Categories: ಕೋಲಾರ

ಎಂಎಲ್ಸಿ ಸಿ.ಟಿ ರವಿ ಮೇಲೆ ಹಲ್ಲೆ ಆರೋಪ: ಬಿಜೆಪಿ ರೈತ ಮೋರ್ಚಾ ಖಂಡನೆ

ಕೋಲಾರ: ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ ಸಚಿವ ಸಿ.ಟಿ ರವಿ ಅವರ ಮೇಲೆ ಬೆಳಗಾವಿಯ ಸುವರ್ಣಸೌಧ ಅಧಿವೇಶನದ ಸಂದರ್ಭದಲ್ಲಿ ನಡೆದಿರುವ ಹಲ್ಲೆಯು ಖಂಡನೀಯವಾಗಿದ್ದು ಕೂಡಲೇ ತಪ್ಪಿತಸ್ಥರ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ರೈತ ಮೋರ್ಚಾ ಜಿಲ್ಲಾ ಅಧ್ಯಕ್ಷ ಕೊಮ್ಮನಹಳ್ಳಿ ಆನಂದ್ ಒತ್ತಾಯಿಸಿದರು

ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಒತ್ತಾಯಿಸಿದ ಅವರು ಎಂಎಲ್ಸಿ ಸಿ.ಟಿ.ರವಿ ಅವರು ಅಶ್ಲೀಲ ಪದ ಬಳಸಿದ್ದರೆ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಬೇಕಾಗಿತ್ತು ಅದು ಬಿಟ್ಟು ಏಕಾಏಕಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಗೂಂಡಾಗಳ ರೀತಿಯಲ್ಲಿ ಹಲ್ಲೆಗೆ ಮುಂದಾಗಿದ್ದಾರೆ ಬೆಳಗಾವಿಯ ಸುವರ್ಣಸೌಧದ ಒಳಗೆ ಈ ರೀತಿಯಲ್ಲಿ ಒಬ್ಬ ಜನಪ್ರತಿನಿಧಿಯ ಮೇಲೆ ಹಲ್ಲೆ ನಡೆಯುತ್ತದೆ ಎಂದರೆ ಸಾಮಾನ್ಯ ಜನರು ನಿರೀಕ್ಷಿಸುವಂತಿಲ್ಲ ಪ್ರತಿ ಹಂತದಲ್ಲೂ ಭಯದ ವಾತಾವರಣವನ್ನು ರಾಜ್ಯದ ಕಾಂಗ್ರೆಸ್ ಸರ್ಕಾರವು ಸೃಷ್ಟಿಸಿದೆ ಎಂದು ಆರೋಪಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಬಂದ ನಂತರದಲ್ಲಿ ಪೊಲೀಸ್ ವ್ಯವಸ್ಥೆಯು ಹದಗೆಟ್ಟಿದೆ ಹಿಂದೆ ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಅಂದವರಿಗೆ ಈ ಕಾಂಗ್ರೆಸ್ ಸರ್ಕಾರವು ಯಾವುದೇ ಶಿಕ್ಷೆ ವಿಧಿಸಲಿಲ್ಲ ರಾಜ್ಯದಲ್ಲಿ ಕಾಂಗ್ರೆಸ್ ಬೆಂಬಲಿತ ಅಪರಾಧಿಗಳನ್ನು ಯಾವುದೇ ಷರತ್ತು ಇಲ್ಲದೆ ಬಿಡುಗಡೆ ಮಾಡಿದೆ ಆದರೆ ಸಿ.ಟಿ.ರವಿ ಅವರು ಆ ರೀತಿ ಹೇಳಿಕೆ ನೀಡಲಿಲ್ಲ ಎಂದು ಬಹಳ ಸ್ಪಷ್ಟವಾಗಿ ಹೇಳಿದ್ದರೂ ಯಾವುದೇ ತನಿಖೆ ಮಾಡದೇ ಕಾಂಗ್ರೆಸ್ ಗೂಂಡಾಗಳೊಂದಿಗೆ ಸರಕಾರವು ಕೂ ಶಾಮೀಲು ಆಗಿದೆ ಇಂತಹ ಘಟನೆಗಳು ನಡೆದಿವೆ ಎಂದು ಕೊಮ್ಮನಹಳ್ಳಿ ಆನಂದ್ ಖಂಡನೀಯ ವ್ಯಕ್ತಪಡಿಸಿದರು.

Ramesh Babu

Journalist

Recent Posts

ಯೂರಿಯಾ ಖರೀದಿಗೆ ಎಫ್‌ಐಡಿ ಕಡ್ಡಾಯ: ಎಕರೆಗೆ ತಿಂಗಳಿಗೆ ಒಂದು ಬ್ಯಾಗ್ ವಿತರಣೆ

ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…

2 hours ago

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

12 hours ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

14 hours ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

19 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

21 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

24 hours ago