Categories: ಬೀದರ್

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು- ಸಿಎಂ ಸಿದ್ದರಾಮಯ್ಯ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ..

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಬೀದರ್ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಅವರು ಮಾತನಾಡಿದರು.

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು. ಕ್ಷುಲ್ಲಕ ವಿಚಾರವನ್ನು ದಿನವಿಡೀ ತೋರಿಸುವವರು ಅದರ ಪರಿಣಾಮದ ಬಗ್ಗೆಯೂ ಯೋಚಿಸಬೇಕು. ಗಂಡ ಹೆಂಡತಿ ಜಗಳವನ್ನು ಇಡೀ ದಿನ‌ ತೋರಿಸಿದರೆ ಅದರಿಂದ ಸಮಾಜಕ್ಕೆ ಏನು ಪ್ರಯೋಜನ? ಎಂದು ಪ್ರಶ್ನೆ ಮಾಡಿದರು.

ಅಂಬೇಡ್ಕರ್ ಮತ್ತು ಮಹಾತ್ಮ ಗಾಂಧಿ ಇಬ್ಬರೂ ಪತ್ರಕರ್ತರಾಗಿ ಧ್ವನಿ ಇಲ್ಲದವರ ಧ್ವನಿಯಾಗಿದ್ದರು. ಸಮಾಜದಲ್ಲಿರುವ ನ್ಯೂನ್ಯತೆಗಳನ್ನು ಹೋಗಲಾಡಿಸಿ ಸಮಾಜವನ್ನು ಕಟ್ಟುವ ಕಾಯಕವನ್ನು ಬಸವಾದಿ ಶರಣರು ಮಾಡಿದ್ದರು. ಶರಣರ ಆಶಯದ ಸಮಸಮಾಜ ಆಗದಿದ್ದರೆ ಅಸಮಾನತೆ ಮುಂದುವರೆಯುತ್ತದೆ.‌ ಅದು ಮುಂದುವರೆಯಲಿ ಎನ್ನುವುದು ಪಟ್ಟಭದ್ರರ ಹಿತಾಸಕ್ತಿಯಾಗಿದೆ ಎಂದರು.

ಯಾವ ದೇವರೂ ಯಾರನ್ನೂ ಕೂಡ ಅವಿದ್ಯಾವಂತನಾಗು ಅಂತಾಗಲೀ, ಕೆಳ ಜಾತಿಯಲ್ಲೇ ಹುಟ್ಟು ಎಂದು ಬಯಸುವುದಿಲ್ಲ. ಈ ಅರಿವನ್ನು ಜನರಲ್ಲಿ ಹೆಚ್ಚಿಸುವ ಕೆಲಸ ಪತ್ರಕರ್ತರಿಂದ ಆಗಬೇಕು. ಪತ್ರಕರ್ತರು ಕೇವಲ ಮಾಹಿತಿ ಕೊಡುವವರಾಗದೆ, ಸಮಾಜ ಸುಧಾರಣೆಗೂ ಒತ್ತು ನೀಡಬೇಕು ಎಂದು ಹೇಳಿದರು.

ಅಂಬೇಡ್ಕರ್ ಅವರ ಆಶಯದಂತೆ ಎಲ್ಲರಿಗೂ ಆರ್ಥಿಕ, ಸಾಮಾಜಿಕ‌ ಶಕ್ತಿ ಕೊಡುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ 2013 ರಲ್ಲೂ ಮಾಡಿತ್ತು. ಈಗಲೂ ಮುಂದುವರೆಸಿದೆ. ನಾವು ಬಡವರ ಪರವಾದ ಯೂನಿವರ್ಸಲ್ ಬೇಸಿಕ್ ಇನ್ ಕಂ ಆರ್ಥಿಕತೆಯನ್ನು ಪಾಲುಸುತ್ತಿದ್ದೇವೆ. ಇದನ್ನು ಪತ್ರಕರ್ತರು ಅರ್ಥ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಕೆಲವು ಒಳ್ಳೆ ಪತ್ರಕರ್ತರೂ ಇದ್ದಾರೆ. ಆದರೆ ಬಹಳಷ್ಟು ಮಾಧ್ಯಮ‌ ಸಂಸ್ಥೆಗಳು ಕಾರ್ಪೋರೇಟ್ ಹಿಡಿತಕ್ಕೆ ಒಳಪಟ್ಟಿವೆ. ಪತ್ರಕರ್ತರು ಸತ್ಯ ಬರೆದರೂ ಕೆಲವೊಮ್ಮೆ ಸಂಪಾದಕರುಗಳು ಮಾಲೀಕರ ಒತ್ತಡಕ್ಕೆ ಮಣಿದು ಬದಲಾಯಿಸಿ ಬಿಡುತ್ತಾರೆ. ನಾನು ಮಂತ್ರಿಯಾಗಿ 40 ವರ್ಷ ಆಯ್ತು. ನಮ್ಮ ಸರ್ಕಾರದ ಪರವಾಗಿ ಬರೆಯಿರಿ ಎಂದು ಇವತ್ತಿನವರೆಗೂ ನಾನು ಯಾರನ್ನೂ ಕೇಳಿಲ್ಲ‌ ಎಂದರು.

ಜನಸಾಮಾನ್ಯರು ಇನ್ನೂ ಪತ್ರಿಕೆಗಳ ಮೇಲೆ ನಂಬಿಕೆ ಇಟ್ಟಿದ್ದಾರೆ. ನಾನೂ ನಂಬಿಕೆ ಇಟ್ಟಿದ್ದೇನೆ. ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡುವ ಸವಲತ್ತನ್ನು ಜಾರಿ ಮಾಡಿದ್ದೇ ನಾನು. ಇದರಲ್ಲಿನ ನಿಯಮಗಳಲ್ಲಿ ತೊಂದರೆ ಇದ್ದರೆ, ಆ ಬಗ್ಗೆ ಚರ್ಚಿಸಿ ನಿವಾರಣೆಗೊಳಿಸಲಾಗುವುದು ಎಂದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

8 hours ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

13 hours ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

1 day ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

1 day ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

1 day ago