ಕೋಲಾರ: ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ ಸಚಿವ ಸಿ.ಟಿ ರವಿ ಅವರ ಮೇಲೆ ಬೆಳಗಾವಿಯ ಸುವರ್ಣಸೌಧ ಅಧಿವೇಶನದ ಸಂದರ್ಭದಲ್ಲಿ ನಡೆದಿರುವ ಹಲ್ಲೆಯು ಖಂಡನೀಯವಾಗಿದ್ದು ಕೂಡಲೇ ತಪ್ಪಿತಸ್ಥರ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ರೈತ ಮೋರ್ಚಾ ಜಿಲ್ಲಾ ಅಧ್ಯಕ್ಷ ಕೊಮ್ಮನಹಳ್ಳಿ ಆನಂದ್ ಒತ್ತಾಯಿಸಿದರು
ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಒತ್ತಾಯಿಸಿದ ಅವರು ಎಂಎಲ್ಸಿ ಸಿ.ಟಿ.ರವಿ ಅವರು ಅಶ್ಲೀಲ ಪದ ಬಳಸಿದ್ದರೆ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಬೇಕಾಗಿತ್ತು ಅದು ಬಿಟ್ಟು ಏಕಾಏಕಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಗೂಂಡಾಗಳ ರೀತಿಯಲ್ಲಿ ಹಲ್ಲೆಗೆ ಮುಂದಾಗಿದ್ದಾರೆ ಬೆಳಗಾವಿಯ ಸುವರ್ಣಸೌಧದ ಒಳಗೆ ಈ ರೀತಿಯಲ್ಲಿ ಒಬ್ಬ ಜನಪ್ರತಿನಿಧಿಯ ಮೇಲೆ ಹಲ್ಲೆ ನಡೆಯುತ್ತದೆ ಎಂದರೆ ಸಾಮಾನ್ಯ ಜನರು ನಿರೀಕ್ಷಿಸುವಂತಿಲ್ಲ ಪ್ರತಿ ಹಂತದಲ್ಲೂ ಭಯದ ವಾತಾವರಣವನ್ನು ರಾಜ್ಯದ ಕಾಂಗ್ರೆಸ್ ಸರ್ಕಾರವು ಸೃಷ್ಟಿಸಿದೆ ಎಂದು ಆರೋಪಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಬಂದ ನಂತರದಲ್ಲಿ ಪೊಲೀಸ್ ವ್ಯವಸ್ಥೆಯು ಹದಗೆಟ್ಟಿದೆ ಹಿಂದೆ ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಅಂದವರಿಗೆ ಈ ಕಾಂಗ್ರೆಸ್ ಸರ್ಕಾರವು ಯಾವುದೇ ಶಿಕ್ಷೆ ವಿಧಿಸಲಿಲ್ಲ ರಾಜ್ಯದಲ್ಲಿ ಕಾಂಗ್ರೆಸ್ ಬೆಂಬಲಿತ ಅಪರಾಧಿಗಳನ್ನು ಯಾವುದೇ ಷರತ್ತು ಇಲ್ಲದೆ ಬಿಡುಗಡೆ ಮಾಡಿದೆ ಆದರೆ ಸಿ.ಟಿ.ರವಿ ಅವರು ಆ ರೀತಿ ಹೇಳಿಕೆ ನೀಡಲಿಲ್ಲ ಎಂದು ಬಹಳ ಸ್ಪಷ್ಟವಾಗಿ ಹೇಳಿದ್ದರೂ ಯಾವುದೇ ತನಿಖೆ ಮಾಡದೇ ಕಾಂಗ್ರೆಸ್ ಗೂಂಡಾಗಳೊಂದಿಗೆ ಸರಕಾರವು ಕೂ ಶಾಮೀಲು ಆಗಿದೆ ಇಂತಹ ಘಟನೆಗಳು ನಡೆದಿವೆ ಎಂದು ಕೊಮ್ಮನಹಳ್ಳಿ ಆನಂದ್ ಖಂಡನೀಯ ವ್ಯಕ್ತಪಡಿಸಿದರು.
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…