Categories: Crime

ಊರೂರು ಸುತ್ತಿ ಕನ್ನ ಹಾಕೋದು ಈತನ ‘ಹ್ಯಾಬಿಟ್’

ಯಲ್ಲಾಪುರ: ತಾಲೂಕಿನಲ್ಲಿ ನಡೆದಿದ್ದ ಮನೆ ಕಳ್ಳತನ ಹಾಗೂ ಮೆಡಿಕಲ್ ಶಾಪ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಯಲ್ಲಾಪುರ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿ, ಕುಖ್ಯಾತ ಅಂತರ್ ಜಿಲ್ಲಾ ಕಳ್ಳನೊಬ್ಬನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಜೋಯಿಡಾ ತಾಲೂಕಿನ ಅಣಶಿ ಗ್ರಾಮದ ನುಜ್ಜಿಯ ನಿವಾಸಿ ಸಮೀರ ಅಲಿಯಾಸ್ ಆರ್ಯ ತಂದೆ ಸೂರಜ ಪಾಟೀಲ (21) ಬಂಧಿತ ಆರೋಪಿ.

ದಿನಾಂಕ 01-11-2025 ರಂದು ಯಲ್ಲಾಪುರ ತಾಲೂಕಿನ ಸಾರಬೈಲ ಕಣ್ಣಿಗೇರಿ ಪಂಚಾಯತ ವ್ಯಾಪ್ತಿಯ ಮಿಲಾಗ್ರಿ ವಾಜ್ ಎಂಬುವವರ ಮನೆಯಲ್ಲಿ ಕಳ್ಳತನ ನಡೆದಿತ್ತು. ಮನೆಯಲ್ಲಿದ್ದ ಸುಮಾರು 1.13 ಲಕ್ಷ ರೂ. ಮೌಲ್ಯದ 17 ಗ್ರಾಂ ಬಂಗಾರ ಮತ್ತು 25 ಗ್ರಾಂ ತೂಕದ ಬೆಳ್ಳಿ ಕಳ್ಳತನವಾಗಿತ್ತು.

ಅಲ್ಲದೇ, ನವೆಂಬರ್ 21 ರಂದು ಪಟ್ಟಣದ ಮಲವಳ್ಳಿಯ ಸಂಕೇತ ಭಟ್ ಅವರ ಮಾಲೀಕತ್ವದ ‘ಸೀತಾಲಕ್ಷ್ಮಿ ಮೆಡಿಕಲ್’ ಶಾಪಿನಿಂದ 45,000 ರೂ. ಹಣವನ್ನು ಕಳ್ಳತನ ಮಾಡಲಾಗಿತ್ತು. ಈ ಎರಡೂ ಪ್ರಕರಣಗಳಿಗೆ ಸಂಬಂಧಿಸಿದಂತೆ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದವು.

ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಖಚಿತ ಮಾಹಿತಿಯ ಮೇರೆಗೆ ಡಿಸೆಂಬರ್ 7 ರಂದು ಆರೋಪಿಯನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ ಆರೋಪಿ ತಾನು ಸಾರೆಬೈಲ್‌ನಲ್ಲಿ ಮನೆ ಕಳ್ಳತನ ಮತ್ತು ಬೆಲ್ ರೋಡ್‌ನಲ್ಲಿ ಮೆಡಿಕಲ್ ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ.

