Categories: ಕೋಲಾರ

ಎಂಎಲ್ಸಿ ಸಿ.ಟಿ ರವಿ ಮೇಲೆ ಹಲ್ಲೆ ಆರೋಪ: ಬಿಜೆಪಿ ರೈತ ಮೋರ್ಚಾ ಖಂಡನೆ

ಕೋಲಾರ: ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ ಸಚಿವ ಸಿ.ಟಿ ರವಿ ಅವರ ಮೇಲೆ ಬೆಳಗಾವಿಯ ಸುವರ್ಣಸೌಧ ಅಧಿವೇಶನದ ಸಂದರ್ಭದಲ್ಲಿ ನಡೆದಿರುವ ಹಲ್ಲೆಯು ಖಂಡನೀಯವಾಗಿದ್ದು ಕೂಡಲೇ ತಪ್ಪಿತಸ್ಥರ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ರೈತ ಮೋರ್ಚಾ ಜಿಲ್ಲಾ ಅಧ್ಯಕ್ಷ ಕೊಮ್ಮನಹಳ್ಳಿ ಆನಂದ್ ಒತ್ತಾಯಿಸಿದರು

ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಒತ್ತಾಯಿಸಿದ ಅವರು ಎಂಎಲ್ಸಿ ಸಿ.ಟಿ.ರವಿ ಅವರು ಅಶ್ಲೀಲ ಪದ ಬಳಸಿದ್ದರೆ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಬೇಕಾಗಿತ್ತು ಅದು ಬಿಟ್ಟು ಏಕಾಏಕಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಗೂಂಡಾಗಳ ರೀತಿಯಲ್ಲಿ ಹಲ್ಲೆಗೆ ಮುಂದಾಗಿದ್ದಾರೆ ಬೆಳಗಾವಿಯ ಸುವರ್ಣಸೌಧದ ಒಳಗೆ ಈ ರೀತಿಯಲ್ಲಿ ಒಬ್ಬ ಜನಪ್ರತಿನಿಧಿಯ ಮೇಲೆ ಹಲ್ಲೆ ನಡೆಯುತ್ತದೆ ಎಂದರೆ ಸಾಮಾನ್ಯ ಜನರು ನಿರೀಕ್ಷಿಸುವಂತಿಲ್ಲ ಪ್ರತಿ ಹಂತದಲ್ಲೂ ಭಯದ ವಾತಾವರಣವನ್ನು ರಾಜ್ಯದ ಕಾಂಗ್ರೆಸ್ ಸರ್ಕಾರವು ಸೃಷ್ಟಿಸಿದೆ ಎಂದು ಆರೋಪಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಬಂದ ನಂತರದಲ್ಲಿ ಪೊಲೀಸ್ ವ್ಯವಸ್ಥೆಯು ಹದಗೆಟ್ಟಿದೆ ಹಿಂದೆ ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಅಂದವರಿಗೆ ಈ ಕಾಂಗ್ರೆಸ್ ಸರ್ಕಾರವು ಯಾವುದೇ ಶಿಕ್ಷೆ ವಿಧಿಸಲಿಲ್ಲ ರಾಜ್ಯದಲ್ಲಿ ಕಾಂಗ್ರೆಸ್ ಬೆಂಬಲಿತ ಅಪರಾಧಿಗಳನ್ನು ಯಾವುದೇ ಷರತ್ತು ಇಲ್ಲದೆ ಬಿಡುಗಡೆ ಮಾಡಿದೆ ಆದರೆ ಸಿ.ಟಿ.ರವಿ ಅವರು ಆ ರೀತಿ ಹೇಳಿಕೆ ನೀಡಲಿಲ್ಲ ಎಂದು ಬಹಳ ಸ್ಪಷ್ಟವಾಗಿ ಹೇಳಿದ್ದರೂ ಯಾವುದೇ ತನಿಖೆ ಮಾಡದೇ ಕಾಂಗ್ರೆಸ್ ಗೂಂಡಾಗಳೊಂದಿಗೆ ಸರಕಾರವು ಕೂ ಶಾಮೀಲು ಆಗಿದೆ ಇಂತಹ ಘಟನೆಗಳು ನಡೆದಿವೆ ಎಂದು ಕೊಮ್ಮನಹಳ್ಳಿ ಆನಂದ್ ಖಂಡನೀಯ ವ್ಯಕ್ತಪಡಿಸಿದರು.

Ramesh Babu

Journalist

Recent Posts

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

14 hours ago

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

1 day ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

2 days ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

3 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

3 days ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

4 days ago