ಎಂಇಎಸ್ ಹಾಗೂ ಶಿವಸೇನೆ ಪುಂಡಾಟಿಕೆ ಖಂಡಿಸಿ ಪ್ರತಿಭಟನೆ

ದೊಡ್ಡಬಳ್ಳಾಪುರ:ಭಾಷಾವಾರು ಪ್ರಾಂತಗಳು ರಚನೆಯಾಗಿ 50 ವರ್ಷಗಳು ಕಳೆದರೂ ಶಿವಸೇನೆ ಮತ್ತು ಎಂಇಎಸ್ ನ ಪುಂಡಾಟಿಕೆ ನಿಂತಿಲ್ಲ ಎಂದು ಕನ್ನಡ ಪಕ್ಷದ ರಾಜ್ಯ ಸಮಿತಿ ಸದಸ್ಯ ಸಂಜೀವ್ ನಾಯಕ ಅವರು ಆರೋಪಿಸಿದರು.ಮ

ಹಾರಾಷ್ಟ್ರದಲ್ಲಿ ಕರ್ನಾಟಕದ ಬಸ್ಸುಗಳಿಗೆ ಮಸಿ ಬಳಿದ ಎಂಇಎಸ್ ಮತ್ತು ಶಿವಸೇನೆಯ ಕಾರ್ಯಕರ್ತರ ನಡೆ ಖಂಡಿಸಿ ನಗರದ ಸಿದ್ದಲಿಂಗಯ್ಯ ವೃತ್ತದಲ್ಲಿ ಪ್ರತಿಕೃತಿ ದಹಿಸಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಕಳೆದ 50 ವರ್ಷಗಳ ಹಿಂದೆ ಬೆಳಗಾವಿ ಸುತ್ತಲಿನ 856 ಹಳ್ಳಿಗಳು ಕರ್ನಾಟಕಕ್ಕೆ ಸೇರಬೇಕು ಎಂದು ನ್ಯಾಯಮೂರ್ತಿ ಮಹಾಜನ್ ಅವರು ಕೇಂದ್ರ ಸರ್ಕಾರಕ್ಕೆ ವರದಿ ನೀಡಿದ್ದಾರೆ, ಅದನ್ನು ಒಪ್ಪಿಕೊಳ್ಳಲು ತಯಾರಿಲ್ಲದ ಮಹಾರಾಷ್ಟ್ರ ಸರ್ಕಾರ ಮತ್ತು ಕೆಲವು ಸಂಘಟನೆಗಳು ಪದೇ ಪದೇ ಖ್ಯಾತೆ ತೆಗೆಯುತ್ತಿವೆ.

ಈ ವಿಚಾರಕ್ಕೆ ಸಂಬಂದಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ಇರುವುದರಿಂದ ಶಿವಸೇನೆ ಮತ್ತು ಎಂಇಎಸ್ ಪುಂಡರು ಕರ್ನಾಟಕದ ಬಸ್ಸುಗಳಿಗೆ ಮಸಿ ಬಳಿಯುವ ಮಟ್ಟಕ್ಕೆ ಇಳಿಯುವುದು ಸಂವಿಧಾನ ಬಾಹಿರ ಎಂದ ಅವರು, ಕೇಂದ್ರದಲ್ಲಿ ರಾಜ್ಯದಿಂದ 28 ಜನ ಬಿಜೆಪಿಯಿಂದ ಆಯ್ಕೆಯಾದ ಸಂಸದರು, ನಾಲ್ಕು ಜನ ಕೇಂದ್ರದ ಮಂತ್ರಿಗಳು, ಜೊತೆಗೆ ರಾಜ್ಯದ ಮುಖ್ಯಮಂತ್ರಿ ಎಲ್ಲಾರೂ ಬಿಜೆಪಿಗರಿದ್ದು ಕನ್ನಡ ನಾಡಿಗೆ ಆಗುತ್ತಿರುವ ಅನ್ಯಾಯವನ್ನ ಪ್ರಶ್ನೆ ಮಾಡದ ಸ್ಥಿತಿಯಲ್ಲಿ ಇದಾರೆ, ಇದು ಬಿಜೆಪಿಗರು ನಾಡಿಗೆ ಮಾಡಿದ ದ್ರೋಹವಾಗಿದೆ ಎಂದರು.

ಎಂಇಎಸ್ ಮತ್ತು ಶಿವಸೇನೆಯ ಪ್ರತಿಕೃತಿ ದಹನ ಮಾಡಿದ ಕಾರ್ಯಕರ್ತರು ಕೇಂದ್ರ, ರಾಜ್ಯ ಹಾಗೂ ಮಹಾರಾಷ್ಟ್ರ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿದರು.
ಪ್ರತಿಭಟನೆಯಲ್ಲಿ ಕನ್ನಡ ಪಕ್ಷದ ರಾಜ್ಯ ಮುಖಂಡ ಡಿ.ಪಿ.ಆಂಜನೇಯ, ಜಿಲ್ಲಾಧ್ಯಕ್ಷ ಮಂಜುನಾಥ್ ಜಿಲ್ಲಾ ಕಾರ್ಯದರ್ಶಿ ಹೆಚ್ ಮುನಿಪಾಪಯ್ಯ ಕಾರ್ಯಕಾರಿ ಸಮಿತಿಯ ಕೃಷ್ಣಪ್ಪ, ಎ.ಪೃಥ್ವಿರಾಜ್ ಗೌಡ ಮೆಹಬೂಬ್, ಜಿ .ಗಂಗಾಧರ್ ಬಾಲು, ಕುಮಾರ, ಕೇಶವ ಉಮೇಶ್ ತಾಲೂಕ ಅಧ್ಯಕ್ಷರಾದ ಡಿ .ವೆಂಕಟೇಶ್, ಪ್ರಧಾನ ಕಾರ್ಯದರ್ಶಿ ಬೋರೇಗೌಡ, ಉಪಾಧ್ಯಕ್ಷರಾದ ಮಂಜುನಾಥ ರಾಮಚಂದ್ರು, ಮಾಳವ ನಾರಾಯಣ, ಚಿದಾನಂದ, ಮನು, ಡಿಕೆ ಬಾಬಾ, ಸಿ.ಗಂಗಾಧರ್, ದಿವಾಕರ್, ವೆಂಕಟೇಶ್, ಮಾದೇವ ಮುಂತಾದವರು ಭಾಗವಹಿಸಿದ್ದರು

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

55 minutes ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

5 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

12 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

13 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

1 day ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

1 day ago