಮೆ ಜನಪ್ರತಿನಿಧಿಗಳು ಬದಲಾಗುತ್ತಾರೆ. ೨ ವರ್ಷಕ್ಕೊಮ್ಮೆ ಜಿಲ್ಲಾಧಿಕಾರಿಗಳು ಒಳಗೊಂಡಂತೆ ಹಿರಿಯ ಅಧಿಕಾರಿಗಳು ಬದಲಾಗುತ್ತಾರೆಯೇ ಹೊರತು ಜಿಲ್ಲೆಯ ರೈತರ ಜ್ವಲಂತ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸುವಲ್ಲಿ ಜಿಲ್ಲಾಡಳಿತ ಉಸ್ತುವಾರಿ ಸಚಿವರು ವಿಫಲವಾಗಿದ್ದಾರೆ.
ಪ್ರತಿ ಸರ್ಕಾರಿ ಕಚೇರಿಯಲ್ಲಿ ಲಂಚವಿಲ್ಲದೆ ಬಡವನ ನೆರಳೂ ಸಹ ಸರ್ಕಾರಿ ಕಚೇರಿಯ ಬಾಗಿಲಿಗೂ ಬೀಳುವಂತಿಲ್ಲ. ಅಷ್ಟರ ಮಟ್ಟಿಗೆ ಜಿಲ್ಲಾಡಳಿತ ಹದಗೆಟ್ಟಿರುವ ಜೊತೆಗೆ ಹೆಜ್ಜೆಹೆಜ್ಜೆಗೂ ಭ್ರಷ್ಟಾಚಾರ, ದಲ್ಲಾಳಿಗಳ ಹಾವಳಿ ಮಿತಿ ಮೀರಿದೆ. ಕನಿಷ್ಟ ಸೌಜನ್ಯಕ್ಕಾದರೂ ಜಿಲ್ಲಾ ಉಸ್ತುವಾರಿ ಸಚಿವರು ರೈತರ ಸಮಸ್ಯೆಗಳ ಬಗ್ಗೆ ಸಭೆ ಕರೆಯಲು ಪುರಸೊತ್ತಿಲ್ಲ. ಅತ್ತೆ ಮನೆಗೆ ಅಳಿಯ ಬಂದ ಹಾಗೆ ಕೆಡಿಪಿ ಸಭೆಗಳಿಗೆ ಬಂದು ಅಧಿಕಾರಿಗಳ ಮೇಲೆ ಪ್ರತಾಪ ತೋರಿ ನಾಪತ್ತೆಯಾಗುವ ಜಿಲ್ಲೆಯ ನಾಡಿ ಮಿಡಿತವಿಲ್ಲದ ಉಸ್ತುವಾರಿ ಸಚಿವರನ್ನು ಬದಲಾವಣೆ ಮಾಡಿ ಪುಣ್ಯ ಕಟ್ಟಿಕೊಂಡು ಜಿಲ್ಲೆಯ ನಾಲ್ಕು ಶಾಸಕರಲ್ಲಿ ಒಬ್ಬರಿಗೆ ಸಚಿವ ಸ್ಥಾನ ನೀಡಿ ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಿ ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಸಂಚಾಲಕ ಬಂಗವಾದಿ ನಾಗರಾಜಗೌಡ, ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ್, ತೆರ್ನಹಳ್ಳಿ ಅಂಜಿನಪ್ಪ, ಅಪ್ಪೋಜಿರಾವ್, ಮಂಗಸಂದ್ರ ತಿಮ್ಮಣ್ಣ, ವೆಂಕಟೇಶಪ್ಪ, ನರಸಿಂಹಪ್ಪ, ಸುಪ್ರಿಂ ಚಲ, ಚಂದ್ರಪ್ಪ, ಶೈಲಜ, ಗೌರಮ್ಮ, ರತ್ನಮ್ಮ, ವೆಂಕಟಮ್ಮ, ಮುನಿರತ್ನಮ್ಮ, ಶಾರದಮ್ಮ, ಮುಂತಾದವರು ಇದ್ದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರಾಗಿ ನರಸಿಂಹ ಮೂರ್ತಿ ನೇಮಕ

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…

5 hours ago

ಪ್ರತಿಯೊಬ್ಬ ಭಾರತೀಯನ ತಲೆ ಮೇಲೆ ರೂ. 4.8 ಲಕ್ಷದಷ್ಟು ಸಾಲದ ಹೊರೆ ಇದೆ- ಸಿಎಂ‌ ಸಿದ್ದರಾಮಯ್ಯ

ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು…

6 hours ago

ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದ ಪಾಪಿ ಪುತ್ರ

ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಶ್ರವಣಬೆಳಗೊಳದಲ್ಲಿ ಪಾಪಿ ಪುತ್ರನೊಬ್ಬ ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದಿದ್ದಾನೆ. ಗಂಗಮ್ಮ (65), ಕೊಲೆಯಾದ ಮಹಿಳೆ.…

7 hours ago

ವಿ. ಶಾಂತಕುಮಾರ್ ಹುಟ್ಟುಹಬ್ಬ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…

11 hours ago

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ದರ್ಗಾಜೋಗಿಹಳ್ಳಿ ಸಮೀಪದ ಹೋಟೆಲ್ ನಲ್ಲಿ…

12 hours ago

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್: ಏ.1ರಿಂದ ನೋಂದಣಿ: ಮೇ.9, 10ಕ್ಕೆ ಕ್ರಿಕೆಟ್ ಟೂರ್ನಮೆಂಟ್

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್ ನ್ನು ಮೇ.9 ಮತ್ತು 10ರಂದು ಆಯೋಜನೆ ಮಾಡಲಾಗಿದೆ...…

13 hours ago