Categories: ಕೋಲಾರ

ಎಂಎಲ್ಸಿ ಸಿ.ಟಿ ರವಿ ಮೇಲೆ ಹಲ್ಲೆ ಆರೋಪ: ಬಿಜೆಪಿ ರೈತ ಮೋರ್ಚಾ ಖಂಡನೆ

ಕೋಲಾರ: ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ ಸಚಿವ ಸಿ.ಟಿ ರವಿ ಅವರ ಮೇಲೆ ಬೆಳಗಾವಿಯ ಸುವರ್ಣಸೌಧ ಅಧಿವೇಶನದ ಸಂದರ್ಭದಲ್ಲಿ ನಡೆದಿರುವ ಹಲ್ಲೆಯು ಖಂಡನೀಯವಾಗಿದ್ದು ಕೂಡಲೇ ತಪ್ಪಿತಸ್ಥರ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ರೈತ ಮೋರ್ಚಾ ಜಿಲ್ಲಾ ಅಧ್ಯಕ್ಷ ಕೊಮ್ಮನಹಳ್ಳಿ ಆನಂದ್ ಒತ್ತಾಯಿಸಿದರು

ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಒತ್ತಾಯಿಸಿದ ಅವರು ಎಂಎಲ್ಸಿ ಸಿ.ಟಿ.ರವಿ ಅವರು ಅಶ್ಲೀಲ ಪದ ಬಳಸಿದ್ದರೆ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಬೇಕಾಗಿತ್ತು ಅದು ಬಿಟ್ಟು ಏಕಾಏಕಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಗೂಂಡಾಗಳ ರೀತಿಯಲ್ಲಿ ಹಲ್ಲೆಗೆ ಮುಂದಾಗಿದ್ದಾರೆ ಬೆಳಗಾವಿಯ ಸುವರ್ಣಸೌಧದ ಒಳಗೆ ಈ ರೀತಿಯಲ್ಲಿ ಒಬ್ಬ ಜನಪ್ರತಿನಿಧಿಯ ಮೇಲೆ ಹಲ್ಲೆ ನಡೆಯುತ್ತದೆ ಎಂದರೆ ಸಾಮಾನ್ಯ ಜನರು ನಿರೀಕ್ಷಿಸುವಂತಿಲ್ಲ ಪ್ರತಿ ಹಂತದಲ್ಲೂ ಭಯದ ವಾತಾವರಣವನ್ನು ರಾಜ್ಯದ ಕಾಂಗ್ರೆಸ್ ಸರ್ಕಾರವು ಸೃಷ್ಟಿಸಿದೆ ಎಂದು ಆರೋಪಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಬಂದ ನಂತರದಲ್ಲಿ ಪೊಲೀಸ್ ವ್ಯವಸ್ಥೆಯು ಹದಗೆಟ್ಟಿದೆ ಹಿಂದೆ ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಅಂದವರಿಗೆ ಈ ಕಾಂಗ್ರೆಸ್ ಸರ್ಕಾರವು ಯಾವುದೇ ಶಿಕ್ಷೆ ವಿಧಿಸಲಿಲ್ಲ ರಾಜ್ಯದಲ್ಲಿ ಕಾಂಗ್ರೆಸ್ ಬೆಂಬಲಿತ ಅಪರಾಧಿಗಳನ್ನು ಯಾವುದೇ ಷರತ್ತು ಇಲ್ಲದೆ ಬಿಡುಗಡೆ ಮಾಡಿದೆ ಆದರೆ ಸಿ.ಟಿ.ರವಿ ಅವರು ಆ ರೀತಿ ಹೇಳಿಕೆ ನೀಡಲಿಲ್ಲ ಎಂದು ಬಹಳ ಸ್ಪಷ್ಟವಾಗಿ ಹೇಳಿದ್ದರೂ ಯಾವುದೇ ತನಿಖೆ ಮಾಡದೇ ಕಾಂಗ್ರೆಸ್ ಗೂಂಡಾಗಳೊಂದಿಗೆ ಸರಕಾರವು ಕೂ ಶಾಮೀಲು ಆಗಿದೆ ಇಂತಹ ಘಟನೆಗಳು ನಡೆದಿವೆ ಎಂದು ಕೊಮ್ಮನಹಳ್ಳಿ ಆನಂದ್ ಖಂಡನೀಯ ವ್ಯಕ್ತಪಡಿಸಿದರು.

Ramesh Babu

Journalist

Recent Posts

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌ ಜಾರಿಗೆ ಸಿಎಂ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌…

17 hours ago

ಸಂಭ್ರಮದ ಹಸಿ ಕರಗ ಮಹೋತ್ಸವ

ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…

19 hours ago

ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾ- ಬೆಂ ಗ್ರಾ ಜಿಪಂ ಸಿಇಒ ಡಾ. ವಾಸಂತಿ ಅಮರ್ ಬಿ.ವಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ 101 ಗ್ರಾಪಂ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾವಹಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಪಂ…

19 hours ago

ಒಳಮೀಸಲಾತಿ ಜಾರಿ ಸ್ವಾಗತಾರ್ಹ, ಹಲವು ವರ್ಷಗಳ ಹೋರಾಟಕ್ಕೆ ಸಿಕ್ಕ ಜಯ- ಕರ್ನಾಟಕ ಮಾದಾರ ಮಹಾಸಭಾ ಬೆಂ.ಗ್ರಾ ಜಿಲ್ಲಾಧ್ಯಕ್ಷ ಸುಬ್ಬರಾಜು

ದೊಡ್ಡಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ…

19 hours ago

Rain Update: ಬೆಂ ಗ್ರಾ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್

ಇಂದು ಸಂಜೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಜಿಲ್ಲಾ ವಿಪತ್ತು…

21 hours ago

ಹಸೆಮಣೆ ಏರಬೇಕಿದ್ದ ವರ ಅಪಘಾತದಲ್ಲಿ ಸಾವು: ಪ್ರೀವೆಡ್ಡಿಂಗ್ ಶೂಟ್ ಗೆ ವಧು ಕರೆತರಲು ತೆರಳಿದ್ದ ವೇಳೆ ಘಟನೆ

ಹಸೆಮಣೆ ಏರಬೇಕಿದ್ದ ವರ ಅಪಘಾತದಲ್ಲಿ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಮೂಗಲಿ ಗ್ರಾಮದ ಬಳಿ ಇಂದು…

1 day ago