Categories: Crime

ಊರೂರು ಸುತ್ತಿ ಕನ್ನ ಹಾಕೋದು ಈತನ ‘ಹ್ಯಾಬಿಟ್’

ಯಲ್ಲಾಪುರ: ತಾಲೂಕಿನಲ್ಲಿ ನಡೆದಿದ್ದ ಮನೆ ಕಳ್ಳತನ ಹಾಗೂ ಮೆಡಿಕಲ್ ಶಾಪ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಯಲ್ಲಾಪುರ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿ, ಕುಖ್ಯಾತ ಅಂತರ್ ಜಿಲ್ಲಾ ಕಳ್ಳನೊಬ್ಬನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಜೋಯಿಡಾ ತಾಲೂಕಿನ ಅಣಶಿ ಗ್ರಾಮದ ನುಜ್ಜಿಯ ನಿವಾಸಿ ಸಮೀರ ಅಲಿಯಾಸ್ ಆರ್ಯ ತಂದೆ ಸೂರಜ ಪಾಟೀಲ (21) ಬಂಧಿತ ಆರೋಪಿ.

ದಿನಾಂಕ 01-11-2025 ರಂದು ಯಲ್ಲಾಪುರ ತಾಲೂಕಿನ ಸಾರಬೈಲ ಕಣ್ಣಿಗೇರಿ ಪಂಚಾಯತ ವ್ಯಾಪ್ತಿಯ ಮಿಲಾಗ್ರಿ ವಾಜ್ ಎಂಬುವವರ ಮನೆಯಲ್ಲಿ ಕಳ್ಳತನ ನಡೆದಿತ್ತು. ಮನೆಯಲ್ಲಿದ್ದ ಸುಮಾರು 1.13 ಲಕ್ಷ ರೂ. ಮೌಲ್ಯದ 17 ಗ್ರಾಂ ಬಂಗಾರ ಮತ್ತು 25 ಗ್ರಾಂ ತೂಕದ ಬೆಳ್ಳಿ ಕಳ್ಳತನವಾಗಿತ್ತು.

ಅಲ್ಲದೇ, ನವೆಂಬರ್ 21 ರಂದು ಪಟ್ಟಣದ ಮಲವಳ್ಳಿಯ ಸಂಕೇತ ಭಟ್ ಅವರ ಮಾಲೀಕತ್ವದ ‘ಸೀತಾಲಕ್ಷ್ಮಿ ಮೆಡಿಕಲ್’ ಶಾಪಿನಿಂದ 45,000 ರೂ. ಹಣವನ್ನು ಕಳ್ಳತನ ಮಾಡಲಾಗಿತ್ತು. ಈ ಎರಡೂ ಪ್ರಕರಣಗಳಿಗೆ ಸಂಬಂಧಿಸಿದಂತೆ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದವು.

ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಖಚಿತ ಮಾಹಿತಿಯ ಮೇರೆಗೆ ಡಿಸೆಂಬರ್ 7 ರಂದು ಆರೋಪಿಯನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ ಆರೋಪಿ ತಾನು ಸಾರೆಬೈಲ್‌ನಲ್ಲಿ ಮನೆ ಕಳ್ಳತನ ಮತ್ತು ಬೆಲ್ ರೋಡ್‌ನಲ್ಲಿ ಮೆಡಿಕಲ್ ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ.

ಬಂಧಿತ ಆರೋಪಿಯು ರೂಢಿಗತ ಕಳ್ಳನಾಗಿದ್ದು, ಈತನು ಉತ್ತರ ಕನ್ನಡ ಹಾಗೂ ಬೆಳಗಾವಿ ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸುಮಾರು 12 ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದನೆಂಬುದು ತನಿಖೆಯಿಂದ ತಿಳಿದುಬಂದಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಮ್, ಹೆಚ್ಚುವರಿ ಎಸ್ಪಿಗಳಾದ ಕೃಷ್ಣಮೂರ್ತಿ, ಜಗದೀಶ ಎಮ್.ಎನ್., ಹಾಗೂ ಶಿರಸಿ ಡಿವೈಎಸ್ಪಿ ಗೀತಾ ಪಾಟೀಲ್ ಅವರ ಮಾರ್ಗದರ್ಶನದಲ್ಲಿ, ಯಲ್ಲಾಪುರ ಸಿಪಿಐ ರಮೇಶ ಹನಾಪೂರ ನೇತೃತ್ವದ ತಂಡ ಈ ಕಾರ್ಯಾಚರಣೆ ನಡೆಸಿದೆ.
ತನಿಖಾ ತಂಡದಲ್ಲಿ ಪಿಎಸ್ಐಗಳಾದ ರಾಜಶೇಖರ ವಂದಲಿ, ಸಿದ್ದಪ್ಪ ಗುಡಿ, ಮಹಾವೀರ ಕಾಂಬಳೆ, ಶೇಡಜಿ ಚೌವ್ಹಾಣ ಹಾಗೂ ಸಿಬ್ಬಂದಿಗಳಾದ ಮಹಮ್ಮದ್ ಶಫೀ ಶೇಖ್, ಶೋಭಾ ನಾಯ್ಕ, ಗಿರೀಶ ಲಮಾಣಿ, ಪರಮೇಶ್ವರ ಕೆ., ನಾಗರಾಜ ನಾಯ್ಕ, ನೀಲಪ್ಪ ಸಿ.ಟಿ. ಮತ್ತು ಕಾರವಾರದ ಟೆಕ್ನಿಕಲ್ ಸೆಲ್‌ನ ಉದಯ ಗುನಗಾ ಅವರು ಆರೋಪಿಯನ್ನು ಸೆರೆಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

Ramesh Babu

Journalist

Recent Posts

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

8 hours ago

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

23 hours ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

2 days ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

3 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

3 days ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

4 days ago