ಎಂಇಎಸ್ ಹಾಗೂ ಶಿವಸೇನೆ ಪುಂಡಾಟಿಕೆ ಖಂಡಿಸಿ ಪ್ರತಿಭಟನೆ

ದೊಡ್ಡಬಳ್ಳಾಪುರ:ಭಾಷಾವಾರು ಪ್ರಾಂತಗಳು ರಚನೆಯಾಗಿ 50 ವರ್ಷಗಳು ಕಳೆದರೂ ಶಿವಸೇನೆ ಮತ್ತು ಎಂಇಎಸ್ ನ ಪುಂಡಾಟಿಕೆ ನಿಂತಿಲ್ಲ ಎಂದು ಕನ್ನಡ ಪಕ್ಷದ ರಾಜ್ಯ ಸಮಿತಿ ಸದಸ್ಯ ಸಂಜೀವ್ ನಾಯಕ ಅವರು ಆರೋಪಿಸಿದರು.ಮ

ಹಾರಾಷ್ಟ್ರದಲ್ಲಿ ಕರ್ನಾಟಕದ ಬಸ್ಸುಗಳಿಗೆ ಮಸಿ ಬಳಿದ ಎಂಇಎಸ್ ಮತ್ತು ಶಿವಸೇನೆಯ ಕಾರ್ಯಕರ್ತರ ನಡೆ ಖಂಡಿಸಿ ನಗರದ ಸಿದ್ದಲಿಂಗಯ್ಯ ವೃತ್ತದಲ್ಲಿ ಪ್ರತಿಕೃತಿ ದಹಿಸಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಕಳೆದ 50 ವರ್ಷಗಳ ಹಿಂದೆ ಬೆಳಗಾವಿ ಸುತ್ತಲಿನ 856 ಹಳ್ಳಿಗಳು ಕರ್ನಾಟಕಕ್ಕೆ ಸೇರಬೇಕು ಎಂದು ನ್ಯಾಯಮೂರ್ತಿ ಮಹಾಜನ್ ಅವರು ಕೇಂದ್ರ ಸರ್ಕಾರಕ್ಕೆ ವರದಿ ನೀಡಿದ್ದಾರೆ, ಅದನ್ನು ಒಪ್ಪಿಕೊಳ್ಳಲು ತಯಾರಿಲ್ಲದ ಮಹಾರಾಷ್ಟ್ರ ಸರ್ಕಾರ ಮತ್ತು ಕೆಲವು ಸಂಘಟನೆಗಳು ಪದೇ ಪದೇ ಖ್ಯಾತೆ ತೆಗೆಯುತ್ತಿವೆ.

ಈ ವಿಚಾರಕ್ಕೆ ಸಂಬಂದಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ಇರುವುದರಿಂದ ಶಿವಸೇನೆ ಮತ್ತು ಎಂಇಎಸ್ ಪುಂಡರು ಕರ್ನಾಟಕದ ಬಸ್ಸುಗಳಿಗೆ ಮಸಿ ಬಳಿಯುವ ಮಟ್ಟಕ್ಕೆ ಇಳಿಯುವುದು ಸಂವಿಧಾನ ಬಾಹಿರ ಎಂದ ಅವರು, ಕೇಂದ್ರದಲ್ಲಿ ರಾಜ್ಯದಿಂದ 28 ಜನ ಬಿಜೆಪಿಯಿಂದ ಆಯ್ಕೆಯಾದ ಸಂಸದರು, ನಾಲ್ಕು ಜನ ಕೇಂದ್ರದ ಮಂತ್ರಿಗಳು, ಜೊತೆಗೆ ರಾಜ್ಯದ ಮುಖ್ಯಮಂತ್ರಿ ಎಲ್ಲಾರೂ ಬಿಜೆಪಿಗರಿದ್ದು ಕನ್ನಡ ನಾಡಿಗೆ ಆಗುತ್ತಿರುವ ಅನ್ಯಾಯವನ್ನ ಪ್ರಶ್ನೆ ಮಾಡದ ಸ್ಥಿತಿಯಲ್ಲಿ ಇದಾರೆ, ಇದು ಬಿಜೆಪಿಗರು ನಾಡಿಗೆ ಮಾಡಿದ ದ್ರೋಹವಾಗಿದೆ ಎಂದರು.