ಬಂಧಿತ ಆರೋಪಿಯು ರೂಢಿಗತ ಕಳ್ಳನಾಗಿದ್ದು, ಈತನು ಉತ್ತರ ಕನ್ನಡ ಹಾಗೂ ಬೆಳಗಾವಿ ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸುಮಾರು 12 ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದನೆಂಬುದು ತನಿಖೆಯಿಂದ ತಿಳಿದುಬಂದಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಮ್, ಹೆಚ್ಚುವರಿ ಎಸ್ಪಿಗಳಾದ ಕೃಷ್ಣಮೂರ್ತಿ, ಜಗದೀಶ ಎಮ್.ಎನ್., ಹಾಗೂ ಶಿರಸಿ ಡಿವೈಎಸ್ಪಿ ಗೀತಾ ಪಾಟೀಲ್ ಅವರ ಮಾರ್ಗದರ್ಶನದಲ್ಲಿ, ಯಲ್ಲಾಪುರ ಸಿಪಿಐ ರಮೇಶ ಹನಾಪೂರ ನೇತೃತ್ವದ ತಂಡ ಈ ಕಾರ್ಯಾಚರಣೆ ನಡೆಸಿದೆ.
ತನಿಖಾ ತಂಡದಲ್ಲಿ ಪಿಎಸ್ಐಗಳಾದ ರಾಜಶೇಖರ ವಂದಲಿ, ಸಿದ್ದಪ್ಪ ಗುಡಿ, ಮಹಾವೀರ ಕಾಂಬಳೆ, ಶೇಡಜಿ ಚೌವ್ಹಾಣ ಹಾಗೂ ಸಿಬ್ಬಂದಿಗಳಾದ ಮಹಮ್ಮದ್ ಶಫೀ ಶೇಖ್, ಶೋಭಾ ನಾಯ್ಕ, ಗಿರೀಶ ಲಮಾಣಿ, ಪರಮೇಶ್ವರ ಕೆ., ನಾಗರಾಜ ನಾಯ್ಕ, ನೀಲಪ್ಪ ಸಿ.ಟಿ. ಮತ್ತು ಕಾರವಾರದ ಟೆಕ್ನಿಕಲ್ ಸೆಲ್‌ನ ಉದಯ ಗುನಗಾ ಅವರು ಆರೋಪಿಯನ್ನು ಸೆರೆಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

Ramesh Babu

Journalist

Recent Posts

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

3 hours ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

14 hours ago

ಬಾಶೆಟ್ಟಿಹಳ್ಳಿ ಪಪಂ ಚುನಾವಣೆ: ಶೇ.78ರಷ್ಟು ಮತದಾನ: ನಕಲಿ ಮತದಾನಕ್ಕೆ ಯತ್ನಿಸಿದ ವ್ಯಕ್ತಿಯನ್ನು ವಶಕ್ಕೆ ಪಡೆದ ಪೊಲೀಸರು: ಕುಡಿದು ಚುನಾವಣೆ ಕೆಲಸಕ್ಕೆ ಬಂದ ಶಿಕ್ಷಕ

ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…

15 hours ago

ಒಂಟಿ ಮನೆ ಸುತ್ತಾ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳು: ಗಾಬರಿಗೊಂಡ ಮಹಿಳೆ: ಗ್ರಾಮಸ್ಥರ ಕೈಗೆ ಸಿಕ್ಕ ಆಸಾಮಿಗಳು, ಸದ್ಯ ವಶಕ್ಕೆ ಪಡೆದ ಪೊಲೀಸರು

ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…

15 hours ago

ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಎಸಿ ಗೋವಿಂದಪ್ಪ ಅವಿರೋಧ ಆಯ್ಕೆ

ಯಲಹಂಕ ತಾಲೂಕಿನ ಜಾಲ ಹೋಬಳಿಯ ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಎ.ಸಿ. ಗೋವಿಂದಪ್ಪ ಅವಿರೋಧವಾಗಿ…

16 hours ago

ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ: ಜಿಲ್ಲೆಯ 99,828 ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ- ಸಚಿವ ಕೆ.ಎಚ್ ಮುನಿಯಪ್ಪ

ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸುವ ಮೂಲಕ ಪೋಲಿಯೋ ಮುಕ್ತ ರಾಷ್ಟ್ರ ಎಂದು ಮತ್ತೊಮ್ಮೆ ಸಾಬೀತು ಮಾಡೋಣ…

23 hours ago