ಎಂಇಎಸ್ ಹಾಗೂ ಶಿವಸೇನೆ ಪುಂಡಾಟಿಕೆ ಖಂಡಿಸಿ ಪ್ರತಿಭಟನೆ

ದೊಡ್ಡಬಳ್ಳಾಪುರ:ಭಾಷಾವಾರು ಪ್ರಾಂತಗಳು ರಚನೆಯಾಗಿ 50 ವರ್ಷಗಳು ಕಳೆದರೂ ಶಿವಸೇನೆ ಮತ್ತು ಎಂಇಎಸ್ ನ ಪುಂಡಾಟಿಕೆ ನಿಂತಿಲ್ಲ ಎಂದು ಕನ್ನಡ ಪಕ್ಷದ ರಾಜ್ಯ ಸಮಿತಿ ಸದಸ್ಯ ಸಂಜೀವ್ ನಾಯಕ ಅವರು ಆರೋಪಿಸಿದರು.ಮ

ಹಾರಾಷ್ಟ್ರದಲ್ಲಿ ಕರ್ನಾಟಕದ ಬಸ್ಸುಗಳಿಗೆ ಮಸಿ ಬಳಿದ ಎಂಇಎಸ್ ಮತ್ತು ಶಿವಸೇನೆಯ ಕಾರ್ಯಕರ್ತರ ನಡೆ ಖಂಡಿಸಿ ನಗರದ ಸಿದ್ದಲಿಂಗಯ್ಯ ವೃತ್ತದಲ್ಲಿ ಪ್ರತಿಕೃತಿ ದಹಿಸಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಕಳೆದ 50 ವರ್ಷಗಳ ಹಿಂದೆ ಬೆಳಗಾವಿ ಸುತ್ತಲಿನ 856 ಹಳ್ಳಿಗಳು ಕರ್ನಾಟಕಕ್ಕೆ ಸೇರಬೇಕು ಎಂದು ನ್ಯಾಯಮೂರ್ತಿ ಮಹಾಜನ್ ಅವರು ಕೇಂದ್ರ ಸರ್ಕಾರಕ್ಕೆ ವರದಿ ನೀಡಿದ್ದಾರೆ, ಅದನ್ನು ಒಪ್ಪಿಕೊಳ್ಳಲು ತಯಾರಿಲ್ಲದ ಮಹಾರಾಷ್ಟ್ರ ಸರ್ಕಾರ ಮತ್ತು ಕೆಲವು ಸಂಘಟನೆಗಳು ಪದೇ ಪದೇ ಖ್ಯಾತೆ ತೆಗೆಯುತ್ತಿವೆ.

ಈ ವಿಚಾರಕ್ಕೆ ಸಂಬಂದಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ಇರುವುದರಿಂದ ಶಿವಸೇನೆ ಮತ್ತು ಎಂಇಎಸ್ ಪುಂಡರು ಕರ್ನಾಟಕದ ಬಸ್ಸುಗಳಿಗೆ ಮಸಿ ಬಳಿಯುವ ಮಟ್ಟಕ್ಕೆ ಇಳಿಯುವುದು ಸಂವಿಧಾನ ಬಾಹಿರ ಎಂದ ಅವರು, ಕೇಂದ್ರದಲ್ಲಿ ರಾಜ್ಯದಿಂದ 28 ಜನ ಬಿಜೆಪಿಯಿಂದ ಆಯ್ಕೆಯಾದ ಸಂಸದರು, ನಾಲ್ಕು ಜನ ಕೇಂದ್ರದ ಮಂತ್ರಿಗಳು, ಜೊತೆಗೆ ರಾಜ್ಯದ ಮುಖ್ಯಮಂತ್ರಿ ಎಲ್ಲಾರೂ ಬಿಜೆಪಿಗರಿದ್ದು ಕನ್ನಡ ನಾಡಿಗೆ ಆಗುತ್ತಿರುವ ಅನ್ಯಾಯವನ್ನ ಪ್ರಶ್ನೆ ಮಾಡದ ಸ್ಥಿತಿಯಲ್ಲಿ ಇದಾರೆ, ಇದು ಬಿಜೆಪಿಗರು ನಾಡಿಗೆ ಮಾಡಿದ ದ್ರೋಹವಾಗಿದೆ ಎಂದರು.

ಎಂಇಎಸ್ ಮತ್ತು ಶಿವಸೇನೆಯ ಪ್ರತಿಕೃತಿ ದಹನ ಮಾಡಿದ ಕಾರ್ಯಕರ್ತರು ಕೇಂದ್ರ, ರಾಜ್ಯ ಹಾಗೂ ಮಹಾರಾಷ್ಟ್ರ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿದರು.
ಪ್ರತಿಭಟನೆಯಲ್ಲಿ ಕನ್ನಡ ಪಕ್ಷದ ರಾಜ್ಯ ಮುಖಂಡ ಡಿ.ಪಿ.ಆಂಜನೇಯ, ಜಿಲ್ಲಾಧ್ಯಕ್ಷ ಮಂಜುನಾಥ್ ಜಿಲ್ಲಾ ಕಾರ್ಯದರ್ಶಿ ಹೆಚ್ ಮುನಿಪಾಪಯ್ಯ ಕಾರ್ಯಕಾರಿ ಸಮಿತಿಯ ಕೃಷ್ಣಪ್ಪ, ಎ.ಪೃಥ್ವಿರಾಜ್ ಗೌಡ ಮೆಹಬೂಬ್, ಜಿ .ಗಂಗಾಧರ್ ಬಾಲು, ಕುಮಾರ, ಕೇಶವ ಉಮೇಶ್ ತಾಲೂಕ ಅಧ್ಯಕ್ಷರಾದ ಡಿ .ವೆಂಕಟೇಶ್, ಪ್ರಧಾನ ಕಾರ್ಯದರ್ಶಿ ಬೋರೇಗೌಡ, ಉಪಾಧ್ಯಕ್ಷರಾದ ಮಂಜುನಾಥ ರಾಮಚಂದ್ರು, ಮಾಳವ ನಾರಾಯಣ, ಚಿದಾನಂದ, ಮನು, ಡಿಕೆ ಬಾಬಾ, ಸಿ.ಗಂಗಾಧರ್, ದಿವಾಕರ್, ವೆಂಕಟೇಶ್, ಮಾದೇವ ಮುಂತಾದವರು ಭಾಗವಹಿಸಿದ್ದರು

Ramesh Babu

Journalist

Recent Posts

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

3 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

9 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

11 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

2 days ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

2 days ago