ಎಂಇಎಸ್ ಮತ್ತು ಶಿವಸೇನೆಯ ಪ್ರತಿಕೃತಿ ದಹನ ಮಾಡಿದ ಕಾರ್ಯಕರ್ತರು ಕೇಂದ್ರ, ರಾಜ್ಯ ಹಾಗೂ ಮಹಾರಾಷ್ಟ್ರ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿದರು.
ಪ್ರತಿಭಟನೆಯಲ್ಲಿ ಕನ್ನಡ ಪಕ್ಷದ ರಾಜ್ಯ ಮುಖಂಡ ಡಿ.ಪಿ.ಆಂಜನೇಯ, ಜಿಲ್ಲಾಧ್ಯಕ್ಷ ಮಂಜುನಾಥ್ ಜಿಲ್ಲಾ ಕಾರ್ಯದರ್ಶಿ ಹೆಚ್ ಮುನಿಪಾಪಯ್ಯ ಕಾರ್ಯಕಾರಿ ಸಮಿತಿಯ ಕೃಷ್ಣಪ್ಪ, ಎ.ಪೃಥ್ವಿರಾಜ್ ಗೌಡ ಮೆಹಬೂಬ್, ಜಿ .ಗಂಗಾಧರ್ ಬಾಲು, ಕುಮಾರ, ಕೇಶವ ಉಮೇಶ್ ತಾಲೂಕ ಅಧ್ಯಕ್ಷರಾದ ಡಿ .ವೆಂಕಟೇಶ್, ಪ್ರಧಾನ ಕಾರ್ಯದರ್ಶಿ ಬೋರೇಗೌಡ, ಉಪಾಧ್ಯಕ್ಷರಾದ ಮಂಜುನಾಥ ರಾಮಚಂದ್ರು, ಮಾಳವ ನಾರಾಯಣ, ಚಿದಾನಂದ, ಮನು, ಡಿಕೆ ಬಾಬಾ, ಸಿ.ಗಂಗಾಧರ್, ದಿವಾಕರ್, ವೆಂಕಟೇಶ್, ಮಾದೇವ ಮುಂತಾದವರು ಭಾಗವಹಿಸಿದ್ದರು

Ramesh Babu

Journalist

Recent Posts

ಜೂ. 28 ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…

1 hour ago

24 ಗಂಟೆಯೊಳಗೆ ಸರಗಳ್ಳರ ಬಂಧನ: ₹2.96 ಲಕ್ಷ ಮೌಲ್ಯದ ಮಾಲು ವಶ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…

2 hours ago

ದೊಡ್ಡಬೆಲವಂಗಲ ಠಾಣೆ ಇನ್ಸ್‌ಪೆಕ್ಟರ್ ಕಲ್ಲಪ್ಪ ಎಸ್. ಖರತ್‌ಗೆ ಡಿಜಿ-ಐಜಿಪಿ ಪ್ರಶಂಸನಾ ಪದಕ

ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…

4 hours ago

ಕೆಐಎಎಲ್ ನಲ್ಲಿ ಸರಣಿ ಕಳ್ಳಸಾಗಣೆ ಪ್ರಕರಣಗಳು ಪತ್ತೆ: ₹4.33 ಕೋಟಿಗೂ ಅಧಿಕ ಮೌಲ್ಯದ ಮಾದಕ ವಸ್ತು, ಚಿನ್ನ ವಶ

ದೇವನಹಳ್ಳಿ: ಕೆಂಪೇಗೌಡರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಕೆಲ ದಿನಗಳಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಗಳಲ್ಲಿ ಮಾದಕ ವಸ್ತುಗಳು…

4 hours ago

ಯುವತಿಯ ಕುರಿತು ಅಪಪ್ರಚಾರದ ದ್ವೇಷ: ರೌಡಿ ಶೀಟರ್ ಖಲೀಮ್‌ನ ಬರ್ಬರ ಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಕುಟುಂಬದ ಬಗ್ಗೆ ಅವಹೇಳನ ಆರೋಪ: 7 ಮಂದಿಯ ತಂಡದ ಸಂಚು, 5 ಆರೋಪಿಗಳ ಬಂಧನ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ಖಲೀಮ್ (35)…

8 hours ago

ನಗರಸಭೆ ವ್ಯಾಪ್ತಿಯ ವಾರ್ಡ್‌ಗಳಲ್ಲಿ ಸೌಕರ್ಯ ಕೊರತೆ: ಜನ ಹೈರಾಣ

ರೇಷ್ಮೆ ನಗರಿ, ಕೈಗಾರಿಕಾ ನಗರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ದೊಡ್ಡಬಳ್ಳಾಪುರ ನಗರ ಇಂದು ಅಭಿವೃದ್ಧಿಯ ಅವಕಾಶಗಳ ಜೊತೆಗೆ ಮೂಲ ಸಮಸ್ಯೆಗಳ…

10 hours ago